Home namma chikmagalur chikamagalur ಸಿದ್ದರಾಮಯ್ಯ ಪರವಾಗಿ ಅಹಿಂದ ಸಂಘಟನೆ ರಾಜ್ಯದಾದ್ಯಂತ ಹೋರಾಟ
chikamagalurHomeLatest Newsnamma chikmagalur

ಸಿದ್ದರಾಮಯ್ಯ ಪರವಾಗಿ ಅಹಿಂದ ಸಂಘಟನೆ ರಾಜ್ಯದಾದ್ಯಂತ ಹೋರಾಟ

Share
Share

ಚಿಕ್ಕಮಗಳೂರು: ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿರುವುದನ್ನು ನಾವು ವಿರೋಧಿಸುತ್ತೇವೆ’ ಎಂದು ಜಿಲ್ಲಾ ಅಹಿಂದ ಘಟಕದ ಅಧ್ಯಕ್ಷ ತ್ರಿಭುವನ್ ಎತ್ತಿನಮನೆ ತಿಳಿಸಿದರು.

ಸಿದ್ದರಾಮಯ್ಯ ಅವರನ್ನು ಕೈಬಿಟ್ಟರೆ ರಾಜ್ಯದಲ್ಲಿ ಅಹಿಂದ ವರ್ಗದ ಜನರ ಮನಸ್ಸಿಗೆ ಅತೀವ ನೋವುಂಟಾಗಲಿದೆ. ಸಿದ್ದರಾಮಯ್ಯ ಅಹಿಂದ ವರ್ಗದ ಶಕ್ತಿ. ಅವರ ರಾಜಕೀಯ ಜೀವನದಲ್ಲಿ ಯಾವುದೇ ಕಪ್ಪು ಚುಕ್ಕಿ ಇಲ್ಲದೆ ಆಡಳಿತ ನಡೆಸಿದ್ದಾರೆ ಎಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಹೇಳಿದರು.

ಸಿದ್ದರಾಮಯ್ಯ ಪರವಾಗಿ ಅಹಿಂದ ಸಂಘಟನೆ ರಾಜ್ಯದಾದ್ಯಂತ ಹೋರಾಟ ನಡೆಸಲಿದೆ. ಅಹಿಂದ ಸಮುದಾಯಗಳು ತಮ್ಮ ರಾಜಕೀಯ ನಿಲುವುಗಳ ಬಗ್ಗೆ ಮರು ಚಿಂತನೆ ನಡೆಸಬೇಕಾಗುತ್ತದೆ ಎಂದರು.

ಅಹಿಂದ ಸಂಘಟನೆ ಮುಖಂಡ ದಂಟರಮಕ್ಕಿ ಪುಟ್ಟೇಗೌಡ ಮಾತನಾಡಿ, ಸಿದ್ದರಾಮಯ್ಯ ಅವರು ರಾಜ್ಯದ ಉದ್ದಗಲಕ್ಕೂ ಕೆಲಸ ಮಾಡುವ ಮೂಲಕ ಪಕ್ಷ ಅಧಿಕಾರಕ್ಕೆ ಬರಲು ಕಾರಣರಾಗಿದ್ದಾರೆ. ಇವರ ಅಧಿಕಾರ ಅವಧಿಯಲ್ಲಿ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಬೇರೆ ಪಕ್ಷದವರು ಅನುಸರಿಸಿದ್ದಾರೆ. ಯಾವುದೇ ಕಳಂಕವಿಲ್ಲದೆ ಪಾರದರ್ಶಕ ಆಡಳಿತ ನಡೆಸಿದವರು ಸಿದ್ದರಾಮಯ್ಯ ಎಂದು ಹೇಳಿದರು.

ಅಹಿಂದ ಸಂಘಟನೆ ಕಾರ್ಯಾಧ್ಯಕ್ಷ ರಸೂಲ್ ಖಾನ್, ಮುಖಂಡರಾದ ಪ್ರಕಾಶ್‌ ರೈ ಕೆಂಪನಹಳ್ಳಿ, ಸುರೇಶ್ ಹಿರೇಮಗಳೂರು, ಸಿ.ಸಿ. ಮಧು, ಜಗದೀಶ್ ಕೋಟೆ ಭಾಗವಹಿಸಿದ್ದರು.

Ahinda organization protests across the state in favor of Siddaramaiah

Share

Leave a comment

Leave a Reply

Your email address will not be published. Required fields are marked *

Don't Miss

ಸಾವಿರಾರು ಮಂದಿಯಿಂದ ಬೃಹತ್ ಈದ್‌ಮಿಲಾದ್ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಪೈಗಂಬರ್ ೧೫೦೧ನೇ ಜನ್ಮದಿನದ ಅಂಗವಾಗಿ ಆಚರಿಸಲಾದ ಈದ್‌ಮಿಲಾದ್ ಹಬ್ಬದ ಪ್ರಯುಕ್ತ ನಗರದಲ್ಲಿ ಬುಧವಾರ ಸಾವಿರಾರು ಮಂದಿ ಮುಸ್ಲಿಂ ಬಾಂಧವರು ಬೃಹತ್ ಮೆರವಣಿಗೆ ನಡೆಸಿದರು. ನಗರದ ಅಂಡೇಛತ್ರದಿಂದ ಆರಂಭವಾದ...

ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಎಐಟಿಯುಸಿ ಬೃಹತ್ ಪ್ರತಿಭಟನೆ

ಚಿಕ್ಕಮಗಳೂರು:  ಆರನೇ ಗ್ಯಾರಂಟಿ ಜಾರಿಗೆ ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯ ರು ಮತ್ತು ಸಹಾಯಕಿಯರ ಫೆಡೆರೇಷನ್‌ನ ಜಿಲ್ಲಾ ಘಟಕವು ನಗರದ ಆಜಾದ್‌ಪಾರ್ಕ್ ವೃತ್ತದಲ್ಲಿ ನೂರಾ ರು ಮಹಿಳೆಯರು ಮಂಗಳವಾರ ಪ್ರತಿಭಟಿಸುವ ಮೂಲಕ ಭರವಸೆ...

Related Articles

ಮಾಜಿ ಸರ್ಜನ್  ಕುಮಾರ್ ನಾಯಕ್ ಇನ್ನಿಲ್ಲ

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲಾ ಮಲ್ಲೇಗೌಡ ಜನರಲ್ ಆಸ್ಪತ್ರೆಯ ಮಾಜಿ ಸರ್ಜನ್ ಕುಮಾರ್ ನಾಯಕ್ (67) ರಾತ್ರಿ...

ತಹಸೀಲ್ದಾರ್ ನಿಲುವಿನ ವಿರುದ್ಧ ಮಾಜಿ ಶಾಸಕ ಕುಮಾರಸ್ವಾಮಿ ಅಸಮಾಧಾನ

ಚಿಕ್ಕಮಗಳೂರು: ಚಿಕ್ಕಮಗಳೂರು ತಾಲೂಕು ಕಚೇರಿಯಲ್ಲಿ ತಹಸೀಲ್ದಾರ್ ಅವರು ಸಾರ್ವಜನಿಕರೊಂದಿಗೆ ದರ್ಪದಿಂದ ನಡೆದುಕೊಳ್ಳುತ್ತಿದ್ದಾರೆ ಎಂಬ ಆರೋಪ ಕೇಳಿಬಂದಿದ್ದು,...

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ...

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ...