Home namma chikmagalur ಸತ್ತಿಹಳ್ಳಿ ಗ್ರಾಪಂ ಅವ್ಯವಹಾರ ಆರೋಪ ಸತ್ಯಕ್ಕೆ ದೂರ
namma chikmagalurchikamagalurHomeLatest News

ಸತ್ತಿಹಳ್ಳಿ ಗ್ರಾಪಂ ಅವ್ಯವಹಾರ ಆರೋಪ ಸತ್ಯಕ್ಕೆ ದೂರ

Share
Share

ಚಿಕ್ಕಮಗಳೂರು: ತಾಲೂಕಿನ ಸತ್ತಿಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಅವ್ಯವಹಾರ ನಡೆದಿದೆ ಎಂದು ಗ್ರಾಪಂ ಅಧ್ಯಕ್ಷ ರಾಮಯ್ಯ ಅವರು ಆರೋಪಿಸಿರುವುದು ಸತ್ಯಕ್ಕೆ ದೂರವಾಗಿದೆ ಎಂದು ಗ್ರಾಪಂ ಮಾಜಿ ಅಧ್ಯಕ್ಷ ಧ್ರುವ ಕುಮಾರ್ ತಿಳಿಸಿದರು.

ನಗರದ ಪ್ರೆಸ್ ಕ್ಲಬ್ ನಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಗ್ರಾಫಂ ಮಾಜಿ ಅಧ್ಯಕ್ಷರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ ಬಳಿಕ ಬಿಲ್ ಗಳಿಗೆ ಸಹಿ ಮಾಡಿದ್ದಾರೆ. ಪಿಡಿಒ ತಮ್ಮ ಅಧಿಕಾರ ದುರ್ಬಳಕೆ ಮಾಡಿಕೊಂಡು ಅಕ್ರಮವಾಗಿ ಬಿಲ್ ಮಂಜೂರು ಮಾಡಿದ್ದಾರೆ ಎಂಬ ಆರೋಪದಲ್ಲಿ ಹುರುಳಿನ ಎಂದರು.

ತಾವು ಗ್ರಾಪಂ ಅಧ್ಯಕ್ಷರಾಗಿದ್ದಾಗ 2024-25ನೇ ಸಾಲಿನ ಹಣಕಾಸು ಯೋಜನೆ ಅಡಿ ಕಾಮಗಾರಿಗಳಿಗೆ ಸಭೆಯಲ್ಲಿಯೇ ಕ್ರಿಯಾ ಯೋಜನೆ ತಯಾರಿಸಿ ಕಾರ್ಯದೇಶ ನೀಡಲಾಗಿತ್ತು. ಬಳಿಕ ಗುತ್ತಿಗೆದಾರರು ಕಾಮಗಾರಿ ನಡೆಸಿದ್ದಾರೆ. ಕಾಮಗಾರಿ ಪೂರ್ಣಗೊಂಡ ನಂತರ ಸಂಬಂಧಿಸಿದ ಇಲಾಖೆಗಳು ಕಾಮಗಾರಿಯ ಬಿಲ್ ನೀಡಿವೆ. ಹೀಗೆ ಗ್ರಾಫಂಗೆ ಬಂದ ಬಿಲ್ ಗಳನ್ನು ಪರಿಶೀಲನೆ ನಡೆಸಿ, ಜಿಪಿಎಸ್ ಮಾಡಿ ಪಾಸ್ ಮಾಡಲಾಗಿದೆ. ತಾವು ಅಧ್ಯಕ್ಷ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡುವ ಮೊದಲೇ ಈ ಎಲ್ಲ ಬಿಲ್ ಗಳಿಗೆ ಸಹಿ ಮಾಡಿದ್ದೇನೆ. ಆದರೆ ತಾಂತ್ರಿಕ ದೋಷದಿಂದ ಗುತ್ತಿಗೆದಾರರಿಗೆ ಹಣ ಬಿಡುಗಡೆಯಾಗುವುದು ನಾಲ್ಕೈದು ದಿನ ತಡವಾಗಿರಬಹುದು. ಇದಕ್ಕೆ ತಾವು ಯಾವುದೇ ಕಾರಣಕ್ಕೂ ಹೊಣೆಯಲ್ಲ ಎಂದರು.

ಹಾಗೂ ಅಧ್ಯಕ್ಷರಾಗಿದ್ದ ಅವಧಿಯಲ್ಲಿ ಕಾಮಗಾರಿಯನ್ನು ನಡೆಸದೆ ಯಾವುದೇ ಬಿಲ್ ಮಾಡಿಲ್ಲ. ನನ್ನ ಅವಧಿಯಲ್ಲಿ ಅಕ್ರಮ ನಡೆದಿದೆ ಎನ್ನುವುದಾದರೆ ಯಾವುದೇ ತನಿಖೆ ಎದುರಿಸಲು ಸಿದ್ಧನಾಗಿದ್ದೇನೆ. ಗ್ರಾಪಂ ಪಿಡಿಒ ತುಂಬಾ ಶಿಸ್ತಿನವರಾಗಿದ್ದಾರೆ. ಇದನ್ನು ಇಂದಿನ ಅಧ್ಯಕ್ಷರಿಗೆ ಸಹಿಸಲು ಸಾಧ್ಯವಾಗುತ್ತಿಲ್ಲ. ಇದೇ ಕಾರಣದಿಂದಾಗಿ ಪಿಡಿಒ ಮೇಲೆ ಸುಳ್ಳು ಆರೋಪ ಮಾಡಿ ಅವರನ್ನು ವರ್ಗಾವಣೆ ಮಾಡಲು ಪ್ರಯತ್ನಿಸುತ್ತಿದ್ದಾರೆ ಎಂದು ಆರೋಪಿಸಿದರು.

ಸುದ್ದಿಗೋಷ್ಠಿಯಲ್ಲಿ ಗ್ರಾಪಂ ಸದಸ್ಯರಾದ ಪದ್ಮಶ್ರೀ, ಗೀತಾ, ರಮ್ಯಾ ಉಪಸ್ಥಿತರಿದ್ದರು

Allegations of Sattihalli Grama Panchayat mismanagement are far from the truth.

Share

Leave a comment

Leave a Reply

Your email address will not be published. Required fields are marked *

Don't Miss

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುಮಾರು 67 ಸಾವಿರ ಫಲಾನುಭವಿಗಳ ಪಿಂಚಣಿ ಸ್ಥಗಿತಗೊಳಿಸಲಾಗಿದೆ ಎಂದು ವಿಧಾನಪರಿಷತ್ ಸದಸ್ಯ...

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ ಅನುಭವಿಸುತ್ತಿದ್ದು, ಸಮಸ್ಯೆಗಳ ಪರಿಹಾರಕ್ಕೆ ಸರ್ಕಾರ ಕೂಡಲೇ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಜಿಪಂ–ತಾಪಂ ಸದಸ್ಯ...

Related Articles

ಮಳೆಗಾಲದಲ್ಲಿ ಟಿಂಬರ್ ಸಾಗಣೆರಸ್ತೆಯಿಂದ ರಸ್ತೆ ಹಾಳು

ಕೊಪ್ಪ: ತಾಲೂಕಿನ ಅಸಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಅರಣ್ಯ ಇಲಾಖೆಯಿಂದ ಮಳೆಗಾಲದಲ್ಲಿಯೇ ಟಿಂಬರ್‌ಗಳನ್ನು ಕಡಿದು ಸಾಗಿಸುತ್ತಿರುವುದರಿಂದ...

ನಗರಕ್ಕೆ ಎರಡು ದಿನಗಳ ಕಾಲ ಕುಡಿಯುವ ನೀರಿನ ಸರಬರಾಜು ಸ್ಥಗಿತ

ಚಿಕ್ಕಮಗಳೂರು: ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 600 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ...

ಚಿಕ್ಕಮಗಳೂರು-ಯಶವಂತಪುರ ಎಕ್ಸ್‌ಪ್ರೆಸ್ ರೈಲು ಸಂಚಾರ ಸ್ಥಗಿತ…?

ಚಿಕ್ಕಮಗಳೂರು: ಮಲ್ಲಸಂದ್ರ ಮತ್ತು ಗುಬ್ಬಿ ರೈಲ್ವೆ ನಿಲ್ದಾಣಗಳ ನಡುವಿನ ಲೆವೆಲ್ ಕ್ರಾಸಿಂಗ್ ಗೇಟ್ (LC-48) ಬದಲಿಗೆ...

ಅಣ್ಣ-ತಮ್ಮಂದಿರ ನಡುವೆ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ತರೀಕೆರೆ: ಮನೆಯಲ್ಲಿ ಆಟವಾಡುತ್ತಿದ್ದ ಮಗುವಿನ ಕೆನ್ನೆ ಊದಿಕೊಂಡಿದ್ದ ವಿಚಾರಕ್ಕೆ ಸಂಬಂಧಿಸಿದಂತೆ ಕ್ಷುಲ್ಲಕ ಕಾರಣಕ್ಕೆ ಅಣ್ಣ-ತಮ್ಮಂದಿರ ನಡುವೆ...