Home namma chikmagalur chikamagalur ಅಜ್ಜಂಪುರದ ಇಲಿಗೆ ‘ಹಣದ ಮೋಹ’
chikamagalurHomeLatest Newsnamma chikmagalur

ಅಜ್ಜಂಪುರದ ಇಲಿಗೆ ‘ಹಣದ ಮೋಹ’

Share
Share

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ ನಿರ್ಮಿಸಿಕೊಂಡಿರುವುದು ಬೆಳಕಿಗೆ ಬಂದಿದೆ.

ಚಿಕ್ಕಮಗಳೂರು ಜಿಲ್ಲೆಯ ಅಜ್ಜಂಪುರ ಪಟ್ಟಣದ ‘ಜಮ್-ಜಮ್ ಚಿಕನ್ ಅಂಗಡಿ’ಯಲ್ಲಿ ಈ ಸ್ವಾರಸ್ಯಕರ ಘಟನೆ ನಡೆದಿದೆ. ಅಂಗಡಿಯ ಮಾಲೀಕರಾದ ಸಿದ್ದಿಕ್ ಅವರು ಪ್ರತಿದಿನ ವ್ಯಾಪಾರ ಮುಗಿಸಿ ಗಲ್ಲಾಪೆಟ್ಟಿಗೆಯಲ್ಲಿ ಇಡುತ್ತಿದ್ದ 10, 20 ಮತ್ತು 50 ರೂಪಾಯಿ ನೋಟುಗಳು ಆಗಾಗ್ಗೆ ಮಂಗಮಾಯವಾಗುತ್ತಿದ್ದವು.

ಸಣ್ಣಪುಟ್ಟ ಮೌಲ್ಯದ ನೋಟುಗಳಾಗಿದ್ದರಿಂದ ಆರಂಭದಲ್ಲಿ ಅವರು ಅಷ್ಟಾಗಿ ತಲೆಕೆಡಿಸಿಕೊಂಡಿರಲಿಲ್ಲ. ಆದರೆ ದಿನಗಳು ಕಳೆದಂತೆ ನೋಟುಗಳು ನಾಪತ್ತೆಯಾಗುವುದು ಹೆಚ್ಚಾದಾಗ, ಯಾರೋ ಕಳ್ಳರು ಅಂಗಡಿಗೆ ಕನ್ನ ಹಾಕುತ್ತಿದ್ದಾರೆ ಎಂಬ ಅನುಮಾನ ಮಾಲೀಕರಿಗೆ ಬಲವಾಗಿದೆ.

ಅನುಮಾನಗೊಂಡ ಮಾಲೀಕ ಸಿದ್ದಿಕ್ ಅವರು ಅಂಗಡಿಯ ಮೂಲೆ ಮೂಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿದಾಗ ಅಸಲಿ ಕಳ್ಳನ ಚೇಷ್ಟೆ ಬಯಲಾಗಿದೆ. ಅಂಗಡಿಯ ಮೂಲೆಯಲ್ಲಿದ್ದ ಪ್ಲಾಸ್ಟಿಕ್ ಕವರ್ ಒಂದನ್ನು ತೆರೆದು ಪರಿಶೀಲಿಸಿದಾಗ ಅಲ್ಲಿ ಇಲಿಯೊಂದು ರಾಜಗಾಂಭೀರ್ಯದಲ್ಲಿ ಬೆಚ್ಚಗೆ ಕುಳಿತಿರುವುದು ಕಂಡುಬಂದಿದೆ.

ಅಷ್ಟೇ ಅಲ್ಲ, ಆ ಇಲಿ ತಾನು ವಾಸಿಸಲು ಬರಿ ಹುಲ್ಲು-ಕಡ್ಡಿಗಳನ್ನು ಬಳಸದೆ, ಗಲ್ಲಾಪೆಟ್ಟಿಗೆಯಿಂದ ಕದ್ದು ತಂದ ನೋಟುಗಳನ್ನೇ ಹಾಸಿಗೆ ಹಾಗೂ ಹೊದಿಕೆಯನ್ನಾಗಿ ಮಾಡಿಕೊಂಡು ರಾಯಲ್ ಆಗಿ ಗೂಡು ಕಟ್ಟಿರುವುದು ಪತ್ತೆಯಾಗಿದೆ.

ಇಲಿಯ ಈ ವಿಶೇಷವಾದ ‘ಹಣದ ಮೋಹ’ ಮತ್ತು ಶಿಸ್ತಿನ ಕಳ್ಳತನವನ್ನು ಕಂಡು ಮಾಲೀಕ ಸಿದ್ದಿಕ್ ಅಚ್ಚರಿಯಿಂದ ದಂಗಾಗಿದ್ದಾರೆ. ಹಣವನ್ನು ಗಲ್ಲಾಪೆಟ್ಟಿಗೆಯಲ್ಲಿ ಭದ್ರವಾಗಿಟ್ಟರೂ ಇಲಿಯಿಟ್ಟ ಕನ್ನಕ್ಕೆ ಸಿದ್ದಿಕ್ ಅವರ ಹಣ ಈಗ ನೋಟಿನ ಗೂಡಾಗಿ ಪರಿವರ್ತನೆಯಾಗಿದ್ದು, ಈ ‘ಶ್ರೀಮಂತ ಇಲಿ’ಯ ಕಥೆ ಹಾಗೂ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

Ajjampura’s rat ‘loves money’

Share

Leave a comment

Leave a Reply

Your email address will not be published. Required fields are marked *

Don't Miss

ಪೊಲೀಸ್ ಕಾನ್‌ಸ್ಟೇಬಲ್ ಲಿಖಿತ ಪರೀಕ್ಷೆಗೆ 451 ಅಭ್ಯರ್ಥಿಗಳ ಗೈರು

ಚಿಕ್ಕಮಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ವತಿಯಿಂದ ಭಾನುವಾರ ರಾಜ್ಯಾದ್ಯಂತ ನಡೆದ ಪೊಲೀಸ್ ಕಾನ್‌ಸ್ಟೇಬಲ್ (ಸಿವಿಲ್) ಹುದ್ದೆಗಳ ಲಿಖಿತ ಪರೀಕ್ಷೆಯು ಚಿಕ್ಕಮಗಳೂರು ಜಿಲ್ಲೆಯ ೧೬ ಪರೀಕ್ಷಾ ಕೇಂದ್ರಗಳಲ್ಲಿ ಯಾವುದೇ ಅಡೆತಡೆ ಇಲ್ಲದೆ...

ವಿಧಾನ ಪರಿಷತ್ ಸದಸ್ಯೆಯಾಗಿ ಗಾಯತ್ರಿ ಶಾಂತೇಗೌಡ ಇಂದು ಪ್ರಮಾಣ ವಚನ

ಬೆಂಗಳೂರು: ಕರ್ನಾಟಕ ವಿಧಾನ ಪರಿಷತ್ತಿನ ನೂತನ ಸದಸ್ಯೆಯಾಗಿ ನೇಮಕಗೊಂಡಿರುವ ಶ್ರೀಮತಿ ಗಾಯತ್ರಿ ಶಾಂತೇಗೌಡ ಅವರು ಸೋಮವಾರ (ಆಗಸ್ಟ್ 3) ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‌ನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣ...

Related Articles

ದೇವಸ್ಥಾನ ಪ್ರವೇಶದ ವಿಚಾರಕ್ಕೆ ಬಾಲಕನ ಮೇಲೆ ಕತ್ತಿಯಿಂದ ಹಲ್ಲೆಗೆ ಯತ್ನ

ಚಿಕ್ಕಮಗಳೂರು: ದೇವಸ್ಥಾನ ಪ್ರವೇಶದ ವಿಚಾರಕ್ಕೆ ಸಂಬಂಧಿಸಿದಂತೆ ಪರಿಶಿಷ್ಟ ಜಾತಿಗೆ ಸೇರಿದ 16 ವರ್ಷದ ಬಾಲಕನಿಗೆ ಅವಾಚ್ಯವಾಗಿ...

ಸ್ಕೂಟರ್ ಮರದ ಬಿಳಲಿಗೆ ಡಿಕ್ಕಿಗೆ ಮಹಿಳೆ ಸ್ಥಳದಲ್ಲೇ ಸಾವು

ಕಡೂರು: ಸ್ಕೂಟರ್ ನಿಯಂತ್ರಣ ತಪ್ಪಿ ಆಲದ ಮರದ ಬಿಳಲಿಗೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಕುಳಿತಿದ್ದ...

ಜಲಜೀವನ್ ಮಿಷನ್ ಕಾಮಗಾರಿ ಸ್ಥಳದಿಂದ ಜನರೇಟರ್, ಪೈಪ್ ಕಳವು

ಚಿಕ್ಕಮಗಳೂರು: ಜಲಜೀವನ್ ಮಿಷನ್ ಯೋಜನೆಯಡಿ ಕುಡಿಯುವ ನೀರಿನ ಪೈಪ್‌ಲೈನ್ ಕಾಮಗಾರಿಗೆ ಬಳಸುತ್ತಿದ್ದ 10 ಕೆವಿಎ ಡೀಸೆಲ್...

ಬೀರೂರಿನ ಫೈನಾನ್ಸ್ ಕಂಪನಿಗೆ ₹9.91 ಲಕ್ಷ ವಂಚನೆ

ಬೀರೂರು: ಬೇರೊಬ್ಬ ವ್ಯಕ್ತಿಯಂತೆ ನಟಿಸಿ ಫೈನಾನ್ಸ್‌ನಲ್ಲಿ ಗಿರವಿ ಇಟ್ಟಿರುವ ಚಿನ್ನ ಬಿಡಿಸಿಕೊಡುವುದಾಗಿ ನಂಬಿಸಿ ನವರತ್ನ ಗೋಲ್ಡ್...