Home namma chikmagalur 20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ
namma chikmagalurchikamagalurHomeLatest NewsPolitical News

20 ವರ್ಷ ಹೊರಗಿನವರೆ ಜಿಲ್ಲೆಗೆ ಉಸ್ತುವಾರಿ ಸಚಿವರಾಗಿದ್ದಾರೆ

Share
Share

ಮೂಡಿಗೆರೆ:‘ ರಾಜ್ಯದ ಮುಖ್ಯಮಂತ್ರಿ ಬದಲಾವಣೆ ಬಗ್ಗೆ ವಿರೋಧ ಪಕ್ಷಗಳು ಹತಾಶೆಯಿಂದ ಬಾಯಿ ಚಪಲಕ್ಕಾಗಿ ಮಾತನಾಡುತ್ತಿವೆ’ ಎಂದು ಕಾಂಗ್ರೆಸ್ ನಾಯಕಿ ಮೋಟಮ್ಮ ಹೇಳಿದರು.

ಪಟ್ಟಣದಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಆಂತರಿಕ ವಿಚಾರದಲ್ಲಿ ಪದೇ ಪದೇ ಮೂಗು ತೂರಿಸುವ ಬಿಜೆಪಿ, ಕೇಂದ್ರದಲ್ಲಿ 11 ವರ್ಷದ ಆಡಳಿತ ವಿಫಲತೆಯನ್ನು ಬಿಜೆಪಿ ನಾಯಕರು ಏಕೆ ಪ್ರಶ್ನಿಸುತ್ತಿಲ್ಲ ಎಂದು ಪ್ರಶ್ನಿಸಿದರು.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ನಾಯಕತ್ವದ ಬಗ್ಗೆ ಯಾರೊಬ್ಬರು ತಲೆಕೆಡಿಸಿಕೊಳ್ಳಬೇಕಾದ ಅಗತ್ಯವಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಶಾಸಕರು, ಸಚಿವರು, ಸಂಸದರು ಪಕ್ಷದ ನಾಯಕರು ಒಗ್ಗಟ್ಟಿನಿಂದ ಕೆಲಸ ಮಾಡುತ್ತಿದ್ದಾರೆ. ಒಂದಿಬ್ಬರು ನಾಯ ಕತ್ವ ಬದಲಾವಣೆ ವಿಚಾರವನ್ನು ಪ್ರಶ್ನಿಸುತ್ತಿದ್ದಾರೆ.

ಈ ಬಗ್ಗೆ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣ ದೀಪ್ ಸಿಂಗ್ ಸುರ್ಜಿವಾಲ ಜತೆ ಚರ್ಚಿಸಿ ದ್ದೇನೆ. ನಾಯಕತ್ವ ಬದಲಾವಣೆ ಬಗ್ಗೆ ಯಾರೊ ಬ್ಬರೂ ಅಪಸ್ವರ ಎತ್ತ ದಂತೆ ಹೈಕಮಾಂಡ್ ಕಠಿಣ ನಿರ್ಧಾರ ಕೈಗೊಳ್ಳ ಬೇಕು ಎಂದು ಸಲಹೆ ನೀಡಿದ್ದೇನೆ’ ಎಂದರು.

‘ಎಸ್.ಎಂ.ಕೃಷ್ಣ ಮುಖ್ಯಮಂತ್ರಿಯಾಗಿದ್ದ ವೇಳೆ ಜಿಲ್ಲೆಯಲ್ಲಿ ಸಿ.ಆರ್.ಸಗೀರ್ ಅಹ್ಮದ್, ಡಿ.ಬಿ.ಚಂದ್ರೇಗೌಡ, ನಾನು ಸೇರಿದಂತೆ ಮೂವರು ಸಚಿವರಾಗಿದ್ದೆವು. ನಂತರ ಬಂದ ಸರ್ಕಾರಗಳು ಜಿಲ್ಲೆಯ ಶಾಸಕರಿಗೆ ಒಂದೊಂದು ವರ್ಷ ಮಾತ್ರ ಸಚಿವ ಸ್ಥಾನ ದೊರಕಿದೆ. ಜಿಲ್ಲೆಗೆ ಸಚಿವ ಸ್ಥಾನ ಸಿಗದೆ 22 ವರ್ಷದಲ್ಲಿ 20 ವರ್ಷ ಹೊರಗಿನವರೆ ಉಸ್ತುವಾರಿ ಸಚಿವರಾಗಿದ್ದಾರೆ. ಈ ಬಾರಿ ಸಂಪುಟ ವಿಸ್ತರಣೆ ವೇಳೆ ಶಾಸಕಿ ನಯನಾ ಮೋಟಮ್ಮ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಒತ್ತಡ ಹಾಕುವುದಿಲ್ಲ.

ಮಹಿಳಾ ಕೋಟದಲ್ಲಿ ನಯನಾ ಮೋಟಮ್ಮ ಅವರಿಗೆ ಸಚಿವ ಸ್ಥಾನ ನೀಡಿದರೆ ಜಿಲ್ಲೆಯಲ್ಲಿ ಪಕ್ಷ ಇನ್ನಷ್ಟು ಚುರುಕುಗೊಳ್ಳುವ ಜತೆಗೆ ಅಭಿವೃದ್ಧಿಗೆ ಸಹಕಾರ ಸಿಗುತ್ತದೆ. ಮುಖ್ಯಮಂತ್ರಿಗಳು ಹಾಗೂ ಕಾಂಗ್ರೆಸ್ ಈ ಬಗ್ಗೆ ಸ್ಪಷ್ಟ ನಿರ್ಧಾರ ತೆಗೆದುಕೊಳ್ಳುವ ಭರವಸೆಯಿದೆ’ ಎಂದು ತಿಳಿಸಿದರು.

An outsider has been the in-charge minister for the district for 20 years.

Share

Leave a comment

Leave a Reply

Your email address will not be published. Required fields are marked *

Don't Miss

ನಗರದಲ್ಲಿ ಎರಡು ಗುಂಪುಗಳ ನಡುವಿನ ಗಲಾಟೆ

ಚಿಕ್ಕಮಗಳೂರು : ಮಧ್ಯರಾತ್ರಿ ರಸ್ತೆಯಲ್ಲಿ ಕೆಟ್ಟ ಶಬ್ದಗಳಿಂದ ಬೈದಾಡಿಕೊಳ್ಳುತ್ತಾ ಸಾರ್ವಜನಿಕರ ನೆಮ್ಮದಿಗೆ ಭಂಗ ತಂದ ಎರಡು ಗುಂಪುಗಳ ನಡುವಿನ ಗಲಾಟೆಯನ್ನು ತಡೆದ ಗಸ್ತು ಪೊಲೀಸರು ಮೂವರನ್ನು ವಶಕ್ಕೆ ಪಡೆದ ಘಟನೆ ಚಿಕ್ಕಮಗಳೂರು...

ಬಡ ಸಾಗುವಳಿದಾರರನ್ನು ಒಕ್ಕಲೆಬ್ಬಿಸಬಾರದು.

ಚಿಕ್ಕಮಗಳೂರು:   ಐದು ಎಕರೆಗಿಂತ ಕಡಿಮೆ ಭೂಮಿ ಹೊಂದಿರುವ ಬಡ ಸಾಗುವಳಿ ದಾರರನ್ನು ಯಾವುದೇ ಕಾರಣಕ್ಕೂ ಒಕ್ಕಲೆಬ್ಬಿಸಬಾರದು. ಈ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಅರಣ್ಯ ಸಚಿ ವರು ಸ್ಪಷ್ಟ ಸೂಚನೆ ನೀಡಿದ್ದಾರೆ ಎಂದು...

Related Articles

ಪುಸ್ತಕ ಸಂಸ್ಕೃತಿ-ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ

ಚಿಕ್ಕಮಗಳೂರು: ಪುಸ್ತಕ ಸಂಸ್ಕೃತಿ ಸಾಮಾಜಿಕ ಜವಾಬ್ದಾರಿ ಬೆಳೆಸುತ್ತದೆ ಎಂದು ನ್ಯೂಸ್ ಕಿಂಗ್ ಆನ್ಲೈನ್ ಪತ್ರಿಕೆಯ ಸಂಪಾದಕ...

ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ ಕಾರು

ಕಳಸ: ಸೇತುವೆಗೆ ತಡೆಗೋಡೆ ಇಲ್ಲದ ಪರಿಣಾಮ ಪ್ರವಾಸಿಗರ ಕಾರೊಂದು ನಿಯಂತ್ರಣ ತಪ್ಪಿ ಸೋಮಾವತಿ ನದಿಗೆ ಉರುಳಿದ...

ಸ್ವಾತಂತ್ರ್ಯೋತ್ಸವದಲ್ಲಿ ದಲಿತ ಸಂಘಟನೆಗಳ ಪ್ರತಿಭಟನೆ 

ಚಿಕ್ಕಮಗಳೂರು: ನಗರದ ನೇತಾಜಿ ಸುಭಾಷ್‌ಚಂದ್ರ ಬೋಸ್ ಜಿಲ್ಲಾ ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮ ಮುಗಿದ ಬೆನ್ನಲ್ಲೇ ದಲಿತ...

‘ದೇಶ ಮೊದಲು’ ಎಂಬ ಭಾವನೆಯೊಂದಿಗೆ ಕರ್ತವ್ಯ ನಿರ್ವಹಿಸಿ

ಚಿಕ್ಕಮಗಳೂರು:  ಸ್ವಾತಂತ್ರ್ಯದ ೮೦ನೇ ವರ್ಷದ ಸಂಭ್ರಮ ಕೇವಲ ಹಬ್ಬದ ಆಚರಣೆಯಾಗದೆ, ಸ್ವಾತಂತ್ರ್ಯ ಹೋರಾಟಗಾರರಿಗೆ ಕೃತಜ್ಞತೆ ಸಲ್ಲಿಸುವ,...