Home namma chikmagalur chikamagalur ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ
chikamagalurCrime NewsHomeLatest Newsnamma chikmagalur

ಕನಸು ಫೈನಾನ್ಸ್ ಹೆಸರಿನಲ್ಲಿ ₹1.60 ಲಕ್ಷ ವಂಚನೆ ಆರೋಪ

Share
Share

ಕಡೂರು: ಪ್ರತಿದಿನ ಉಳಿತಾಯದ ಹಣವನ್ನು ಸ್ವೀಕರಿಸಿ ಶೇ.7ರಷ್ಟು ಬಡ್ಡಿ ನೀಡುವುದಾಗಿ ನಂಬಿಸಿ, ಹಣವನ್ನು ವಾಪಸ್ ನೀಡದೆ ಫೈನಾನ್ಸ್ ಕಚೇರಿಗೆ ಬೀಗ ಹಾಕಿ ಮಾಲೀಕರು ನಾಪತ್ತೆಯಾಗಿರುವ ಆರೋಪದಡಿ ಕಡೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸೀಗೆಹಡ್ಲು ಗ್ರಾಮದ ಚಿಲ್ಲರೆ ಅಂಗಡಿ ಮಾಲೀಕರಾದ ನೇತ್ರಾ ಅವರು ನೀಡಿದ ದೂರಿನ ಆಧಾರದ ಮೇಲೆ ಕನಸು ಫೈನಾನ್ಸ್ ಲಿಮಿಟೆಡ್‌ನ ಮಾಲೀಕರು ಎನ್ನಲಾದ ಪ್ರಶಾಂತ್, ಚಂದನ್ ನಾಯ್ಕ ಹಾಗೂ ಶಾಶಂಕ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ.

ದೂರಿನ ಪ್ರಕಾರ, ಸುಮಾರು ಒಂದು ವರ್ಷದ ಹಿಂದೆ ಚಂದನ್ ನಾಯ್ಕ ಅವರು ಸೀಗೆಹಡ್ಲು ಗ್ರಾಮಕ್ಕೆ ಬಂದು ಕಡೂರಿನ ಸುಭಾಷ್ ನಗರದಲ್ಲಿ ಕನಸು ಫೈನಾನ್ಸ್ ಲಿಮಿಟೆಡ್ ಸಂಸ್ಥೆ ಆರಂಭಿಸಿರುವುದಾಗಿ ತಿಳಿಸಿದ್ದರು. ತಾವು, ಪ್ರಶಾಂತ್ ಹಾಗೂ ಶಾಶಂಕ್ ಸಂಸ್ಥೆಯ ಮಾಲೀಕರಾಗಿದ್ದು, ಪ್ರತಿದಿನ ಉಳಿತಾಯ ಮಾಡುವ ಹಣವನ್ನು ಸಂಸ್ಥೆಯಲ್ಲಿ ಠೇವಣಿ ಮಾಡಿದರೆ ವಾರ್ಷಿಕ ಶೇ.7ರಷ್ಟು ಬಡ್ಡಿ ನೀಡಿ ಹಣವನ್ನು ವಾಪಸ್ ನೀಡುವುದಾಗಿ ನಂಬಿಸಿದ್ದರು ಎನ್ನಲಾಗಿದೆ.

ಇದನ್ನು ನಂಬಿದ ನೇತ್ರಾ ಅವರು 2025ರ ಜೂನ್ 11ರಿಂದ ಪ್ರತಿದಿನ ₹300ರಿಂದ ₹700ರವರೆಗೆ ಹಣವನ್ನು ಉಳಿತಾಯ ಮಾಡುತ್ತಿದ್ದರು. ಫೈನಾನ್ಸ್‌ನ ಸಿಬ್ಬಂದಿ ಅಂಗಡಿಗೆ ಬಂದು ಹಣ ಪಡೆದು, ಸಂಸ್ಥೆ ನೀಡಿದ್ದ ಪುಸ್ತಕದಲ್ಲಿ ಸಹಿ ಮಾಡುತ್ತಿದ್ದರು. ಈ ರೀತಿ 2026ರ ಜುಲೈ 17ರವರೆಗೆ ಹಣ ಪಾವತಿಸಿದ್ದು, ಒಟ್ಟು ₹1,60,900 ಠೇವಣಿ ಮಾಡಿರುವುದಾಗಿ ದೂರಿನಲ್ಲಿ ತಿಳಿಸಿದ್ದಾರೆ.

ಜುಲೈ 13ರಂದು ಕನಸು ಫೈನಾನ್ಸ್ ಕಚೇರಿಗೆ ತೆರಳಿ ತಾವು ಕಟ್ಟಿರುವ ಹಣವನ್ನು ಹಿಂಪಡೆಯುವುದಾಗಿ ನೇತ್ರಾ ತಿಳಿಸಿದ್ದರು. ಈ ವೇಳೆ ಅಲ್ಲಿನ ಸಿಬ್ಬಂದಿ ಫೈನಾನ್ಸ್ ಮಾಲೀಕ ಚಂದನ್ ನಾಯ್ಕ ಅವರಿಗೆ ಕರೆ ಮಾಡಿದ್ದು, ಎರಡು–ಮೂರು ದಿನಗಳಲ್ಲಿ ಹಣ ವಾಪಸ್ ನೀಡುವುದಾಗಿ ಅವರು ಭರವಸೆ ನೀಡಿದ್ದರು ಎನ್ನಲಾಗಿದೆ.

ಆದರೆ ಹಣಕ್ಕಾಗಿ ಕಾಯುತ್ತಿದ್ದರೂ ಯಾವುದೇ ಹಣ ಪಾವತಿಯಾಗಿಲ್ಲ. ಬಳಿಕ ಪ್ರಶಾಂತ್, ಚಂದನ್ ನಾಯ್ಕ ಹಾಗೂ ಶಾಶಂಕ್ ಅವರು ಫೈನಾನ್ಸ್ ಕಚೇರಿಗೆ ಬೀಗ ಹಾಕಿಕೊಂಡು ನಾಪತ್ತೆಯಾಗಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ.

ತಮ್ಮಂತೆಯೇ ಕಡೂರು ಸುತ್ತಮುತ್ತಲಿನ ಹಲವಾರು ಮಂದಿ ಕನಸು ಫೈನಾನ್ಸ್‌ನಲ್ಲಿ ಹಣ ಹೂಡಿಕೆ ಮಾಡಿ ವಂಚನೆಗೆ ಒಳಗಾಗಿರುವುದು ತಿಳಿದುಬಂದಿದೆ ಎಂದು ನೇತ್ರಾ ತಿಳಿಸಿದ್ದಾರೆ. ದೂರಿನ ಆಧಾರದ ಮೇಲೆ ಕಡೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿಗಳ ಪತ್ತೆ ಹಾಗೂ ಫೈನಾನ್ಸ್‌ನಲ್ಲಿ ಹಣ ಹೂಡಿಕೆ ಮಾಡಿರುವ ಇತರರ ವಿವರಗಳ ಕುರಿತು ತನಿಖೆ ಮುಂದುವರಿಸಿದ್ದಾರೆ.

Allegations of fraud of ₹1.60 lakh in the name of Kanasu Finance

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ ಇಲಿಗೆ ‘ಹಣದ ಮೋಹ’

ಚಿಕ್ಕಮಗಳೂರು : ತುಮಕೂರಿನಲ್ಲಿ ಇತ್ತೀಚೆಗೆ ಇಲಿಯೊಂದು ಚಿನ್ನದ ಆಭರಣಗಳನ್ನು ಎಗರಿಸಿ ಸುದ್ದಿಯಾಗಿದ್ದರೆ, ಇತ್ತ ಚಿಕ್ಕಮಗಳೂರಿನಲ್ಲಿ ಮತ್ತೊಂದು ಚಾಣಾಕ್ಷ ಇಲಿ ಒಂದು ಹೆಜ್ಜೆ ಮುಂದೆ ಹೋಗಿ ನೇರವಾಗಿ ಹಣವನ್ನೇ ಕದ್ದು ತನ್ನ ಸಾಮ್ರಾಜ್ಯ...

ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಹೆಸರಿನಲ್ಲಿಯೂ ನಕಲಿ ವಾಟ್ಸಪ್ ಖಾತೆ

ಚಿಕ್ಕಮಗಳೂರು: ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಪ್ರಕರಣಗಳು ದಿನೇ ದಿನೇ ಹೆಚ್ಚಾಗುತ್ತಿದ್ದು, ಹ್ಯಾಕರ್‌ಗಳು ಮತ್ತು ವಂಚಕರು ವಾಟ್ಸಪ್, ಫೇಸ್‌ಬುಕ್ ಸೇರಿದಂತೆ ವಿವಿಧ ಸಾಮಾಜಿಕ ಜಾಲತಾಣಗಳಲ್ಲಿ ಪ್ರಮುಖರ ಹೆಸರನ್ನು ದುರ್ಬಳಕೆ ಮಾಡಿಕೊಂಡು ಜನರನ್ನು...

Related Articles

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...

ಹಾಸ್ಟೆಲ್‌ ವಿದ್ಯಾರ್ಥಿ ಆತ್ಮಹತ್ಯೆಗೆ ಯತ್ನ

ಚಿಕ್ಕಮಗಳೂರು: ಸಮಗ್ರ ಗಿರಿಜನ ಕಲ್ಯಾಣ ಇಲಾಖೆ (ಐಟಿಡಿಪಿ) ವ್ಯಾಪ್ತಿಯ ಡಾ. ಬಿ.ಆರ್. ಅಂಬೇಡ್ಕರ್ ವಸತಿ ಶಾಲೆಯ...

ಮನೆಯ ಮೇಲ್ಛಾವಣಿಯ ಹೆಂಚು ತೆಗೆದು ನುಗ್ಗಿ ಸರಗಳ್ಳತನ

ನರಸಿಂಹರಾಜಪುರ: ಮನೆಯಲ್ಲಿ ದಂಪತಿ ಮಲಗಿದ್ದ ವೇಳೆ ಮೇಲ್ಛಾವಣಿಯ ಹೆಂಚು ತೆಗೆದು ಒಳನುಗ್ಗಿದ ಕಳ್ಳನೊಬ್ಬ ಮಹಿಳೆಯ ಕೊರಳಿನಲ್ಲಿದ್ದ...

₹10.13 ಲಕ್ಷ ಮೌಲ್ಯದ HDPE ಪೈಪ್ ಬಂಡಲ್‌ಗಳ ಕಳವು

ಚಿಕ್ಕಮಗಳೂರು: ಜಲ ಜೀವನ್ ಮಿಷನ್ ಕಾಮಗಾರಿಗಾಗಿ ಜಮೀನಿನಲ್ಲಿ ಸಂಗ್ರಹಿಸಿಟ್ಟಿದ್ದ ₹10.13 ಲಕ್ಷ ಮೌಲ್ಯದ 32 HDPE...