Home Crime News ಆಲ್ದೂರು ಬೂದಿ ಮುಚ್ಚಿದ ಕೆಂಡ : ಬಾರ್ ಗಳು ಬಂದ್
Crime News

ಆಲ್ದೂರು ಬೂದಿ ಮುಚ್ಚಿದ ಕೆಂಡ : ಬಾರ್ ಗಳು ಬಂದ್

Share
Share

ಚಿಕ್ಕಮಗಳೂರು : ದಲಿತರು ಹಾಗೂ ಒಕ್ಕಲಿಗರ ನಡುವಿನ ಜಾಗ ಸಂಘರ್ಷ ನಂತರ ಆಲ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದೆ, ಎರಡೂ ಸಮುದಾಯಗಳ ದೂರು ಪ್ರತಿ ದೂರಿನ ನಂತರ ಪಟ್ಟಣದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ ಏರ್ಪಡಿಸಲಾಗಿದ್ದು ಆಲ್ದೂರು ಸಂಪೂರ್ಣ ಪೊಲೀಸ್,ಮಯವಾಗಿದೆ

ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಎಲ್ಲಾ ಮಧ್ಯದ ಅಂಗಡಿಗಳನ್ನು ಬಂದ್ ಗೊಳಿಸಲಾಗಿದ್ದು ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ ಇಂದು ಮಧ್ಯಾಹ್ನ ಮೃತಪಟ್ಟ ಮಹಿಳೆಯ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಪ್ರತಿಭಟನೆ ನಡೆಸಿ ವಿವಾದಿತ ಸ್ಥಳದಲ್ಲಿ ತಹಶಿಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲಿ ಶವವನ್ನು ಹೂಳಲಾಗಿತ್ತು. ಈ ವೇಳೆ ಎರಡು ಸಮುದಾಯಗಳ ಜನರ ನಡುವೆ ತೀವ್ರ ವಾಗ್ವಾದ ನೂಕುನುಗ್ಗಲು ಉಂಟಾಗಿತ್ತು ಸ್ಥಳಕ್ಕೆ ಆಗಮಿಸಿದ ಎಸ್ ಪಿ ವಿಕ್ರಮ್ ಅಮಟೆ ಎರಡು ಕಡೆಯ ಮುಖಂಡರನ್ನು ಕರೆಸಿ ರಾಜಿ ಸಂಧಾನಕ್ಕೆ ಯತ್ನಿಸಿದ್ದರು ಎನ್ನಲಾಗಿದೆ, ಆದರೆ ಒಪ್ಪದ ಎರಡು ಕಡೆಯ ಮುಖಂಡರು ದೂರು ಪ್ರತಿ ದೂರನ್ನು ದಾಖಲಿಸಿದ್ದಾರೆ, ಇತ್ತ ದಲಿತರು ದೌರ್ಜನ್ಯ ಪ್ರಕರಣವನ್ನು ದಾಖಲಿಸಿದರೆ ಒಕ್ಕಲಿಗರು ಹಲ್ಲೆ ಹಾಗೂ ಟ್ರೆಸ್ ಪಾಸ್ ಪ್ರಕರಣವನ್ನು ದಾಖಲಿಸಿದ್ದಾರೆ ಸದ್ಯ ಆಲ್ದೂರ್ ಪಟ್ಟಣದಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು ಸೂಕ್ಷ್ಮ ಪ್ರದೇಶಗಳಲ್ಲಿ ರಾಪಿಡ್ ಆಕ್ಷನ್ ಫೋರ್ಸ್ ಹಾಗೂ ಅರೆಸೇನಾ ಪಡೆ ಹಾಗೂ ಹೆಚ್ಚುವರಿ ಪೊಲೀಸ್ ತೂಕಡಿಗಳನ್ನು ನಿಯೋಜಿಸಲಾಗಿದೆ

Share

Leave a comment

Leave a Reply

Your email address will not be published. Required fields are marked *

Don't Miss

ದನದ ಮಾಂಸ ಮಾರಾಟದಲ್ಲಿ 40 ಕೆ.ಜಿ ಮಾಂಸ, ಕತ್ತಿ–ಚಾಕುಗಳು ಜಪ್ತಿ

ಚಿಕ್ಕಮಗಳೂರು: ನಗರದ ಅಯ್ಯಪ್ಪನಗರದ ಸಮೀಪದ ಶೆಡ್‌ನಲ್ಲಿ ಯಾವುದೇ ಪರವಾನಗಿ ಇಲ್ಲದೆ ದನದ ಮಾಂಸ ಮಾರಾಟ ಮಾಡುತ್ತಿದ್ದ ಆರೋಪದ ಮೇಲೆ ನಗರ ಠಾಣೆ ಪೊಲೀಸರು ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆ.9ರಂದು ಮಧ್ಯಾಹ್ನ...

ವಕೀಲ ವಿ.ಕೆ.ರಘು ಸಾಧನೆ ಯೋಗ ಮಾಡುವವರಿಗೆ ಪ್ರೇರಣೆ

ಚಿಕ್ಕಮಗಳೂರು: ಯೊಗ ನಮ್ಮ ಪ್ರಾಚೀನ ಋಷಿಮುನಿಗಳು ಜಗತ್ತಿಗೆ ಕೊಟ್ಟಂತಹ ಕೊಡುಗೆ. ವಕೀಲ ವಿ.ಕೆ.ರಘು ಅವರ ಯೋಗದ ಸಾಧನೆ ಯೋಗ ಮಾಡುವವರಿಗೆ ಒಂದು ಪ್ರೇರಣೆ ಕೊಡುತ್ತದೆ ಎಂದು ವಿಧಾನ ಪರಿಷತ್ ಸದಸ್ಯ ಡಾ.ಸಿ.ಟಿ.ರವಿ...

Related Articles

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...