Home namma chikmagalur chikamagalur ಆರು ಜಿಲ್ಲೆಗಳ ಪ್ರತಿನಿಧಿಸುವ ಸಂಸದರ ಒಳಗೊಂಡ ಸರ್ವಪಕ್ಷದ ನಿಯೋಗ
chikamagalurHomeLatest Newsnamma chikmagalur

ಆರು ಜಿಲ್ಲೆಗಳ ಪ್ರತಿನಿಧಿಸುವ ಸಂಸದರ ಒಳಗೊಂಡ ಸರ್ವಪಕ್ಷದ ನಿಯೋಗ

Share
Share

ಚಿಕ್ಕಮಗಳೂರು: ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ(ಇಎಸ್‌ಎ) ಘೋಷಣೆಯಿಂದ ಮಲೆನಾಡಿನ ಜನಜೀವನದ ಮೇಲೆ ಉಂಟಾಗಲಿರುವ ಪರಿಣಾಮದ ಕುರಿತು ಮನವರಿಕೆ ಮಾಡಿಸಲು ಸದ್ಯದಲ್ಲೇ ಆರು ಜಿಲ್ಲೆಗಳನ್ನು ಪ್ರತಿನಿಧಿಸುವ ಸಂಸದರನ್ನು ಒಳಗೊಂಡ ಸರ್ವಪಕ್ಷದ ನಿಯೋಗದೊಂದಿಗೆ ಕೇಂದ್ರ ಪರಿಸರ, ಅರಣ್ಯ ಮತ್ತು ಹವಮಾನ ಬದಲಾವಣೆ ಸಚಿವರನ್ನು ಭೇಟಿ ಮಾಡಲಾಗುವುದು ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ತಿಳಿಸಿದರು.

ಜಿಲ್ಲಾ ನಾಗರಿಕ ಮತ್ತು ರೈತ ಹೋರಾಟ ಸಮಿತಿ, ಜಿಲ್ಲಾ ಬೆಳೆಗಾರರ ಸಂಘ(ಕೆಜಿಎಫ್), ರೈತ ಒಕ್ಕೂಟ, ಕಸ್ತೂರಿ ರಂಗನ್ ಹೋರಾಟ ವೇದಿಕೆ ಮತ್ತು ರೈತ, ದಲಿತ, ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ‘ಮಲೆನಾಡಿನ ಉಳಿವಿಗಾಗಿ ರೈತರ ಬದುಕಿಗಾಗಿ ಸಂಸದರೊಂದಿಗೆ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು.

ರಾಜ್ಯದ 20,668 ಚದರ ಕಿಲೋ ಮೀಟರ್ ಪ್ರದೇಶವನ್ನು ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಣೆ ಮಾಡಲು ಉದ್ದೇಶಿಸಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ 137 ಹಳ್ಳಿಗಳು ಸೇರಿ 10 ಜಿಲ್ಲೆಗಳ 1,449 ಗ್ರಾಮಗಳಿಗೆ ಪರಿಣಾಮ ಬೀರಲಿದೆ. ಎಲ್ಲಾ ಜಿಲ್ಲೆಗಳ ಸಂಸದರೊಂದಿಗೆ ಮಾತನಾಡಲಾಗುವುದು. ಅವರೊಂದಿಗೆ ಸ್ಥಳೀಯರ ಹೋರಾಟಗಾರರು, ಸ್ಥಳೀಯ ಜನಪ್ರತಿನಿಧಿಗಳನ್ನು ಕರೆಯಲಾಗುವುದು ಎಂದು ಹೇಳಿದರು.

ಕರಡು ಅಧಿಸೂಚನೆ ತಿರಸ್ಕರಿಸುವ ಬಗ್ಗೆ ರಾಜ್ಯ ಸಚಿವ ಸಂಪುಟ ಕೂಡ ತೀರ್ಮಾನ ಕೈಗೊಂಡಿದೆ. ಇದರ ಜತೆಗೆ ಕೇರಳಂ ಮಾದರಿಯಲ್ಲಿ ಪ್ರತ್ಯೇಕ ಆಯೋಗ ರಚನೆ ಮಾಡಿ ವರದಿ ಪಡೆದು ಕೇಂದ್ರ ಸರ್ಕಾರಕ್ಕೆ ಸಲ್ಲಿಸಲು ಸಾಧ್ಯವಿದೆಯೇ ಎಂಬುದರ ಕುರಿತು ಚರ್ಚಿಸಲಾಗುವುದು. ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್ ಅವರೊಂದಿಗೂ ಮಾತನಾಡಿದ್ದು, ಮುಖ್ಯಮಂತ್ರಿ ಅವರನ್ನು ಭೇಟಿ ಮಾಡಿ ಮನವರಿಕೆ ಮಾಡಿಕೊಡಲಾಗುವುದು ಎಂದರು.

ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನಿರ್ದೇಶನದಂತೆ ಪರಿಸರ ಸೂಕ್ಷ್ಮ ಪ್ರದೇಶ ಘೋಷಣೆ ಸಂಬಂಧ ಪದೇ ಪದೇ ಕರಡು ಅಧಿಸೂಚನೆ ಹೊರಡಿಸುತ್ತಿದೆ. ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯಬೇಕಿದೆ. ಕೇರಳಂನಲ್ಲಿ ಪ್ರತ್ಯೇಕ ಆಯೋಗ ರಚಿಸಿ ವರದಿ ಪಡೆದಿದೆ. ನಂತರ ಹತ್ತು ಅಂಶಗಳ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದೆ. ಅದೇ ಮಾದರಿ ಅನುಸರಿಸಿದರೆ ಮಲೆನಾಡಿನ ಜನರಿಗೆ ನ್ಯಾಯ ದೊರಕಿಸಲು ಸಾಧ್ಯವೇ ಎಂಬುದನ್ನೂ ಚರ್ಚಿಸಲಾಗುವುದು ಎಂದು ಹೇಳಿದರು.

‘ಇನ್ನು ಒಂದೂವರೆ ತಿಂಗಳಲ್ಲಿ ಪರಿಸರ ಸೂಕ್ಷ್ಮ ಪ್ರದೇಶದ ಘೋಷಣೆ ಸಂಬಂಧ ಸ್ಪಷ್ಟ ನಿಲುವನ್ನು ಎಲ್ಲಾ ಪಕ್ಷದವರು ಸೇರಿ ತೆಗೆದುಕೊಳ್ಳುತ್ತೇವೆ. ಮಲೆನಾಡಿನ ಜನರ ಬದುಕಿನ ಪ್ರಶ್ನೆ ಆಗಿರುವುದರಿಂದ ಎಲ್ಲಾ ಪಕ್ಷದವರು ಒಟ್ಟಾಗಿ ಹೋರಾಟ ನಡೆಸಬೇಕಿದೆ’ ಎಂದರು.

ಇದಕ್ಕೂ ಮುನ್ನ ಮಾತನಾಡಿದ ಕಸ್ತೂರಿ ರಂಗನ್ ವರದಿ ವಿರೋಧಿ ಹೋರಾಟ ವೇದಿಕೆಯ ಎಸ್.ವಿಜಯಕುಮಾರ್, ‘ಪರಿಭಾವಿತ ಅರಣ್ಯ, ಸೆಕ್ಷನ್ -4 ಹೆಸರಿನಲ್ಲಿ ಮಲೆನಾಡು ಜನರ ಬದುಕು ಕಸಿದುಕೊಳ್ಳುವ ಪ್ರಯತ್ನ ನಡೆಯುತ್ತಿದೆ. ಪರಿಸರ ಸೂಕ್ಷ್ಮ ಪ್ರದೇಶ ಫೋಷಣೆ ಮಾಡುವ ಮೂಲಕ ಜನರ ಎಲ್ಲಾ ಹಕ್ಕುಗಳನ್ನು ಕಸಿಯಲಾಗುತ್ತದೆ. ಇದನ್ನು ತಡೆಯಲು ಎಲ್ಲಾ ಪಕ್ಷದ ಜನಪ್ರತಿನಿಧಿಗಳು ಒಗ್ಗಟ್ಟಿನಿಂದ ಪ್ರಯತ್ನ ಮಾಡಬೇಕು’ ಎಂದು ಹೇಳಿದರು.

ಕಾಫಿ ಮಂಡಳಿ ಅಧ್ಯಕ್ಷ ದಿನೇಶ್ ದೇವವೃಂದ, ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ಟಿ.ರಾಜಶೇಖರ್, ಕಾಂಗ್ರೆಸ್ ಮುಖಂಡ ಬಿ.ಎಸ್.ಜಯರಾಂ, ರೈತ ಮುಖಂಡರಾದ ಡಿ.ಮಹೇಶ್, ಸುನೀಲ್‌ಕುಮಾರ್, ವಸಂತಕುಮಾರ್, ರತೀಶ್‌ಕುಮಾರ್, ಬಾಲಕೃಷ್ಣ, ದಲಿತ ಮುಖಂಡರಾದ ಕೆ.ಟಿ.ರಾಧಾಕೃಷ್ಣ, ಹುಣಸೆಮಕ್ಕಿ ಲಕ್ಷ್ಮಣ್, ಕಾಂಗ್ರೆಸ್ ಮುಖಂಡ ಭರತ್ ಹಾಗೂ ಇತರರು ಭಾಗವಹಿಸಿದ್ದರು.

An all-party delegation comprising MPs representing six districts

Share

Leave a comment

Leave a Reply

Your email address will not be published. Required fields are marked *

Don't Miss

ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ನಾಗೇಂದ್ರ ಅವರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿಯಿಂದ ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಯಿತು. ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ 50ಕ್ಕೂ ಹೆಚ್ಚು ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು...

ರಾಷ್ಟ್ರಧ್ವಜ ಅವಮಾನ ಆರೋಪ: ಕಾನೂನು ಕ್ರಮಕ್ಕೆ ರೈತ ಸಂಘ ಆಗ್ರಹ

ಚಿಕ್ಕಮಗಳೂರು: ಸ್ವಾತಂತ್ರ್ಯ ದಿನಾಚರಣೆಯಂದು ಬೆಳಿಗ್ಗೆ ರಾಷ್ಟ್ರಧ್ವಜಾರೋಹಣ ಮಾಡಿ, ಮಧ್ಯಾಹ್ನದ ವೇಳೆಗೆ ಧ್ವಜವನ್ನು ಅವರೋಹಣ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಸಮಗ್ರ ತನಿಖೆ ನಡೆಸಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಕರ್ನಾಟಕ ರಾಜ್ಯ...

Related Articles

ಬಿಡದಿ ರೈತರ ಹೋರಾಟ ಬೆಂಬಲಿಸಿ ಆ.25ರಂದು ವಿಧಾನಸೌಧ ಚಲೋ

ಚಿಕ್ಕಮಗಳೂರು: ಬಿಡದಿ ಟೌನ್‌ಶಿಪ್ ಯೋಜನೆಗಾಗಿ ಫಲವತ್ತಾದ ಕೃಷಿ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವ ಸರ್ಕಾರದ ಕ್ರಮವನ್ನು ವಿರೋಧಿಸಿ ಹಾಗೂ...

ಮುಂಗಾರು ಋತುವಿನಲ್ಲಿ ಜಿಲ್ಲೆಯಲ್ಲಿ ಶೇ.35 ಮಳೆ ಕೊರತೆ

ಚಿಕ್ಕಮಗಳೂರು: ಜಿಲ್ಲೆಯಲ್ಲಿ ಪ್ರಸಕ್ತ ಮುಂಗಾರು ಋತುವಿನಲ್ಲಿ ನಿರೀಕ್ಷಿತ ಮಟ್ಟದಲ್ಲಿ ಮಳೆಯಾಗದೆ ಶೇ.೩೫ರಷ್ಟು ಮಳೆ ಕೊರತೆ ಉಂಟಾಗಿದೆ...

ಎಸ್‌ಐಆರ್: ಜಿಲ್ಲೆಯ ಮತದಾರರ ಕರಡು ಪಟ್ಟಿ ಪ್ರಕಟ

ಚಿಕ್ಕಮಗಳೂರು: ಭಾರತ ಚುನಾವಣಾ ಆಯೋಗದ ಸೂಚನೆಯಂತೆ ಜಿಲ್ಲೆಯಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್-೨೦೨೬)...

ಟಿಪ್ಪು ಸುಲ್ತಾನ್ ಕಟೌಟ್ ಗೆ ದೇಶದ್ರೋಹಿ ಹಾಡು-7 ಜನ ಪೊಲೀಸರ ವಶಕ್ಕೆ

ಚಿಕ್ಕಮಗಳೂರು: ಕಾಫಿನಾಡಲ್ಲಿ ಪಾಕ್ ಪ್ರೇಮಿಗಳು ಮತ್ತೆ ಮುನ್ನೆಲೆಗೆ ಬಂದಿದ್ದಾರೆ. ಈದ್ ಮಿಲಾದ್ ಆಚರಣೆಗೆ ಟಿಪ್ಪು ಸುಲ್ತಾನ್...