Home namma chikmagalur ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !
namma chikmagalurchikamagalurLatest News

ದೊಡ್ಡ ಮನೆ ಡಿಚ್ಚಿ ಯಾರಿಗೆ – ಕೈ ಕಸರತ್ತು ? ಬಿಜೆಪಿಯಲ್ಲಿ ತಳಮಳ !

Share
Share

ಅಜ್ಜಂಪುರ: ಪಟ್ಟಣ ಪಂಚಾಯತಿ ಚುನಾವಣೆ ನಡೆದು ಇಪ್ಪತ್ತು ದಿನಗಳಾಗಿದೆ ಆದರೆ ಅಧ್ಯಕ್ಷ/ ಉಪಾಧ್ಯಕ್ಷರ ಚುನಾವಣೆ ವಿಳಂಬ ಮಾಡುತ್ತಿರುವುದು ಕಾಂಗ್ರೆಸ್ ನ ತಂತ್ರಗಾರಿಕೆ ಎಂದು ಬಿಜೆಪಿಯವರ ಆರೋಪ.

ರಾಜಕೀಯವಾಗಿ ದೊಡ್ಡ ಮನೆ ಎಂದು ಕರೆಯಿಸಿಕೊಳ್ಳುವವರು ಕೊಟ್ಟ ಡಿಚ್ಚಿಗೆ ಕಾಂಗ್ರೆಸ್ ಅಪ್ಪಚ್ಚಿಯಾಯಿತು ಎನ್ನುವವರಿಗೆ ಆಗಾದರೆ 2 ಮತ್ತು3 ವಾರ್ಡ್‌ನಲ್ಲಿ ದೊಡ್ಡ ಮನೆಯವರು ಏಕೆ ಡಿಚ್ಚಿ ಹೊಡೆಯಲಿಲ್ಲ ಎಂದು ಪ್ರಶ್ನೆ ಮಾಡುವವರು ಉಂಟು ಜೊತೆಗೆ ಅಧ್ಯಕ್ಷ ಸ್ಥಾನದ ಚುನಾವಣೆಯಲ್ಲಿ ಯಾರಿಗೆ ಡಿಚ್ಚಿ ಹೊಡೆತರೋ ಎಂದು ಲೆಕ್ಕಾಚಾರದಲ್ಲಿ ತೊಡಗಿದ್ದಾರೆ.

ಪಟ್ಟಣ ಪಂಚಾಯತಿ ಚುನಾವಣೆಯಲ್ಲಿ ಬಿಜೆಪಿ ಆರು ಸ್ಥಾನ ಗಳಿಸಿದರೆ ಕಾಂಗ್ರೆಸ್ ಐದು ಸ್ಥಾನ ಗಳಿಸಿದೆ. ಬಿಜೆಪಿಗೆ ಸರಳ ಬಹುಮತ ಇದೆ ಆದರೆ ಕಾಂಗ್ರೆಸ್ ಶಾಸಕ ಶ್ರೀನಿವಾಸ್ ಏನಾದರೂ ಮಾಡಿ ಆಡಳಿತಕ್ಕೆ ಬರಬೇಕು ಎಂದು ಲೆಕ್ಕಾಚಾರದೊಂದಿಗೆ ಚುನಾವಣೆ ಇದುವರೆಗೆ ನಡೆಯದಂತೆ ನೋಡಿಕೊಂಡಿದ್ದಾರೆ ಎಂದು ಗೆದ್ದ ಸದಸ್ಯರುಗಳ ಅಳಲು ಕಾಂಗ್ರೆಸ್ ಗೆ ಡಿಚ್ಚಿಯಿಂದ ಬಿಜೆಪಿಗೆ ಹೊಡೆಸ ಬೇಕು ಎಂಬ ಪ್ರಯತ್ನ ಮುಖ್ಯಮಂತ್ರಿ ಮತ್ತು ನಗರಾಭಿವೃದ್ಧಿ ಸಚಿವ ಸುರೇಶ್ ರವರಿಂದ ಒತ್ತಡ ತರಿಸುವುದು ಸೇರಿದಂತೆ ಖರೀದಿ ಲೆಕ್ಕಾಚಾರಗಳು ನಡೆಯುತ್ತಿವೆ ಎಂಬ ಸುದ್ದಿಗಳು ಹರಿದಾಡುತ್ತಿವೆ.

ಕಾಂಗ್ರೆಸ್ ಬಿಡಲು ಎ.ಟಿ.ಶ್ರೀನಿವಾಸ್ ತೀರ್ಮಾನ ಮಾಡಿದ ಬಳಿಕ ಶಾಸಕ ಶ್ರೀನಿವಾಸ್ ಗೆ ದಿಗಿಲಾಗಿ ಅಜ್ಜಂಪುರದ ಹನ್ನೊಂದು ವಾರ್ಡ್ ಗಳ ಬಿಫಾರಂ ತಂದು ಕೊಡಲು ಹೋದಾಗಲೇ ನೀರಿಳಿಸಿ ಕಳುಹಿಸಿದವರು ಮತ್ತೆ ಕಾಂಗ್ರೆಸ್ ಗೆ ಹೋಗಲು ಸಾಧ್ಯವಿಲ್ಲ ಎನ್ನುತ್ತಾರೆ.

ಬಿಜೆಪಿಯರು ಎಚ್ಚರಿಕೆ ವಹಿಸಿ ಈಗಾಗಲೇ ಕೆಲ ಸದಸ್ಯರನ್ನು ಪ್ರವಾಸ ಕಳುಹಿಸಿದ್ದಾರೆ.ತಂತ್ರಕ್ಕೆ ಪ್ರತಿ ತಂತ್ರ ಹೆಣೆಯುತ್ತಿದ್ದಾರೆ.ಅಧ್ಯಕ್ಷ ಸ್ಥಾನ ಬಿಸಿಎಂ,ಉಪಾಧ್ಯಕ್ಷ ಸ್ಥಾನ ಎಸ್.ಸಿಗೆ ಮೀಸಲಾಗಿದ್ದು ಬಿಜೆಪಿಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಪ್ರಬಲವಾದ ಆಕಾಂಕ್ಷಿಗಳು ಇರುವುದು ತಲೆಬಿಸಿಯಾಗಿದೆ.ಕಾಂಗ್ರೆಸ್ ನಿಂದ ಬಿಜೆಪಿ ಸೇರಿರುವ ಕವಿತಾ ಕೇಶವ ಮತ್ತು ಮೂಲತಃ ಬಿಜೆಪಿಯ ಮುಖಂಡ ಎರಡನೇ ಬಾರಿ ಗೆದ್ದಿರುವ ರಂಗಸ್ವಾಮಿ ಪ್ರಬಲ ಆಕಾಂಕ್ಷಿಗಳಾಗಿದ್ದು ಇಬ್ಬರಿಗೂ ಅಧಿಕಾರ ಹಂಚಿಕೆಯಾಗ ಬಹುದು. ಆದರೆ ಮೊದಲು ಯಾರಿಗೆ ಅವಕಾಶ ಎನ್ನುವುದು ತಲೆನೋವು ತರಬಹುದು. ಇದರ ಲಾಭ ಪಡೆಯಲು ಕಾಂಗ್ರೆಸ್ ನವರು ಕಾಯುತ್ತಿದ್ದಾರೆ ಎಂಬ ಮಾತುಗಳು ಹರಿದಾಡುತ್ತಿವೆ.

ಈಗಾಗಲೇ ಉಪಾಧ್ಯಕ್ಷ ಸ್ಥಾನ ಕಾಂಗ್ರೆಸ್ ನ ಅಣ್ಣಯ್ಯಗೆ ಮೀಸಲಾಗಿದೆ.ಏಕೆಂದರೆ ಎಸ್.ಸಿ.ಮೀಸಲು ಕ್ಷೇತ್ರದಿಂದ ಗೆದ್ದಿರುವ ಏಕೈಕ ಅಭ್ಯರ್ಥಿ. ಪಟ್ಟಣ ಪಂಚಾಯತಿ ಅಧ್ಯಕ್ಷ ಗದ್ದುಗೆ ಹಿಡಿಯಲು ಕೈ ಮತ್ತು ಕಮಲ ಪಕ್ಷದವರು ಬಿಗಿ ಪಟ್ಟಣಗಳನ್ನು ಹಾಕುತ್ತಿದ್ದಾರೆ ಬಿಜೆಪಿಯವರು ಮೈ ಮರೆತರೆ ಕೈಗೆ ತುತ್ತಾಗುವುದು ಖಚಿತ. ರಾಜಕೀಯ ನಿಂತ ನೀರಲ್ಲಾ ಯಾವ ಕಡೆ ಹರಿಯುತ್ತದೆ ಎಂಬದು ನಿಗೂಢ .

Ajjampur town panchayat election

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಯಲ್ಲಿ ಮಳೆಯ ಆರ್ಭಟ – ಕಾಫಿಬೆಳೆ ನಾಶ – ರಸ್ತೆ ಹುಡುಕಾಡುವ ಕಾಟ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಕಳೆದ ಒಂದು ತಿಂಗಳಿಂದ ಎಡ ಬಿಡದೆ ಮಳೆ ಸುರಿಯುತ್ತಿದೆ ಅದರಲ್ಲೂ ಮಲೆನಾಡು ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ. ಮಳೆಯ ಆರ್ಭಟದಿಂದ ಕಾಫಿ ಕೊಳೆಯಲು ಆರಂಭವಾಗಿದೆ ಎಂದು ಕಾಫಿ ಬೆಳೆಗಾರರ...

12ನೇ ಶತಮಾನದಲ್ಲೇ ಕನ್ನಡಕ್ಕೆ ವಚನಾಕಾರಿಂದ ಬಹಳ ದೊಡ್ಡ ಕೊಡುಗೆ

ಚಿಕ್ಕಮಗಳೂರು: ವಚನಾಕಾರರು ಕನ್ನಡಕ್ಕೆ ಬಹಳ ದೊಡ್ಡ ಕೊಡುಗೆಯನ್ನು ೧೨ನೇ ಶತಮಾನದಲ್ಲೇ ನೀಡಿದ್ದಾರೆ. ಜಗಜ್ಯೋತಿ ಬಸವಣ್ಣನವರು ಕೊಟ್ಟ ಸಾಂಸ್ಕೃತಿಕ ಚಳುವಳಿ ಬದುಕಿನ ಅನುಭವಗಳು ಅನುಭಾವವಾಗಿ ಜನರ ಆಡುಭಾಷೆಯಲ್ಲಿ ಸಾಹಿತ್ಯ ರಚಿಸಿ ಇಡೀ ಜಗತ್ತಿಗೆ ನೈತಿಕ...

Related Articles

ಜನರಿಗೆ ವಾಸ್ತವ ಸಂಗತಿ ಕಾಂಗ್ರೆಸ್ ಪ್ರಚಾರ ಸಮಿತಿ ರಾಜ್ಯಾದ್ಯಂತ ಪ್ರವಾಸ

ಚಿಕ್ಕಮಗಳೂರು : ಕಾಂಗ್ರೆಸ್ ಸರ್ಕಾರ ರಾಜ್ಯದ ಜನರಿಗೆ ನೀಡುತ್ತಿರುವ ಜನಪರ ಯೋಜನೆಗಳ ಪ್ರಚಾರ ಕೈಗೊಳ್ಳುವುದರೊಂದಿಗೆ ವಿರೋಧ...

ನನ್ನ ವಿರುದ್ಧ ಸುಳ್ಳು ಆರೋಪ ಮಾಡಿದ ಆರೋಪಿಗಳನ್ನು ಗಡಿಪಾರು ಮಾಡಬೇಕು

ಚಿಕ್ಕಮಗಳೂರು: ‘ಅಲ್ಲಂಪುರ ನಿವಾಸಿ ಓಂಕಾರಮೂರ್ತಿ ಮೇಲಿನ ಹಲ್ಲೆ ಸಂಬಂಧ ಪೊಲೀಸರು ತನಿಖೆ ನಡೆಸಿ ನ್ಯಾಯಾಲಯಕ್ಕೆ ‘ಬಿ’...

ಅಂಬೇಡ್ಕರ್ ಸಂವಿಧಾನದ ತತ್ವ ಹೊಂದಿರುವ ಪಕ್ಷ ಕಾಂಗ್ರೆಸ್

ಚಿಕ್ಕಮಗಳೂರು:  ಅಂಬೇಡ್ಕರ್ ಸಂವಿಧಾನದ ತತ್ವವನ್ನು ಹೊಂದಿರುವ ಪಕ್ಷ ಕಾಂ ಗ್ರೆಸ್. ಚುನಾವಣೆಗೆ ಮಾತ್ರ ಪಕ್ಷ ಸೀಮಿತವಾಗದೇ...

ಕಸಬಾ-3 ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟ

ಚಿಕ್ಕಮಗಳೂರು: ಕ್ರೀಡಾಸಕ್ತಿ ಕೇವಲ ಶಾಲಾವಧಿಯಲ್ಲಿ ಮಾತ್ರ ಇರದೆ ಜೀವನ ಪರ್ಯಂತ ಇರಬೇಕೆಂದು ಕ್ಷೇತ್ರ ಶಿಕ್ಷಣಾಧಿಕಾರಿ ರುದ್ರಪ್ಪ...