Home Crime News ಅಮೃತಾಪುರ ರೆವೆನ್ಯೂ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ
Crime News

ಅಮೃತಾಪುರ ರೆವೆನ್ಯೂ ಇನ್ಸ್ ಪೆಕ್ಟರ್ ಲೋಕಾಯುಕ್ತ ಬಲೆಗೆ

Share
Share

ಚಿಕ್ಕಮಗಳೂರು : ತರೀಕೆರೆ ತಾಲ್ಲೂಕಿನ ಅಮೃತಾಪುರ ಹೋಬಳಿಯ ಕಂದಾಯ ಅಧಿಕಾರಿ ಕಾಂತರಾಜ್ ಇಂದು ಲಂಚ ಸ್ವೀಕರಿಸುವಾಗ ಲೋಕಯುಕ್ತ ಪೊಲೀಸ್ ರ ಬಲೆಗೆ ಸಿಕ್ಕಿಬಿದ್ದಿದ್ದಾನೆ.

ಹೊಸಹಳ್ಳಿ ತಾಂಡ್ಯದ ಕುಮಾರನಾಯ್ಕ ಎಂಬ ರೈತರ ಆರ್,ಟಿ,ಸಿ ತಿದ್ದುಪಡಿ ಮಾಡಲು ಕಳೆದ ಒಂದು ವರ್ಷದಿಂದ ಸತಾಯಿಸುತ್ತಿದ್ದು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಕಾಂತರಾಜ್ ಇಂದು ತರೀಕೆರೆ ತಾಲ್ಲೂಕು ಕಛೇರಿಯಲ್ಲಿ ಐದು ಸಾವಿರ ಲಂಚ ಪಡೆಯುವಾಗ ಲೋಕಯುಕ್ತ ಇನ್ಸ್ಪೆಕ್ಟರ್ ಮಲ್ಲಿಕಾರ್ಜುನ್ ಹಾಗೂ ಚಂದ್ರಶೇಖರ್ ನೇತೃತ್ವದ ತಂಡಕ್ಕೆ ಸಿಕ್ಕಿಬಿದ್ದಿದ್ದಾನೆ. ಲೋಕಯುಕ್ತ ಪೊಲೀಸ್ ರು ಕಾಂತರಾಜ್ ನನ್ನು ಬಂಧಿಸಿದ್ದಾರೆ.

ಕಳೆದ ನಾಲ್ಕು ವರ್ಷಗಳಿಂದ ಕಾಂತರಾಜ್ ಅಮೃತಾಪುರ ಹೋಬಳಿಯ ಆರ್,ಐ ಆಗಿ ಹಲವು ರೈತರಿಗೆ ಹಿಂಸೆ ನೀಡಿ ಹಣ ವಸೂಲಿ ಮಾಡುತ್ತಿದ್ದ ಬಗ್ಗೆ ವ್ಯಾಪಕ ದೂರುಗಳು ಕೇಳಿ ಬಂದಿದ್ದವು ಇದೇ ಜಾಗದಲ್ಲಿ ಮುಂದುವರೆಯಲು ಆರು ಲಕ್ಷಕ್ಕೂ ಹೆಚ್ಚು ಹಣ ನೀಡಿದ್ದಾನೆ ಎಂದು ರೈತರು ದೂರುತ್ತಿದ್ದರು ಹಾವು ಹೊಡೆದು ಹದ್ದಿಗೆ ಹಾಕಿದ ಕಾಂತರಾಜ್ ನಂತಹ ನೌಕರರು ತಾಲ್ಲೂಕಿನಲ್ಲಿ ಹೆಚ್ಚಿದ್ದಾರೆ ಎಂದು ಜನರ ದೂರಿಗೆ ಲೋಕಯುಕ್ತ ಪೋಲಿಸ್ ರ ಕಾರ್ಯಕ್ಕೆ ಜನ ಮೆಚ್ಚಿಗೆ ವ್ಯಕ್ತಪಡಿಸಿದ್ದಾರೆ. ಕಾರ್ಯಾಚರಣೆ ಯಲ್ಲಿ ಲೋಕಾಯುಕ್ತ ಪೊಲೀಸರಾದ ಲೋಕೇಶ್ ಗಿರೀಶ್ ಸವಿನಯ್ ಇತರರು ಇದ್ದರು

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...

ಗಾಂಜಾ ಸೇವಿಸಿ ರಂಪಾಟ – ಏಳು ಮಂದಿ ಬಂಧನ

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಮಾದಕ ದ್ರವ್ಯ ಸೇವನೆ ವಿರುದ್ಧ ಪೊಲೀಸರು ವಿಶೇಷ ಕಾರ್ಯಾಚರಣೆ ಚುರುಕುಗೊಳಿಸಿದ್ದು ಸಾರ್ವಜನಿಕ ಸ್ಥಳಗಳಲ್ಲಿ...

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು...