Home namma chikmagalur ಕೃಷಿ ಪರಿಕರ ಸಂಘದಿಂದ ಯೋಧ-ರೈತರು-ವಿದ್ಯಾರ್ಥಿಗಳಿಗೆ ಸನ್ಮಾನ
namma chikmagalurchikamagalurHomeLatest News

ಕೃಷಿ ಪರಿಕರ ಸಂಘದಿಂದ ಯೋಧ-ರೈತರು-ವಿದ್ಯಾರ್ಥಿಗಳಿಗೆ ಸನ್ಮಾನ

Share
Share

ಚಿಕ್ಕಮಗಳೂರು: ಜಯನಗರ ಬಡಾವಣೆಯ ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸ ಂಘದ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಿವೃತ್ತ ವೀರಯೋಧರು, ರೈತರು ಮತ್ತು ವಿದ್ಯಾರ್ಥಿ ಗಳಿಗೆ ಗೌರವಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಈಚೆಗೆ ಆಚರಿಸಿಕೊಂಡರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್ ದೇಶದ ರಕ್ಷಣೆಗಾಗಿ ಪ್ರಾಣವನ್ನು ಲೆಕ್ಕಿಸದೇ ಗಡಿಯಲ್ಲಿ ನಮ್ಮ ಕಾಪಾಡುತ್ತಿರುವ ಯೋಧರಿಗೆ ದೊಡ್ಡ ನಮನ. ಅವರಿಂದಲೇ ಜನಸಾಮಾನ್ಯರು ನೆಮ್ಮದಿ, ಸಂತೋಷದಿಂದ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ದೇಶದ ಬೆನ್ನಲುಬು ರೈತರಿಂದಾಗಿ ಜನತೆ ಹಸಿನಿಂದ ಬಳಲದೇ ಹೊಟ್ಟೆತುಂಬಾ ಆಹಾರ ಸೇವಿಸಲು ಕಾರಣವಾಗಿದೆ. ರೈತರು ಮತ್ತು ಯೋಧರು ರಾಷ್ಟ್ರದ ಬಹುದೊಡ್ಡ ಸಂಪತ್ತು. ಈ ಮಹಾನೀಯರಿಂದಲೇ ದೇಶವು ಸುಭೀಕ್ಷವಾಗಿ ಮುಂದುವರೆಯಲು ಸಾಧ್ಯವಾಗಿದೆ ಎಂದರು.

ಆ ನಿಟ್ಟಿನಲ್ಲಿ ವೀರ ಯೋಧರು, ದೇಶಕ್ಕೆ ಅನ್ನ ನೀಡುವ ರೈತರು ಹಾಗೂ ಭವಿಷ್ಯದ ಸತ್ಪ್ರಜೆಗಳಾದ ವಿ ದ್ಯಾರ್ಥಿಗಳಿಗೆ ಗೌರವಿಸಲಾಗಿದೆ ಎಂದರು. ಇದೇ ವೇಳೆ ಸಂಘದ ಕಟ್ಟಡದಲ್ಲಿ ಅಧ್ಯಕ್ಷರು ೭೯ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲೆ ಜಂಟಿ ಕೃಷಿ ನಿರ್ದೇಶಕಿ ಹೆಚ್.ಎಲ್. ಸುಜಾತ ಸಂಘದ ಹಿರಿಯ ಉಪಾ ಧ್ಯಕ್ಷರಾದ ಉದಯ್ ಪೈ, ಟಿ.ಡಿ.ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಮನುಪ, ಖಜಾಂಚಿ ಶ್ರೀಕಾಂತ್ ಶೆಟ್ಟಿ, ತಾಲ್ಲೂಕು ಸಂಘದ ಕಾರ್ಯದರ್ಶಿಗಳಾದ ಶಂಕರ್‌ಮೂರ್ತಿ, ಗೌತಮ್‌ಪ್ರಭು, ಆನಂದ್, ಅಜ್ಜಂಪುರ ಆಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Agricultural Equipment Association felicitates soldiers farmers and students

 

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...