Home Crime News ಅಮೃತಾಪುರ ರೆವೆನ್ಯೂ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ
Crime News

ಅಮೃತಾಪುರ ರೆವೆನ್ಯೂ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ

Share
Share

ಚಿಕ್ಕಮಗಳೂರು : ತರೀಕೆರೆ ತಾಲ್ಲೂಕಿನ ಅಮೃತಾಪುರ ಹೋಬಳಿಯ ಕಂದಾಯ ಅಧಿಕಾರಿ ಕಾಂತರಾಜ್ ಇಂದು ಲಂಚ ಸ್ವೀಕರಿಸುವಾಗ ಲೋಕಯುಕ್ತ ಪೊಲೀಸ್ ರ ಬಲೆಗೆ ಸಿಕ್ಕಿಬಿದ್ದಿದ್ದಾನೆ.

ಹೊಸಹಳ್ಳಿ ತಾಂಡ್ಯದ ಕುಮಾರನಾಯ್ಕ ಎಂಬ ರೈತರ ಆರ್,ಟಿ,ಸಿ ತಿದ್ದುಪಡಿ ಮಾಡಲು ಕಳೆದ ಒಂದು ವರ್ಷದಿಂದ ಸತಾಯಿಸುತ್ತಿದ್ದು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾಂತರಾಜ್ ಇಂದು ತರೀಕೆರೆ ತಾಲ್ಲೂಕು ಕಛೇರಿಯಲ್ಲಿ ಐದು ಸಾವಿರ ಲಂಚ ಪಡೆಯುವಾಗ ಲೋಕಯುಕ್ತ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ಹಾಗೂ ಚಂದ್ರಶೇಖರ್ ನೇತೃತ್ವದ ತಂಡಕ್ಕೆ ಸಿಕ್ಕಿಬಿದ್ದಿದ್ದಾನೆ. ಲೋಕಯುಕ್ತ ಪೊಲೀಸ್ ರು ಕಾಂತರಾಜ್ ನನ್ನು ಬಂಧಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಕಾಂತರಾಜ್ ಅಮೃತಾಪುರ ಹೋಬಳಿಯ ಆರ್,ಐ ಆಗಿ ಹಲವು ರೈತರಿಗೆ ಹಿಂಸೆ ನೀಡಿ ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿದ್ದವು ಇದೇ ಜಾಗದಲ್ಲಿ ಮುಂದುವರೆಯಲು ಆರು ಲಕ್ಷಕ್ಕೂ ಹೆಚ್ಚು ಹಣ ನೀಡಿದ್ದಾನೆ ಎಂದು ರೈತರು ದೂರುತ್ತಿದ್ದರು ಹಾವು ಹೊಡೆದು ಹದ್ದಿಗೆ ಹಾಕಿದ ಕಾಂತರಾಜ್ ನಂತಹ ನೌಕರರು ತಾಲ್ಲೂಕಿನಲ್ಲಿ ಹೆಚ್ಚಿದ್ದಾರೆ ಎಂದು ಜನರ ದೂರಿಗೆ ಲೋಕಯುಕ್ತ ಪೋಲಿಸ್ ರ ಕಾರ್ಯಕ್ಕೆ ಜನ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆ ಯಲ್ಲಿ ಲೋಕಾಯುಕ್ತ ಪೊಲೀಸರಾದ ಲೋಕೇಶ್ ಗಿರೀಶ್ ಸವಿನಯ್ ಇತರರು ಇದ್ದರು

Share

Leave a comment

Leave a Reply

Your email address will not be published. Required fields are marked *

Don't Miss

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦ ರಂದು ಲೋಕಾರ್ಪಣೆ ಮಾಡಲಾಗುವುದು ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ಅವರು ಹೇಳಿದರು. ಸೋಮವಾರ ಕೆರೆಯ...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು...

Related Articles

ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ

ಲಿಂಗದಹಳ್ಳಿ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಸಹೋದರನ ಮೇಲೆಯೇ ಕಬ್ಬಿಣದ ಪೈಪ್‌ನಿಂದ ಹಲ್ಲೆ ನಡೆಸಿ ಕೊಲೆ ಮಾಡಿರುವ...

₹5 ಲಕ್ಷ ಮೌಲ್ಯದ ಶ್ರೀಗಂಧದ ಮರಗಳ ಕಳವು

ತರೀಕೆರೆ: ಕೃಷಿ ತೋಟಕ್ಕೆ ನುಗ್ಗಿದ ಕಳ್ಳರು ಸುಮಾರು 15 ಶ್ರೀಗಂಧದ ಮರಗಳನ್ನು ಕಡಿದು ಕಳವು ಮಾಡಿಕೊಂಡು...

ಸ್ಕೂಟರ್‌ ಅಪಘಾತ: ಚಿಕಿತ್ಸೆ ಫಲಿಸದೆ ಸಾವು

ಕಡೂರು: ರಸ್ತೆಯಲ್ಲಿ ಅಡ್ಡಬಂದ ನಾಯಿಗೆ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಸ್ಕೂಟರ್‌ ನಿಯಂತ್ರಣ ತಪ್ಪಿ ಬಿದ್ದು...

ಮುಳ್ಳಯ್ಯನಗಿರಿ ಕ್ರಾಸ್ ಬಳಿ ಟಿಟಿ ವಾಹನ ಮರಕ್ಕೆ ಡಿಕ್ಕಿ

ಚಿಕ್ಕಮಗಳೂರು: ತಾಲೂಕಿನ ಪ್ರಸಿದ್ಧ ಪ್ರವಾಸಿ ತಾಣ ಮುಳ್ಳಯ್ಯನಗಿರಿ ಕ್ರಾಸ್ ಬಳಿ ಶುಕ್ರವಾರ ಇನೋವಾ ಕಾರು ನಿಯಂತ್ರಣ...