Home Latest News ನಕ್ಸಲರಿಗಾಗಿ ಆಂಬುಸ್ ಆಪರೇಷನ್ : ಸುಬ್ಬೇಗೌಡ ಕುಟುಂಬದ ತೀವ್ರ ವಿಚಾರಣೆ
Latest News

ನಕ್ಸಲರಿಗಾಗಿ ಆಂಬುಸ್ ಆಪರೇಷನ್ : ಸುಬ್ಬೇಗೌಡ ಕುಟುಂಬದ ತೀವ್ರ ವಿಚಾರಣೆ

Share
Share

ಚಿಕ್ಕಮಗಳೂರು :

ನಕ್ಸಲರು ಭೇಟಿ ಬೆನ್ನಲ್ಲೇ ಮಲೆನಾಡಿನಲ್ಲಿ ಪೊಲೀಸರ ತನಿಖೆ ಮತ್ತಷ್ಟು ತೀವ್ರಗೊಂಡಿದೆ.‌ ಮುಂಡಗಾರು ಲತಾ ತಂಡ ಊಟ ಮಾಡಿ ತೆರಳಿದ್ದ ಕಡೇಗುಂದಿ ಸುಬ್ಬೇಗೌಡರ ಕುಟುಂಬವನ್ನೂ ಕೂಡ ತೀವ್ರ ವಿಚಾರಣೆಗೆ ಒಳಪಡಿಸಲಾಗಿದೆ.

ಮಲೆನಾಡ ಕಾಡಂಚಿನ ಕುಗ್ರಾಮಕ್ಕೆ ನಕ್ಸಲರ ಭೇಟಿ ಹಿನ್ನೆಲೆ ಎಎನ್ಎಫ್ ತನ್ನ ಕಾರ್ಯಾಚರಣೆ ತೀವ್ರಗೊಳಿಸಿದೆ.‌ ನಕ್ಸಲರು ಊಟ ಮಾಡಿ ಹೋಗಿದ್ದ ಮನೆಯವರನ್ನು ವಿಚಾರಣೆ ಮಾಡಲಾಗುತ್ತಿದೆ. ಗನ್ ತೋರಿಸಿ ಬೆದರಿಸಿ ಸುಬ್ಬೇಗೌಡ ಮನೆಯಲ್ಲಿ ಊಟ ಮಾಡಿ ಹೋಗಿದ್ದ ನಕ್ಸಲರು ಬಂದು ಹೇಗೆ ವರ್ತಿಸಿದರು ಎಂದು ಪ್ರಶ್ನೆ ಮಾಡಿದ್ದಾರೆ. ಕೊಪ್ಪ ತಾಲೂಕಿನ ಜಯಪುರ ಸಮೀಪದ ಕಡೇಗುಂದಿ ಗ್ರಾಮದ ಸುಬ್ಬೇಗೌಡರ ಮನೆಗೆ ಪೊಲೀಸ್ ನಕ್ಸಲ್ ನಿಗ್ರಹ ದಳದ ಸರ್ಪಗಾವಲು ಹಾಕಲಾಗಿದೆ. ಈ ಪ್ರಕರಣದ ತನಿಖಾಧಿಕಾರಿ ಆಗಿರುವ ಕೊಪ್ಪ ಡಿ.ವೈ.ಎಸ್ಪಿ. ಬಾಲಾಜಿ ಯವರು ವಿಚಾರಣೆ ನಡೆಸುತ್ತಿದ್ದಾರೆ. ಆ ದಿನ ರಾತ್ರಿ ಎಷ್ಟು ಜನ ಬಂದಿದ್ರು, ಅವರತ್ರ ಏನೇನಿತ್ತು, ಏನು ಹೇಳಿದ್ರು, ಏನು ಕೇಳಿದ್ರು… ಅಡುಗೆ ಏನು ಮಾಡಿದ್ರಿ, ಎಷ್ಟು ಜನಕ್ಕೆ ಮಾಡಿದ್ರಿ ಎಂಬೆಲ್ಲಾ ವಿಷಯ ಕಲೆ ಹಾಕಿ ವಿವಿಧ ಆಯಾಮಗಳಲ್ಲಿ ಹಾಗೂ ದೃಷ್ಟಿಕೋನದಲ್ಲಿ ವಿಚಾರಣೆ ನಡೆಸಿದ್ದಾರೆ. ಸುಬ್ಬೇಗೌಡ ಮನೆಯ ಸದಸ್ಯರ ವಿಚಾರಣೆ ಮಾಹಿತಿಯ ಮೇಲೆ ತನಿಖೆ ಚುರುಕುಗೊಳಿಸಿದ ಪೊಲೀಸರು ನಕ್ಸಲರು ಹೋದ ಮಾರ್ಗದಲ್ಲಿ ನಿರಂತರ ಕೂಂಬಿಂಗ್ ನಡೆಸ್ತಿದ್ದಾರೆ ಪೊಲೀಸ್- ಹಾಗೂ ಎ.ಎನ್.ಎಫ್ ತಂಡಗಳು ಕಾರ್ಯ ಪ್ರವೃತ್ತರಾಗಿದ್ದು ನಕ್ಸಲರು ಊಟ ಮಾಡಿ ಹೋಗುವಾಗ ಪೊಲೀಸ್ ಬರ್ತಾರೆಂದು ಗನ್ ಬಿಟ್ಟು ಹೋಗಿದ್ದ ಬಗ್ಗೆ ಕುತೂಹಲಕಾರಿ ಪ್ರಶ್ನೆ ಮುಂದಿಟ್ಟರು ಎಂದು ತಿಳಿದು ಬಂದಿದೆ.

ಒಟ್ಟಿನಲ್ಲಿ ದಶಕಗಳಿಂದ ಇಲ್ಲದ ನಕ್ಸಲರ ಆಗಮನದಿಂದ ಪೊಲೀಸ್, ಎ.ಎನ್.ಎಫ್. ಹೈ ಅಲರ್ಟ್ ಆಗಿದ್ದಾರೆ. ಚಿಕ್ಕಮಗಳೂರು ದಕ್ಷಿಣ ಕನ್ನಡ ಉಡುಪಿ ಜಿಲ್ಲೆಗಳ ಗಡಿ ಭಾಗಗಳಲ್ಲಿ ಕಟ್ಟೆಚ್ಚರ ವಹಿಸಿದ್ದು ಕೊಪ್ಪ ಹಾಗೂ ಶೃಂಗೇರಿ ತಾಲೂಕಿನ ಅರಣ್ಯಗಳಲ್ಲಿ ಆಂಬುಸ್ ಆಪರೇಷನ್ ಗೆ ಇಳಿದಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಧರ್ಮಸ್ಥಳ ಸಂಘದ ಸಾಲದ ವಿಚಾರ-ದಂಪತಿಗಳ ಮೇಲೆ ದೊಣ್ಣೆಗಳಿಂದ ಹಲ್ಲೆ

ಶೃಂಗೇರಿ: ಧರ್ಮಸ್ಥಳ ಸಂಘದ ಸಾಲದ ವಿಚಾರವಾಗಿ ಉಂಟಾದ ಸಣ್ಣ ಭಿನ್ನಾಪ್ರಾಯ ವಿಕೋಪಕ್ಕೆ ತಿರುಗಿ, ದಂಪತಿಗಳ ಮೇಲೆ...

ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟ ಪ್ರದರ್ಶಿಸಿ

ಚಿಕ್ಕಮಗಳೂರು: ಕೃಷಿಯನ್ನೇ ಅವಲಂಬಿಸಿರುವ ರೈತರು ಒಗ್ಗಟ್ಟಿನ ಮಂತ್ರ ಪಠಿಸಬೇಕು. ಪರಸ್ಪರ ಒಡೆದಾಳುವ ನೀತಿ ಅನುಸರಿಸಿದರೆ, ಸರ್ಕಾರಗಳು...

ಜಿಲ್ಲೆಯಲ್ಲಿ 43 ಸಾವಿರಕ್ಕೂ ಹೆಚ್ಚು ಪ್ರಕರಣ ಬಾಕಿ

ಚಿಕ್ಕಮಗಳೂರು: ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳನ್ನು ರಾಜಿ ಸಂಧಾನದ ಮೂಲಕ ಇತ್ಯರ್ಥ ಪಡಿಸಲು ಜುಲೈ ೧೧...

ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಗವನಹಳ್ಳಿ ಶಾಲೆಯ ಬಳಿ ತಡರಾತ್ರಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಒನ್-ವೇನಲ್ಲಿ (ಏಕಮುಖ...