Home namma chikmagalur ಕೃಷಿ ಪರಿಕರ ಸಂಘದಿಂದ ಯೋಧ-ರೈತರು-ವಿದ್ಯಾರ್ಥಿಗಳಿಗೆ ಸನ್ಮಾನ
namma chikmagalurchikamagalurHomeLatest News

ಕೃಷಿ ಪರಿಕರ ಸಂಘದಿಂದ ಯೋಧ-ರೈತರು-ವಿದ್ಯಾರ್ಥಿಗಳಿಗೆ ಸನ್ಮಾನ

Share
Share

ಚಿಕ್ಕಮಗಳೂರು: ಜಯನಗರ ಬಡಾವಣೆಯ ಜಿಲ್ಲಾ ಕೃಷಿ ಪರಿಕರ ಮಾರಾಟಗಾರರ ಸ ಂಘದ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ನಿವೃತ್ತ ವೀರಯೋಧರು, ರೈತರು ಮತ್ತು ವಿದ್ಯಾರ್ಥಿ ಗಳಿಗೆ ಗೌರವಿಸುವ ಮೂಲಕ ಸ್ವಾತಂತ್ರ್ಯೋತ್ಸವವನ್ನು ಈಚೆಗೆ ಆಚರಿಸಿಕೊಂಡರು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಯೋಗೀಶ್ ದೇಶದ ರಕ್ಷಣೆಗಾಗಿ ಪ್ರಾಣವನ್ನು ಲೆಕ್ಕಿಸದೇ ಗಡಿಯಲ್ಲಿ ನಮ್ಮ ಕಾಪಾಡುತ್ತಿರುವ ಯೋಧರಿಗೆ ದೊಡ್ಡ ನಮನ. ಅವರಿಂದಲೇ ಜನಸಾಮಾನ್ಯರು ನೆಮ್ಮದಿ, ಸಂತೋಷದಿಂದ ಜೀವನ ಸಾಗಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ದೇಶದ ಬೆನ್ನಲುಬು ರೈತರಿಂದಾಗಿ ಜನತೆ ಹಸಿನಿಂದ ಬಳಲದೇ ಹೊಟ್ಟೆತುಂಬಾ ಆಹಾರ ಸೇವಿಸಲು ಕಾರಣವಾಗಿದೆ. ರೈತರು ಮತ್ತು ಯೋಧರು ರಾಷ್ಟ್ರದ ಬಹುದೊಡ್ಡ ಸಂಪತ್ತು. ಈ ಮಹಾನೀಯರಿಂದಲೇ ದೇಶವು ಸುಭೀಕ್ಷವಾಗಿ ಮುಂದುವರೆಯಲು ಸಾಧ್ಯವಾಗಿದೆ ಎಂದರು.

ಆ ನಿಟ್ಟಿನಲ್ಲಿ ವೀರ ಯೋಧರು, ದೇಶಕ್ಕೆ ಅನ್ನ ನೀಡುವ ರೈತರು ಹಾಗೂ ಭವಿಷ್ಯದ ಸತ್ಪ್ರಜೆಗಳಾದ ವಿ ದ್ಯಾರ್ಥಿಗಳಿಗೆ ಗೌರವಿಸಲಾಗಿದೆ ಎಂದರು. ಇದೇ ವೇಳೆ ಸಂಘದ ಕಟ್ಟಡದಲ್ಲಿ ಅಧ್ಯಕ್ಷರು ೭೯ನೇ ಸ್ವಾತಂತ್ರ್ಯ ದಿನಾಚರಣೆ ಧ್ವಜಾರೋಹಣ ನೆರವೇರಿಸಿದರು.

ಈ ಸಂದರ್ಭದಲ್ಲಿ ಜಿಲ್ಲೆ ಜಂಟಿ ಕೃಷಿ ನಿರ್ದೇಶಕಿ ಹೆಚ್.ಎಲ್. ಸುಜಾತ ಸಂಘದ ಹಿರಿಯ ಉಪಾ ಧ್ಯಕ್ಷರಾದ ಉದಯ್ ಪೈ, ಟಿ.ಡಿ.ತಿಮ್ಮಯ್ಯ, ಪ್ರಧಾನ ಕಾರ್ಯದರ್ಶಿ ಜಿ.ಸಿ.ಮನುಪ, ಖಜಾಂಚಿ ಶ್ರೀಕಾಂತ್ ಶೆಟ್ಟಿ, ತಾಲ್ಲೂಕು ಸಂಘದ ಕಾರ್ಯದರ್ಶಿಗಳಾದ ಶಂಕರ್‌ಮೂರ್ತಿ, ಗೌತಮ್‌ಪ್ರಭು, ಆನಂದ್, ಅಜ್ಜಂಪುರ ಆಶೋಕ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Agricultural Equipment Association felicitates soldiers farmers and students

 

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...