Home namma chikmagalur chikamagalur ಸಮಸ್ತರಿಗೆ ಮತದಾನದ ದಿವ್ಯಾಸ್ತ್ರ ವಿಸ್ತರಿಸಿದ ಚೇತನ ಅಂಬೇಡ್ಕರ್
chikamagalurHomeLatest Newsnamma chikmagalur

ಸಮಸ್ತರಿಗೆ ಮತದಾನದ ದಿವ್ಯಾಸ್ತ್ರ ವಿಸ್ತರಿಸಿದ ಚೇತನ ಅಂಬೇಡ್ಕರ್

Share
Share

ಚಿಕ್ಕಮಗಳೂರು: – ಶ್ರೀಮಂತರು, ತೆರಿಗೆ ಭರಿಸುವ ವ್ಯಕ್ತಿಗಳಿಗೆ ಸೀಮಿತವಾಗಿದ್ಧ ಮತ ದಾನದ ದಿವ್ಯಾಸ್ತ್ರವನ್ನು ದೇಶದ ಸರ್ವಜನಾಂಗಕ್ಕೂ ವಿಸ್ತರಿಸಿದ ಮಹಾಚೇತನ ಡಾ|| ಬಿ.ಆರ್.ಅಂಬೇಡ್ಕರ್ ಎಂದು ಕೆ.ಎಸ್.ಆರ್.ಟಿ.ಸಿ. ಎಸ್ಸಿ, ಎಸ್ಟಿ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಗೌರವಾಧ್ಯ ಕ್ಷ ಹಿರೇಮಗಳೂರು ರಾಮಚಂದ್ರ ಹೇಳಿದರು.

ನಗರದ ಕೆ.ಎಸ್.ಆರ್.ಟಿ.ಸಿ. ಎಸ್ಸಿ, ಎಸ್ಟಿ ಅಧಿಕಾರಿಗಳು ಮತ್ತು ನೌಕರರ ಕ್ಷೇಮಾಭಿವೃದ್ದಿ ಸಂಘದ ಕಚೇ ರಿಯಲ್ಲಿ ಶನಿವಾರ ಭಾರತರತ್ನ, ಸಂವಿಧಾನ ಶಿಲ್ಪಿ ಡಾ|| ಬಿ.ಆರ್.ಅಂಬೇಡ್ಕರ್ ಪರಿನಿಬ್ಬಾಣ ದಿನದ ಅಂಗ ವಾಗಿ ಮೌನಾಚರಣೆ ನಡೆಸಿ, ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತನಾಡಿದರು.

ಸರ್ವರಿಗೂ ಸಮಾನ ಅವಕಾಶ ಮತ್ತು ಒಂದು ಜಾತಿ, ಧರ್ಮಕ್ಕೆ ಸೀಮಿತವಾಗದೇ, ದೌರ್ಜನ್ಯಕ್ಕೆ ಒಳ ಗಾಗಿ ಕತ್ತಲೆಕೂಪದಲ್ಲಿ ನಲುಗಿ ಹೋಗಿದ್ಧ ಶೋಷಿತರನ್ನು ಸೂರ್ಯನ ಬೆಳಕಿನಂತೆ ದಾರಿತೋರಿದ ಅಪೂ ರ್ವ ಚೇತನ ಅಂಭೇಡ್ಕರ್. ಇವರ ಸನ್ಮಾರ್ಗದಲ್ಲಿ ಇಂದಿನ ಯುವಜನತೆ ಸಾಗುವ ಗುಣ ಮೈಗೂಡಿಸಿಕೊ ಳ್ಳಬೇಕು ಎಂದು ಸಲಹೆ ಮಾಡಿದರು.

ನೌಕರರ ಕುಟುಂಬ ಹಾಗೂ ಸಮಾಜದಲ್ಲಿ ಅಂಬೇಡ್ಕರ್ ವಿಚಾರಧಾರೆಯ ಬೀಜಭಿತ್ತಬೇಕು. ಅಲ್ಲದೇ ಸಂವಿಧಾನದ ಮಹತ್ವ ಹಾಗೂ ಅಂಬೇಡ್ಕರ್ ಜೀವನಚರಿತ್ರೆ ಅಧ್ಯಯನ ನಡೆಸುವ ಮೂಲಕ ಸಮಾಜದ ಒಳಿತಿಗಾಗಿ ಬಳಸಿಕೊಂಡರೆ ಮಾತ್ರ ಅಂಬೇಡ್ಕರ್ ತ್ಯಾಗ, ಬಲಿದಾನಕ್ಕೆ ನಿಜವಾದ ಅರ್ಥ ಬರಲಿದೆ ಎಂದರು.

ಸಮಾಜಬಾಂಧವರು, ನೌಕರರು ಪರಸ್ಪರ ಸ್ಪಂದಿಸುವ ಹಾಗೂ ಸಹಕರಿಸುವ ಗುಣ ಬೆಳೆಸಿಕೊಳ್ಳಬೇಕು. ಭಾರತದ ಅಪರೂಪ ಮಿನುಗು ನಕ್ಷತ್ರವಾದ ಅಂಭೇಡ್ಕರ್ ತತ್ವ, ಸಿದ್ದಾಂತಕ್ಕೆ ಎಲ್ಲೆಡೆ ಜಾಗೃತಗೊಳಿಸಬೇಕು. ಜಗತ್ತಿನಲ್ಲಿ ಸೂರ್ಯ, ಚಂದ್ರನ ಇರುವತನಕ ಅಂಬೇಡ್ಕರ್ ವಿಚಾರಧಾರೆ ಉಳಿಸಿ ಬೆಳೆಸುವ ಪಣ ತೊಡಬೇ ಕು ಎಂದು ಹೇಳಿದರು.

ಸಂಘದ ವಿಭಾಗದ ಅಧ್ಯಕ್ಷ ಉಮೇಶ್ ಮರ್ಲೆ ಮಾತನಾಡಿ ಶೋಷಿತರಿಗೆ ಜನ್ಮಕೊಟ್ಟವರು ಪಾಲಕರಾ ದರೆ, ಜೀವನದ ಮೌಲ್ಯ, ಪಾಠವನ್ನು ಬೋಧಿಸಿದವರು ಅಂಭೇಡ್ಕರ್. ಈ ಮಹಾನೀಯರ ಜೀವನವು ಪ್ರತಿ ಯೊಬ್ಬರಿಗೂ ಮಾದರಿ. ಆ ನಿಟ್ಟಿನಲ್ಲಿ ಸಂವಿಧಾನವನ್ನು ಸಂಪೂರ್ಣ ಅರಿತು ಬಾಲ್ಯದಿಂದಲೇ ಮಕ್ಕಳಿಗೆ ಬೋಧಿಸಿ ಅಂಬೇಡ್ಕರ್ ಋಣ ತೀರಿಸುವ ಕಾರ್ಯ ಮಾಡಬೇಕಿದೆ ಎಂದರು.

ಈ ಸಂದರ್ಭದಲ್ಲಿ ಸಂಘದ ವಿಭಾಗದ ಪ್ರಧಾನ ಕಾರ್ಯದರ್ಶಿ ಹೆಚ್.ಬಿ.ಕೃಷ್ಣಮೂರ್ತಿ, ಖಜಾಂಚಿ ಪ್ರಸನ್ನಕುಮಾರ್, ಉಪಾಧ್ಯಕ್ಷರಾದ ಡಿ.ಎಂ.ಹಾಲಪ್ಪ, ವೈ.ಆರ್.ದಿನೇಶ್‌ಕುಮಾರ್, ಪುಟ್ಟಸ್ವಾಮಿ ಕಾರ್ಯದ ರ್ಶಿ ರಮೇಶ್, ಮುಖಂಡರುಗಳಾದ ಕುಮಾರ್, ಉಪಸ್ಥಿತರಿದ್ದರು.

Ambedkar extended the right to vote to all

 

Share

Leave a comment

Leave a Reply

Your email address will not be published. Required fields are marked *

Don't Miss

ಸಾಲದ ಹಣ ಕೇಳಿದ್ದಕ್ಕೆ ಹಲ್ಲೆ; ತಾಯಿ-ಮಗನ ವಿರುದ್ಧ ಪ್ರಕರಣ

ಕಡೂರು: ಸಾಲವಾಗಿ ನೀಡಿದ್ದ ₹50 ಸಾವಿರವನ್ನು ಹಿಂದಿರುಗಿಸುವಂತೆ ಕೇಳಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಯಗಟಿ ಪೊಲೀಸ್ ಠಾಣೆಯಲ್ಲಿ ತಾಯಿ-ಮಗನ ವಿರುದ್ಧ ಪ್ರಕರಣ ದಾಖಲಾಗಿದೆ. ಯಗಟಿ ಗ್ರಾಮದ ಮುದಿಯಪ್ಪ ಬಡಾವಣೆಯ...

ಹುಬ್ಬಳ್ಳಿಯಲ್ಲಿ ಆಗಸ್ಟ್ 9ರಂದು ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ

ಚಿಕ್ಕಮಗಳೂರು: ಕರ್ನಾಟಕ ಆದಿವಾಸಿ ರಕ್ಷಣಾ ಪರಿಷತ್ ಹಾಗೂ ಆದಿವಾಸಿ ಹರಣ ಶಿಖಾರಿ ಪಾರಿ ಸಮಾಜ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಆಗಸ್ಟ್ 9ರಂದು ಹುಬ್ಬಳ್ಳಿಯಲ್ಲಿ ರಾಜ್ಯಮಟ್ಟದ 32ನೇ ವಿಶ್ವ ಆದಿವಾಸಿ ದಿನಾಚರಣೆ ಅಂಗವಾಗಿ...

Related Articles

ಗ್ರಾಮೀಣ ಪ್ರದೇಶದಲ್ಲಿ ವಲಸೆ ತಡೆಗೆ ವಿಬಿ ಜಿ ರಾಮ್ ಜಿ ಆಸರೆ

ಚಿಕ್ಕಮಗಳೂರು: ಗ್ರಾಮೀಣ ಭಾಗದ ಜನರು ಉದ್ಯೋಗಕ್ಕಾಗಿ ನಗರ ಪ್ರದೇಶಗಳಿಗೆ ವಲಸೆ ಹೋಗುವುದನ್ನು ತಪ್ಪಿಸಿ, ತಮ್ಮ ಗ್ರಾಮಗಳಲ್ಲಿಯೇ...

ಆಗಸ್ಟ್ 14 ಮತ್ತು 16 ರಂದು ವಿದ್ಯುತ್ ನಿಲುಗಡೆ

ಚಿಕ್ಕಮಗಳೂರು:  ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ಬರುವ ಹೊಸದಾದ ಗಾಣದಾಳು ವಿ.ವಿ ಕೇಂದ್ರದ ೧೧ ಕೆ.ವಿ ಲಿಂಕ್...

ವೃದ್ದರ ಮಾಶಾಸನ ಬಿಡುಗಡೆ ಆಗ್ರಹಿಸಿ ಕರವೇ (ಪ್ರವೀಣ್‌ಶೆಟ್ಟಿ)ಬಣ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದರ ಮಾಶಾಸನ ಬಿಡುಗಡೆ ಹಾಗೂ ಬಿಡದಿಯಲ್ಲಿ ರೈತರ ಜೀವನ ಉಳಿಸಬೇಕು ಎಂದು ಆಗ್ರಹಿಸಿ ಕರವೇ...

ವಿದ್ಯುತ್ ಸ್ಪರ್ಶದಿಂದ ಎರಡು ಜಾನುವಾರುಗಳ ಸಾವು

ನರಸಿಂಹರಾಜಪುರ: ಜಮೀನಿಗೆ ಅಳವಡಿಸಿದ್ದ ಐಬೆಕ್ಸ್ ತಂತಿ ಬೇಲಿಗೆ ಅಕ್ರಮವಾಗಿ ವಿದ್ಯುತ್ ಸಂಪರ್ಕ ಕಲ್ಪಿಸಿದ್ದ ಪರಿಣಾಮ ಎರಡು...