Home Crime News ಆಲ್ದೂರು ಬೂದಿ ಮುಚ್ಚಿದ ಕೆಂಡ : ಬಾರ್ ಗಳು ಬಂದ್
Crime News

ಆಲ್ದೂರು ಬೂದಿ ಮುಚ್ಚಿದ ಕೆಂಡ : ಬಾರ್ ಗಳು ಬಂದ್

Share
Share

ಚಿಕ್ಕಮಗಳೂರು : ದಲಿತರು ಹಾಗೂ ಒಕ್ಕಲಿಗರ ನಡುವಿನ ಜಾಗ ಸಂಘರ್ಷ ನಂತರ ಆಲ್ದೂರು ಪಟ್ಟಣ ಬೂದಿ ಮುಚ್ಚಿದ ಕೆಂಡದಂತಾಗಿದೆ, ಎರಡೂ ಸಮುದಾಯಗಳ ದೂರು ಪ್ರತಿ ದೂರಿನ ನಂತರ ಪಟ್ಟಣದಲ್ಲಿ ವ್ಯಾಪಕ ಪೊಲೀಸ್ ಬಂದೋಬಸ್ ಏರ್ಪಡಿಸಲಾಗಿದ್ದು ಆಲ್ದೂರು ಸಂಪೂರ್ಣ ಪೊಲೀಸ್,ಮಯವಾಗಿದೆ

ಮುನ್ನೆಚ್ಚರಿಕೆ ಕ್ರಮವಾಗಿ ಪಟ್ಟಣದ ಎಲ್ಲಾ ಮಧ್ಯದ ಅಂಗಡಿಗಳನ್ನು ಬಂದ್ ಗೊಳಿಸಲಾಗಿದ್ದು ಎಲ್ಲೆಡೆ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದೆ ಇಂದು ಮಧ್ಯಾಹ್ನ ಮೃತಪಟ್ಟ ಮಹಿಳೆಯ ಶವಸಂಸ್ಕಾರಕ್ಕೆ ಜಾಗವಿಲ್ಲದೆ ಪ್ರತಿಭಟನೆ ನಡೆಸಿ ವಿವಾದಿತ ಸ್ಥಳದಲ್ಲಿ ತಹಶಿಲ್ದಾರ್ ಹಾಗೂ ಪೊಲೀಸರ ಸಮ್ಮುಖದಲ್ಲಿ ಶವವನ್ನು ಹೂಳಲಾಗಿತ್ತು. ಈ ವೇಳೆ ಎರಡು ಸಮುದಾಯಗಳ ಜನರ ನಡುವೆ ತೀವ್ರ ವಾಗ್ವಾದ ನೂಕುನುಗ್ಗಲು ಉಂಟಾಗಿತ್ತು ಸ್ಥಳಕ್ಕೆ ಆಗಮಿಸಿದ ಎಸ್ ಪಿ ವಿಕ್ರಮ್ ಅಮಟೆ ಎರಡು ಕಡೆಯ ಮುಖಂಡರನ್ನು ಕರೆಸಿ ರಾಜಿ ಸಂಧಾನಕ್ಕೆ ಯತ್ನಿಸಿದ್ದರು ಎನ್ನಲಾಗಿದೆ, ಆದರೆ ಒಪ್ಪದ ಎರಡು ಕಡೆಯ ಮುಖಂಡರು ದೂರು ಪ್ರತಿ ದೂರನ್ನು ದಾಖಲಿಸಿದ್ದಾರೆ, ಇತ್ತ ದಲಿತರು ದೌರ್ಜನ್ಯ ಪ್ರಕರಣವನ್ನು ದಾಖಲಿಸಿದರೆ ಒಕ್ಕಲಿಗರು ಹಲ್ಲೆ ಹಾಗೂ ಟ್ರೆಸ್ ಪಾಸ್ ಪ್ರಕರಣವನ್ನು ದಾಖಲಿಸಿದ್ದಾರೆ ಸದ್ಯ ಆಲ್ದೂರ್ ಪಟ್ಟಣದಲ್ಲಿ ವ್ಯಾಪಕ ಕಟ್ಟೆಚ್ಚರ ವಹಿಸಲಾಗಿದ್ದು ಸೂಕ್ಷ್ಮ ಪ್ರದೇಶಗಳಲ್ಲಿ ರಾಪಿಡ್ ಆಕ್ಷನ್ ಫೋರ್ಸ್ ಹಾಗೂ ಅರೆಸೇನಾ ಪಡೆ ಹಾಗೂ ಹೆಚ್ಚುವರಿ ಪೊಲೀಸ್ ತೂಕಡಿಗಳನ್ನು ನಿಯೋಜಿಸಲಾಗಿದೆ

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...