Home namma chikmagalur chikamagalur ಅಮ್ಮಾ ಬುದ್ದಿಮಾತು ಹೇಳಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ
chikamagalurCrime NewsHomeLatest Newsnamma chikmagalur

ಅಮ್ಮಾ ಬುದ್ದಿಮಾತು ಹೇಳಿದ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Share
Share

ಚಿಕ್ಕಮಗಳೂರು: ತಾಯಿ ಬೈಗಳು ಜೊತೆ ಬುದ್ದಿ ಮಾತು ಹೇಳಿದ ಕಾರಣಕ್ಕೆ ಮಗಳು ದುರಂತ ಅಂತ್ಯ ಕಂಡ ಘಟನೆ ಕಾಫಿನಾಡು ಚಿಕ್ಕಮಗಳೂರಲ್ಲಿ ನಡೆದಿದೆ.

ಕೊಪ್ಪ ತಾಲೂಕಿನ ಜಯಪುರ ಗ್ರಾಮದ ದುರಂತ ಘಟನೆ ಹಲವರನ್ನು ಭಾವುಕರನ್ನಾಗಿ ಮಾಡಿದೆ. ಊಟ ಮಾಡುವಾಗ 13 ವರ್ಷದ ಮಗಳ ಕೈಯಿಂದ ತಟ್ಟೆ ಬಿದ್ದಿದೆ.

ಅನ್ನ ನೆಲದ ಮೇಲೆ ಚೆಲ್ಲಿದೆ. ಅನ್ನ ಚೆಲ್ಲಿದ ಕಾರಣಕ್ಕೆ ತಾಯಿ ಬೈದಿದ್ದಾರೆ. ಗಮನ ಇಲ್ಲ, ಬರೀ ಟಿವಿ ನೋಡು ಎಂದೆಲ್ಲಾ ಬೈದಿದ್ದಾರೆ.

ಚೆಲ್ಲಿದ ಅನ್ನ ಕ್ಲೀನ್ ಮಾಡಲು ಹೇಳಿದ್ದಾರೆ. ಆದರೆ ತಾಯಿ ಬೈಗಳು ಮಗಳಿಗೆ ಸಹಿಸಲು ಸಾಧ್ಯವಾಗಿಲ್ಲ. ಪರಿಣಾಮ 7ನೇ ತರಗತಿ ವಿದ್ಯಾರ್ಥಿನಿ ಬದುಕು ಅಂತ್ಯಗೊಳಿಸಿದ್ದಾಳೆ.

ಬಿದ್ದ ಅನ್ನ ಎಲ್ಲವನ್ನೂ ಕ್ಲೀನ್ ಮಾಡಲು ಸೂಚಿಸಿದ್ದಾರೆ. ತೀವ್ರ ನೋವಿನಿಂದ ಚೆಲ್ಲಿದ ಅನ್ನ ತೆಗೆದು ಕ್ಲೀನ್ ಮಾಡಿದ್ದಾಳೆ. ಬಳಿಕ ತಾಯಿ ಜೊತೆ ಮಗಳು ಸುಪ್ರೀತಾ ಮಾತನಾಡಲೇ ಇಲ್ಲ.

ಮಗಳಿಗೆ ಬುದ್ದಿ ಮಾತು ಹೇಳಿದ ತಾಯಿ ಕೆಲಸಕ್ಕೆ ಹೊರಟಿದ್ದಾರೆ. ಆದರೆ ತಾಯಿ ಬೈಗುಳ, ಬುದ್ದಿ ಮಾತು ಏನೇ ಹೇಳಿದರೂ ಮಗಳು ಸುಪ್ರೀತಾ ಒಂದು ಮಾತು ಆಡಲಿಲ್ಲ.

ಅಷ್ಟರಲ್ಲೇ ಗಟ್ಟಿ ನಿರ್ಧಾರ ಮಾಡಿದ್ದಳು. ತಾಯಿ ಮನೆಯಿಂದ ಹೊರಗೆ ಹೋದ ಕೆಲ ಹೊತ್ತಲ್ಲೇ ಬದುಕು ಅಂತ್ಯಗೊಳಿಸಿದ್ದಾಳೆ.

Amma was a student who committed suicide because of her brainstorming

Share

Leave a comment

Leave a Reply

Your email address will not be published. Required fields are marked *

Don't Miss

ದಬ್ಬಾಳಿಕೆಯಿಂದ ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಯತ್ನ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ದಬ್ಬಾಳಿಕೆಯ ಮೂಲಕ ಜಾರಿಗೆ ತರಲು ಮುಂದಾಗಿದ್ದಾರೆ ಎಂದು ಜೆಡಿಎಸ್ ರಾಷ್ಟ್ರೀಯ ವಕ್ತಾರ ಸುಧಾಕರ ಶೆಟ್ಟಿ ಆರೋಪಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು,...

ಮೆಡಿಕಲ್ ಕಾಲೇಜು ಆಸ್ಪತ್ರೆ ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸಲಿ

ಚಿಕ್ಕಮಗಳೂರು:  ಮೆಡಿಕಲ್ ಕಾಲೇಜು ಮತ್ತು ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಸ್ಥಾಪಿಸಿರುವ ಮೂಲ ಉದ್ದೇಶ ಇನ್ನೂ ಸಂಪೂರ್ಣವಾಗಿ ಈಡೇರಿಲ್ಲ. ಬಡ ರೋಗಿಗಳಿಗೆ ಜಿಲ್ಲೆಯಲ್ಲೇ ಉತ್ತಮ ಚಿಕಿತ್ಸೆ ದೊರೆಯುವಂತೆ, ಆಸ್ಪತ್ರೆಯನ್ನು ತಕ್ಷಣ ಪೂರ್ಣ ಪ್ರಮಾಣದಲ್ಲಿ...

Related Articles

ಬಯಲ ಬಂಗಾರದ”ಈರುಳ್ಳಿ” ಬಲು ದೂರ,ದೂರ

ಅಜ್ಜಂಪುರ: ಚಿಕ್ಕಮಗಳೂರು ಜಿಲ್ಲೆಯಲ್ಲಿ “ಬಯಲ ಬಂಗಾರದ ಬೆಳೆ ಬೆಳೆಯುವ ಕಪ್ಪು ಮಣ್ಣು ಅಜ್ಜಂಪುರ ಮತ್ತು ಕಡೂರು...

ರೈತನ ಮನೆ ಮೇಲೆ ಬೃಹತ್ ಮರ ಬಿದ್ದು ಸಂಪೂರ್ಣ ಮನೆ ಜಖಂ

ಚಿಕ್ಕಮಗಳೂರು:  ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಗಾಳಿಯ ವೇಗ ಹೆಚ್ಚಿರುವುದರಿಂದ ಮರಗಳು ಧರೆಗುರುಳುತ್ತಿವೆ. ಮೂಡಿಗೇರೆಯ ಕೋಳೂರು...

ಆಸ್ತಿ- ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂಪತ್ತು

ಚಿಕ್ಕಮಗಳೂರು:  ಆಸ್ತಿ ಮತ್ತು ಅಂತಸ್ತಿಗಿಂತ ಆರೋಗ್ಯವು ಮನುಷ್ಯನ ಅತಿದೊಡ್ಡ ಸಂ ಪತ್ತು. ಈ ಆರೋಗ್ಯಯುತ ಬದುಕು...

ಭದ್ರಾ ಮೇಲ್ದಂಡೆ ಯೋಜನೆಗೆ ರಾಜ್ಯದಿಂದಲೇ 12 ಸಾವಿರ ಕೋಟಿ ರೂ. ವೆಚ್ಚ

ಚಿಕ್ಕಮಗಳೂರು:  ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‌ನಲ್ಲಿ ೫,೩೦೦ ಕೋಟಿ ರೂ. ಘೋಷಿಸಿದ್ದ ಕೇಂದ್ರ ಸರ್ಕಾರ ಇದುವರೆಗೆ...