Home namma chikmagalur ಎಐ ತಂತ್ರಜ್ಞಾನಗಳು ರೋಬೋಟ್‌ಗಳಿಗೆ ಬುದ್ದಿವಂತಿಕೆಗೆ ಪೂರಕ
namma chikmagalurchikamagalurHomeLatest News

ಎಐ ತಂತ್ರಜ್ಞಾನಗಳು ರೋಬೋಟ್‌ಗಳಿಗೆ ಬುದ್ದಿವಂತಿಕೆಗೆ ಪೂರಕ

Share
Share

ಚಿಕ್ಕಮಗಳೂರು: ಮೆಕ್ಯಾನಿಕಲ್ ಇಂಜಿನಿಯರಿಂಗ್ ರೋಬೋಟ್‌ಗಳ ಯಾಂತ್ರಿಕ ಭಾಗಗಳ ನ್ನು ವಿನ್ಯಾಸಿಸಲು ಹಾಗೂ ಎಐ ತಂತ್ರಜ್ಞಾನಗಳು ರೋಬೋಟ್‌ಗಳಿಗೆ ಬುದ್ಧಿವಂತಿಕೆ ನೀಡಲು ಪೂರಕವಾಗಿ ದೆ ಎಂದು ಎಐಟಿ ಕಾಲೇಜು ಪ್ರಾಂಶುಪಾಲ ಡಾ|| ಸಿ.ಟಿ.ಜಯದೇವ್ ಹೇಳಿದರು.

ನಗರದ ಎಐಟಿ ಕಾಲೇಜಿನ ಬಿಜಿಎಸ್ ಸಭಾಂಗಣದಲ್ಲಿ ಗುರುವಾರ ನಡೆದ ಮೆಕ್ಯಾನಿಕಲ್ ಇಂಜಿನಿ ಯರಿಂಗ್ ಹಾಗೂ ರೊಬೊಟಿಕ್ ಮತ್ತು ಎಐ ಇಂಜಿನಿಯರಿಂಗ್ ಯಾಂತ್ರಿಕ-೨೦೨೫ರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಕೃತಕ ಬುದ್ದಿಮತ್ತೆ, ಯಂತ್ರಕಲಿಕೆ ಮತ್ತು ಸಂವೇಧಕ ತಂತ್ರಜ್ಞಾನಗಳಲ್ಲಿನ ಪ್ರಗತಿಗಳು ರೋಬೊಟಿಕ್ಸ್ ನೊಳಗಿನ ಸಾಧ್ಯತೆಗಳು ಮತ್ತು ಅನ್ವಯಿಕೆಗಳನ್ನು ನಿರಂತರವಾಗಿ ವಿಸ್ತರಿಸುತ್ತದೆ. ಅಲ್ಲದೇ ಮುಂದುವರಿಸಲು ಒಂದು ರೋಮಾಂಚಕಾರಿ ಹಾಗೂ ಕ್ರಿಯಾತ್ಮಕ ಕ್ಷೇತ್ರವಾಗಿದೆ ಎಂದು ತಿಳಿಸಿದರು.

ರೋಬೋಟಿಕ್ ವ್ಯವಸ್ಥೆಗಳ ಪರಿಕಲ್ಪನೆ, ಅಭಿವೃದ್ದಿ ಮತ್ತು ಅನುಷ್ಟಾನದಲ್ಲಿ ಪರಿಣತಿ, ವ್ಯಾಪಕ ಕೌಶಲ್ಯ ಹೊಂದಿರುವ ವೃತ್ತಿಪರ, ಸ್ವತಂತ್ರ್ಯವಾಗಿ ಅಥವಾ ಕನಿಷ್ಟ ಮಾನವ ಹಸ್ತಕ್ಷೇಪದೊಂದಿಗೆ ವ್ಯಾಪಕ ಶ್ರೇಣಿಯ ಕಾರ್ಯಗಳನ್ನು ನಿರ್ವಹಿಸುವ ಸಾಮರ್ಥ್ಯವನ್ನು ಹೊಂದಿರುವ ಬುದ್ದಿವಂತ ಯಂತ್ರಗಳನ್ನು ರಚಿಸುವುದು ಪ್ರಾಥಮಿಕ ಉದ್ದೇಶವಾಗಿದೆ ಎಂದರು.

ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಅತ್ಯಂತ ಹಳೆಯ ಮತ್ತು ಬಹುಮುಖ ವಿಭಾಗಗಳಲ್ಲಿ ಒಂದಾ ಗಿದೆ. ಭವಿ?ದ ವಾಹನಗಳನ್ನು ವಿನ್ಯಾಸಗೊಳಿಸುವುದು, ಇಂಧನ ವ್ಯವಸ್ಥೆಗಳನ್ನು ಸುಧಾರಿಸುವುದು, ರೋಬೋಟಿಕ್ ಯಾಂತ್ರೀಕರಣವನ್ನು ಅಭಿವೃದ್ಧಿಪಡಿಸುವುದು, ಮೆಕ್ಯಾನಿಕಲ್ ಎಂಜಿನಿಯರಿಂಗ್ ವ್ಯಾಪ್ತಿ ಯು ಊಹಿಸಬಹುದಾದ ಉದ್ಯಮವಾಗಿದೆ ಎಂದು ತಿಳಿಸಿದರು.

ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ|| ಜಿ.ಎಂ.ಸತ್ಯನಾರಾಯಣ್ ಮಾತನಾಡಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ರೊಬೊಟಿಕ್ ಕೋರ್ಸ್ ರೊಬೊಟಿಕ್ಸ್ ವಿನ್ಯಾಸ, ಪ್ರೋಗ್ರಾಮಿಂಗ್ ಮತ್ತು ಅನು?ನದ ಸಮಗ್ರ ತಿಳುವಳಿಕೆಯನ್ನು ನೀಡುತ್ತದೆ. ವೈವಿಧ್ಯಮಯ ತಾಂತ್ರಿಕ ಪಾತ್ರಗಳಿಗೆ ಕೌಶಲ್ಯ ಅಭಿ ವೃದ್ಧಿಯನ್ನು ಬೆಳೆಸುತ್ತದೆ ಎಂದರು.

ಮಾಹಿತಿ ತಂತ್ರಜ್ಞಾನದ ಮುಖ್ಯಸ್ಥ ಡಾ|| ಎಸ್.ಸಂಪತ್ ಮಾತನಾಡಿ ಇಂದಿನ ಆಧುನಿಕತೆ ಯುಗದಲ್ಲಿ ಪ್ರಪಂಚವು ಹೊಸ ಹೊಸ ತಂತ್ರಜ್ಞಾನಗಳಿಂದ ಪ್ರತಿ ಕ್ಷೇತ್ರದಲ್ಲೂ ಪ್ರಗತಿಯನ್ನು ಕಾಣುತ್ತಿದೆ. ಆ ನಿಟ್ಟಿನಲ್ಲಿ ವಿದ್ಯಾರ್ಥಿಗಳು ತಂತ್ರಜ್ಞಾನಗಳೆಡೆ ಹೆಚ್ಚು ಆಸಕ್ತಿ ವಹಿಸುವುದನ್ನು ಕಲಿಯಬೇಕಿದೆ ಎಂದು ತಿಳಿಸಿದರು.
ಇದೇ ವೇಳೆ ವಿವಿಧ ಕ್ರೀಡಾಕೂಟ, ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂ ಗ್‌ನಲ್ಲಿ ಅತ್ಯುತ್ತಮವಾಗಿ ತೇರ್ಗಡೆ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಗೌರವಿಸಲಾಯಿತು. ಬಳಿಕ ವಿದ್ಯಾ ರ್ಥಿಗಳಿದ ಸ್ವಅಭಿಪ್ರಾಯವನ್ನು ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ವಿದ್ಯುತ್ ಮತ್ತು ವಿದ್ಯುನ್ಮಾನ ವಿಭಾಗದ ಮುಖ್ಯಸ್ಥ ಡಾ|| ವೀರೇಂದ್ರ, ಆಟಿಫಿಶಿಯ ಲ್ ಇಂಟಲಿಜೆಂಟ್ ಮತ್ತು ಮೆಷಿನ್ ಲರ್ನಿಂಗ್ ವಿಭಾಗದ ಮುಖ್ಯಸ್ಥೆ ಡಾ|| ಎಂ.ಆರ್.ಸುನೀತಾ, ಸಿವಿಲ್ ಇಂಜಿನಿಯರ್ ಮುಖ್ಯಸ್ಥ ಡಾ|| ಕಿರಣ್, ಡಾಟಾ ಸೈನ್ಸ್ ಮುಖ್ಯಸ್ಥ ಡಾ|| ಎಂ.ಜಿ.ಆದರ್ಶ ಉಪಸ್ಥಿತರಿದ್ದರು. ವಿದ್ಯಾರ್ಥಿನಿ ರೇಷ್ಮಾ ನಿರೂಪಿಸಿದರು. ವಿನುತ ಸಂಗಡಿಗರು ಪ್ರಾರ್ಥಿಸಿದರು. ಡಾ|| ಜಿ.ಎಂ.ಸತ್ಯನಾರಾಯಣ್ ಸ್ವಾಗತಿಸಿದರು.

AI technologies help robots become more intelligent

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...