Home namma chikmagalur ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ
namma chikmagalurchikamagalurHomeLatest News

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

Share
Share

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ ಪೈಪೋಟಿ ಪ್ರಾರಂಭವಾಗಿದೆ.

ಗ್ರಾಮ ಪಂಚಾಯತಿಯನ್ನು ಮೇಲ್ದರ್ಜೆಗೇರಿಸಿ ಪಟ್ಟಣ ಪಂಚಾಯತಿಯನ್ನಾಗಿಸಿದ್ದು ಕಳೆದ ಏಳು ವರ್ಷಗಳಿಂದ ಕೋರ್ಟ್ ಕಛೇರಿ ಎಂದು ಚುನಾವಣೆ ನಡೆದಿರಲಿಲ್ಲ. ಗ್ರಾಮ ಪಂಚಾಯತಿಯಲ್ಲಿ 29 ವಾರ್ಡ್‌ ಗಳು ಇದ್ದವು ಪಟ್ಟಣ ಪಂಚಾಯತಿಯಲ್ಲಿ 11 ವಾರ್ಡ್‌ ಗಳಿವೆ .
ಮಳೆ ಅಭಾವದಿಂದ ಜನ ಸಂಕಷ್ಟದಲ್ಲಿದ್ದಾರೆ.ಈರುಳ್ಳಿ ಕೈಗೆ ಸಿಕ್ಕಿದರೆ ಜನರಿಗೆ ಅನುಕೂಲವಾಗುತಿತ್ತು ಎನ್ನುತ್ತಿರುವಾಗ ಚುನಾವಣೆಯ ಕಾವು ಏರುವುದು ಖಚಿತ.ಈಗಾಗಲೇ ಒಂದಿಬ್ಬರು ಚುನಾವಣೆ ಪ್ರಚಾರ ನಡೆಸುತ್ತಿದ್ದಾರೆ.

ಕಾಂಗ್ರೆಸ್ ನಿಂದ ಜಿ.ನಟರಾಜ್,ಜೋಗಿಪ್ರಕಾಶ್,ಮಸೂದ್ ಅಹ್ಮದ್ ಮತ್ತು ರಿಯಾಜ್ ಅಹ್ಮದ್ ಚುನಾವಣೆ ಗೆ ಸ್ಪರ್ಧೆಸುತ್ತಾರೆ.ಬಿಜೆಪಿಯಿಂದ ಗಿರೀಶ್ ಚವಾಣ್,ರಂಗಸ್ವಾಮಿ, ಮಧುಸೂದನ್ ಮತ್ತು ಜನತಾದಳದ ಎಸ್,ಶಿವಾನಂದ್ ಚುನಾವಣಾ ಅಖಾಡಕ್ಕೆ ಇಳಿಯಲು ತಯಾರಿ ನಡೆಸಿದ್ದಾರೆ. ಐದಾರು ವಾರ್ಡ್ ಗಳಲ್ಲಿ ನೇರ, ನೇರಾ ಸ್ಪರ್ಧೆ ಏರ್ಪಟ್ಟರೆ ಕೆಲವು ವಾರ್ಡ್ ಗಳಲ್ಲಿ ಹೆಚ್ಚಿನ ಸ್ಪರ್ಧಿಗಳು ಇರುವುದು ಖಚಿತ.

ಬಿಜೆಪಿ ಮತ್ತು ದಳ ಹೊಂದಾಣಿಕೆ ಮಾಡಿಕೊಳ್ಳುವದು ಖಚಿತ. ಕ್ಷೇತ್ರದಲ್ಲಿ ಕಾಂಗ್ರೆಸ್ ಶಾಸಕರು ಇರುವುದರಿಂದಾಗಿ ಪ್ರತಿಷ್ಟೆ ಪ್ರಶ್ನೆಯಾಗಿದೆ.

Ajjampur town panchayat election is pending

Share

Leave a comment

Leave a Reply

Your email address will not be published. Required fields are marked *

Don't Miss

ಕಾಫಿನಾಡಿನಲ್ಲಿ ಮುಂದಿನ ಮೂರು ದಿನಗಳ ಭಾರೀ ಮಳೆ ಸಾಧ್ಯತೆ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಸಾರ್ವಜನಿಕರು ಹಾಗೂ ಪ್ರವಾಸಿಗರು ಹೆಚ್ಚಿನ ಎಚ್ಚರಿಕೆ ವಹಿಸುವಂತೆ ಜಿಲ್ಲಾಡಳಿತ ಮಹತ್ವದ ಸೂಚನೆ ನೀಡಿದೆ. ಭಾರತೀಯ ಹವಾಮಾನ ಇಲಾಖೆ...

ಹಿಂಬದಿಯಿಂದ ಬಂದ ಬೈಕ್ ಡಿಕ್ಕಿಗೆ ಕೂಲಿ ಕಾರ್ಮಿಕ ಸಾವು

ಶೃಂಗೇರಿ: ರಾಷ್ಟ್ರೀಯ ಹೆದ್ದಾರಿ 169ರ ಶೌಕತ್ ಅಲಿ ಗ್ಯಾರೇಜ್ ಮುಂಭಾಗದಲ್ಲಿ ನಡೆದುಕೊಂಡು ಹೋಗುತ್ತಿದ್ದ ಮಂಜುನಾಥ್ ಎಂಬ ಕೂಲಿ ಕಾರ್ಮಿಕನಿಗೆ ಹಿಂಬದಿಯಿಂದ ಬಂದ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಅವರು ಮೃತಪಟ್ಟಿದ್ದಾರೆ. ಜೂನ್...

Related Articles

ದೇವಸ್ಥಾನದಲ್ಲೇ ಮಗುವನ್ನು ಮರೆತುಹೋದ ಪೋಷಕರು!

ಕಳಸ: ಪಟ್ಟಣದ ಶ್ರೀಕಲಶೇಶ್ವರ ಸ್ವಾಮಿ ದೇವಸ್ಥಾನಕ್ಕೆ ಬಂದಿದ್ದ ದಂಪತಿ, ದೇವರ ದರ್ಶನ ಪಡೆದು ಹಿಂದಿರುಗುವಾಗ ತಮ್ಮ...

ಗೂಡ್ಸ್‌ ವಾಹನ ಡಿಕ್ಕಿಗೆ ಯುವಕ ಸಾವು

ಕಡೂರು: ಸಖರಾಯಪಟ್ಟಣ ಸಮೀಪದ ಹಿರೇಗೌಜ ಗೇಟ್ ಬಳಿ ನಡೆದ ರಸ್ತೆ ಅಪ ಘಾತದಲ್ಲಿ ಗೂಡ್ಸ್ ವಾಹನ...

ಮಳಲೂರು ಏತ ನೀರಾವರಿ ಯೋಜನೆಗೆ ಮರುಜೀವ

ಚಿಕ್ಕಮಗಳೂರು: ಕಾಫಿನಾಡಿನ ರೈತರ ಬಹುದಿನಗಳ ಕನಸಾಗಿದ್ದ ಮಳಲೂರು ಏತ ನೀರಾವರಿ ಯೋಜನೆಗೆ ಕೊನೆಗೂ ಮರುಜೀವ ಬಂದಿದ್ದು,...

ಶ್ರೀ ವೀರನಾರಾಯಣ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಕಿಡಿಗೇಡಿಗಳು ವಿಕೃತಿ

ಚಿಕ್ಕಮಗಳೂರು: ಹೊಯ್ಸಳರ ಕಾಲದ ಅತ್ಯಂತ ಪ್ರಸಿದ್ಧ ಹಾಗೂ ಅಪೂರ್ವ ಕಲೆ-ವಾಸ್ತುಶಿಲ್ಪದ ಹೆಗ್ಗುರುತಾಗಿರುವ ಚಿಕ್ಕಮಗಳೂರು ತಾಲೂಕಿನ ಬೆಳವಾಡಿ...