Home namma chikmagalur ajjampura Ajjampur railway station:ರೈಲ್ವೆ ಅಧಿಕಾರಿಗಳ ದರ್ಪ- ಅಜ್ಜಂಪುರ ರೈಲು ನಿಲ್ದಾಣದ ಅವ್ಯವಸ್ಥೆ
ajjampuraLatest Newsnamma chikmagalur

Ajjampur railway station:ರೈಲ್ವೆ ಅಧಿಕಾರಿಗಳ ದರ್ಪ- ಅಜ್ಜಂಪುರ ರೈಲು ನಿಲ್ದಾಣದ ಅವ್ಯವಸ್ಥೆ

Share
Share

ಚಿಕ್ಕಮಗಳೂರು: ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ತಾಲ್ಲೂಕಿನ ಅಜ್ಜಂಪುರದ ರೈಲು ನಿಲ್ದಾಣದ ಅಭಿವೃದ್ಧಿಗೆ ಸ್ಥಳೀಯರು ಒತ್ತಾಯ ಮಾಡುತ್ತಿದ್ದಾರೆ. ಆದರೆ ರೈಲ್ವೆ ಅಧಿಕಾರಿಗಳು ಕೇಳಿಸಿದರು ಕೆಪ್ಪರಂತೆ ದರ್ಪ ತೋರುತ್ತಿದ್ದಾರೆ ಎಂದು ಜೆಡಿಎಸ್ ಮುಖಂಡ ಎಸ್,ಶಿವಾನಂದ ದೂರಿದ್ದಾರೆ.

ಅಜ್ಜಂಪುರ ರೈಲ್ವೆ ನಿಲ್ದಾಣದಿಂದ ಉತ್ತಮ ಅದಾಯ ಇಲಾಖೆ ಬರುತ್ತಿದ್ದರು ಅಗತ್ಯ ಮೂಲಭೂತ ಸೌಕರ್ಯಗಳನ್ನು ಒದಗಿಸದೆ ಜನರಿಗೆ ತೊಂದರೆ ಆಗುತ್ತಿದೆ ಎಂದ ಅವರು ಅಧಿಕಾರಿಗಳ ಅಸಡ್ಡೆಯಿಂದ ಯಾವುದೇ ಕೆಲಸಗಳು ಆಗುತ್ತಿಲ್ಲ ಎಂದು ದೂರಿ ಲೋಕಸಭಾ ಸದಸ್ಯ ಶ್ರೀನಿವಾಸ್ ಪೂಜಾರಿಯನ್ನು ರೈಲ್ವೆ ನಿಲ್ದಾಣಕ್ಕೆ ಕರೆದುಕೊಂಡು ಹೋಗಿ ಸಮಸ್ಯೆಗಳನ್ನು ವಿವರಿಸಿದರು ಅಧಿಕಾರಿಗಳು ಡೊಂಟ್ ಕೇರ್ ಎನ್ನುತ್ತಿದ್ದಾರೆ.

ರೈಲು ನಿಲ್ದಾಣದಲ್ಲಿ ಶೌಚಾಲಯವಿಲ್ಲ,ವಿಶ್ರಾಂತಿ ಗೃಹ ಇಲ್ಲ, ಕಾಂಪೌಂಡ್ ಕಟ್ಟಿಲ್ಲ ಇನ್ನೂ ಪ್ರಯಾಣಿಕರು ರೈಲು ಹತ್ತಿ ಇಳಿಯಲು ಹಲವಾರು ವರ್ಷಗಳಿಂದ ಕಷ್ಟವಾಗುತ್ತಿದೆ ಈ ಬಗ್ಗೆ ಗಮನಹರಿಸಿಲ್ಲ ಹೇಳಿ,ಹೇಳಿ ಪತ್ರ ಬರೆದು ಸಾಕಾಗಿದೆ ಇನ್ನೂ ರೈಲು ತಡೆದು ಪ್ರತಿಭಟಿಸಬೇಕು ಎನ್ನುತ್ತಾರೆ ಸ್ಥಳೀಯ ಜನ.

ರಾಜ್ಯದ ವಿ.ಸೋಮಣ್ಣ ರೈಲ್ವೆ ಸಚಿವರಾಗಿರುವುದರಿಂದ ಕಣ್ಣು,ಮೂಗು,ಕಿವಿಯಿಲ್ಲದ ಅಧಿಕಾರಿಗಳಿಗೆ ನೆತ್ತಿ ಮೇಲೆ ಬಡಿದು ಮೂಲಭೂತ ಸೌಕರ್ಯಗಳನ್ನು ಒದಗಿಸುವರೇ ಕಾದು ನೋಡೋಣ.

Ajjampur railway station

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

ಕೇಬಲ್ ಕಳ್ಳರೆಂದು ಶಂಕಿಸಿ ಮೂವರ ಮೇಲೆ ಹಲ್ಲೆ

ಕಡೂರು: ಪಂಪ್‌ಸೆಟ್‌ ಮೋಟಾರ್‌ ಕೇಬಲ್‌ ಕಳ್ಳರೆಂದು ಅನುಮಾನಿಸಿ ಮೂವರು ಯುವಕರ ಮೇಲೆ ಗುಂಪೊಂದು ಗಂಭೀರವಾಗಿ ಹಲ್ಲೆ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಧ್ವಜಾರೋಹಣದ ಕೆಲವೇ ಗಂಟೆಗಳಲ್ಲಿ ಕೆಳಗಿಳಿಸಿದ ರಾಷ್ಟ್ರಧ್ವಜ …?

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದೇ ಚಿಕ್ಕಮಗಳೂರಿನಲ್ಲಿ ರಾಷ್ಟ್ರಧ್ವಜಕ್ಕೆ ಸಂಬಂಧಿಸಿದಂತೆ ವಿವಾದವೊಂದು ಭುಗಿಲೆದ್ದಿದ್ದು, ಕರ್ನಾಟಕ ರಾಜ್ಯ ರೈತ ಸಂಘದ...