Home ತಿರುಪತಿ ರೈಲಿಗೆ ನಮಸ್ಕಾರ ಮಾಡಿದ ವೃದ್ಧೆ
HomechikamagalurLatest Newsnamma chikmagalur

ತಿರುಪತಿ ರೈಲಿಗೆ ನಮಸ್ಕಾರ ಮಾಡಿದ ವೃದ್ಧೆ

Share
Share

ಚಿಕ್ಕಮಗಳೂರು: ಕಾಫಿನಾಡು ಚಿಕ್ಕಮಗಳೂರಿನಲ್ಲಿ ನೂತನ ರೈಲಿಗೆ ಚಾಲನೆ ಸಿಕ್ಕಿದೆ. ಈ ಸಂದರ್ಭದಲ್ಲಿ ಭಕ್ತಿಭಾವದ ದೃಶ್ಯವೊಂದು ಗಮನ ಸೆಳೆಯಿತು. ತಿರುಪತಿಗೆ ಹೊಸದಾಗಿ ಪ್ರಾರಂಭವಾಗಿರುವ ರೈಲಿಗೆ ವೃದ್ಧೆಯೊಬ್ಬರು ಮೂರು ಬಾರಿ ಅಡ್ಡ ಬಿದ್ದು ಭಕ್ತಿಯಿಂದ ನಮಸ್ಕಾರ ಸಲ್ಲಿಸಿದರು.

ಹಿರೇಮಗಳೂರಿನ ನಿವಾಸಿ ಲಕ್ಷ್ಮೀ ಬಾಯಿ, ವರ್ಷಕ್ಕೆ ಮೂರರಿಂದ ನಾಲ್ಕು ಬಾರಿ ತಮ್ಮ ಮನೆದೇವರಾದ ತಿರುಪತಿ ವೆಂಕಟೇಶ್ವರನ ದರ್ಶನಕ್ಕಾಗಿ ತೆರಳುತ್ತಾರೆ. ಇದೀಗ ಚಿಕ್ಕಮಗಳೂರಿನಿಂದ ತಿರುಪತಿಗೆ ನೇರವಾಗಿ ರೈಲು ಸಂಚಾರ ಪ್ರಾರಂಭವಾದ ಹಿನ್ನಲೆಯಲ್ಲಿ ಲಕ್ಷ್ಮೀ ಬಾಯಿ, ರೈಲಿಗೆ ‘ಭಕ್ತಿಯ ಬೀಳ್ಕೊಡುಗೆ’ ನೀಡಿದರು.

ಇದಕ್ಕೆ ಪ್ರತಿಕ್ರಿಯೆ ನೀಡಿದ ಸಚಿವ ಸೋಮಣ್ಣ ಪ್ರಧಾನ ಮಂತ್ರಿ ಮೋದಿ ಅವರ ವಿಕಸಿತ ಭಾರತದ ಕಲ್ಪನೆಯಿಂದ ಇದು ಸಾಧ್ಯವಾಗಿದೆ. ಹೀಗಾಗಿ ಆ ತಾಯಿಗೆ ತಿರುಪತಿಗೆ ರೈಲು ಆರಂಭವಾಗಿರುವುದಕ್ಕೆ ಸಂತೋಷವಾಗಿದೆ. ತಿರುಪತಿ ತಿಮ್ಮಪ್ಪನಿಗೆ ಎಷ್ಟು ನಮಸ್ಕಾರ ಸಲ್ಲಿಸುತ್ತೇನೋ ಅಷ್ಟು ನಮಸ್ಕಾರವನ್ನು ಆ ತಾಯಿಗೆ ಸಲ್ಲಿಸುತ್ತೇನೆ ಎಂದರು.

An old woman saluted the Tirupati train

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷ

ಕೊಟ್ಟಿಗೆಹಾರ : ದಕ್ಷಿಣ ಕನ್ನಡ ಹಾಗೂ ಚಿಕ್ಕಮಗಳೂರನ್ನು ಸಂಪರ್ಕಿಸುವ ಚಾರ್ಮಾಡಿ ಘಾಟಿಯಲ್ಲಿ ಚಿರತೆ ಪ್ರತ್ಯಕ್ಷವಾಗಿದ್ದು, ಮಳೆಗಾಲದ ಹಿನ್ನೆಲೆ ಮತ್ತು ಕಡಿಮೆಯಾದ ದೃಶ್ಯತೆಯಿಂದ ಪ್ರವಾಸಿಗರಿಗೆ ಹೆಚ್ಚಿನ ಅಪಾಯ ಸಾಧ್ಯತೆ ಇರುವ ಕುರಿತು ಆತಂಕ...

ತೀವ್ರಗೊಂಡ ಉದ್ಯಮಿ ಪತ್ನಿಯ ಆತ್ಮಹತ್ಯೆ ಪ್ರಕರಣ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಬೆಚ್ಚಿಬೀಳಿಸುವಂತಹ ಘಟನೆಯೊಂದು ನಡೆದಿದ್ದು ನಗರದ ಉದ್ಯಮಿ ರಾಜೇಶ್ ಅವರ ಪತ್ನಿ ಸುಮ (55) ಆಲೇನಹಳ್ಳಿಯಲ್ಲಿರುವ ತಮ್ಮ ನಿವಾಸದಲ್ಲಿ ರಕ್ತದ ಮಡುವಿನಲ್ಲಿ ಶವವಾಗಿ ಪತ್ತೆಯಾಗಿದ್ದಾರೆ. ರಿವಾಲ್ವರ್‌ನಿಂದ ಗುಂಡು ಹಾರಿಸಿಕೊಂಡು ಅವರು...

Related Articles

ಅತ್ಯಾಚಾರ ಆರೋಪಿಗೆ 20 ವರ್ಷ ಕಠಿಣ ಸಜೆ-ದಂಡ

ಚಿಕ್ಕಮಗಳೂರು: ಅಪ್ರಾಪ್ತೆಯೊಬ್ಬಳು ಗರ್ಭಿಣಿಯಾಗಲು ಕಾರಣನಾದ ಆರೋಪಿಗೆ ನಗರದ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ (ವಿಶೇಷ) ಎಫ್.ಟಿ.ಎಸ್.ಈ-೧ರ...

ನರೇಂದ್ರ ಮೋದಿ ಭಾರತದ ಅತಿ ಹೆಚ್ಚು ಕಾಲ ಸೇವೆ ಸಲ್ಲಿಸಿದ ಚುನಾಯಿತ ಪ್ರಧಾನಿ

ಚಿಕ್ಕಮಗಳೂರು : ಸಾರ್ವತ್ರಿಕ ಚುನಾವಣೆಗಳ ಮೂಲಕ ಭಾರತದ ಅತಿ ಹೆಚ್ಚುಕಾಲ ಚುನಾಯಿತ ಪ್ರಧಾನಿಯಾಗಿ ಸೇವೆ ಸಲ್ಲಿಸಿರುವ...

ಅಧಿಕಾರ ಸ್ವೀಕಾರ ಸಮಾರಂಭಕ್ಕೆ ಸಾವಿರಾರು ಕಾಂಗ್ರೆಸ್ ಕಾರ್ಯಕರ್ತರು

  ಚಿಕ್ಕಮಗಳೂರು : ಕೆಪಿಸಿಸಿ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಬಿ.ಕೆ.ಹರಿಪ್ರಸಾದ್ ಅವರ ಅಧಿಕಾರ ಸ್ವೀಕಾರ ಸಮಾರಂಭ...

ವಿದ್ಯುತ್ ಕ್ಷೇತ್ರ ಖಾಸಗಿಕರಣಕ್ಕೆ ರೈತ ಸಂಘ ವಿರೋಧ

ಚಿಕ್ಕಮಗಳೂರು : ವಿದ್ಯುತ್ ಕ್ಷೇತ್ರವನ್ನು ಟಾಟಾ ಪವರ್ ಕಂಪನಿಗೆ ನೀಡುವ ಮೂಲಕ ಖಾಸಗಿಕರಣಗೊಳಿಸುವ ನಿರ್ಧಾರವನ್ನು ಖಂಡಿಸುವುದಾಗಿ...