Home ಬುಡಕಟ್ಟು ಜನಾಂಗದ ಅಸಾಮಾನ್ಯ ಮಹಾ ಪುರುಷ ಬಿರ್ಸಾಮುಂಡಾ
HomechikamagalurLatest Newsnamma chikmagalur

ಬುಡಕಟ್ಟು ಜನಾಂಗದ ಅಸಾಮಾನ್ಯ ಮಹಾ ಪುರುಷ ಬಿರ್ಸಾಮುಂಡಾ

Share
Share
ಚಿಕ್ಕಮಗಳೂರು: ಭಗವಾನ್ ಬಿರ್ಸಾಮುಂಡಾ ಅವರು ಸಾಮಾನ್ಯರಾಗಿ ಹುಟ್ಟಿದ ಅಸಾಮಾನ್ಯ ಮಹಾ ಪುರುಷ; ಬಾಲ್ಯದಿಂದಲೇ ಸಮಾಜದ ಕಟ್ಟ ಕಡೆಯ ಶೋಷಿತ ವರ್ಗದವರ ಧ್ವನಿಯಾಗಿ ಕಾರ್ಯ ನಿರ್ವಹಿಸಿದವರು ಎಂದು ಶಾಸಕ ಹೆಚ್,ಡಿ ತಮ್ಮಯ್ಯ ಹೇಳಿದರು.
ಕೇಂದ್ರ ಬುಡಕಟ್ಟು ವ್ಯವಹಾರಗಳ ಮಂತ್ರಾಲಯ, ರಾಜ್ಯ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಶಿವಮೊಗ್ಗದ ಕೇಂದ್ರ ಸಂವಹನ ಇಲಾಖೆ, ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಸಂಯುಕ್ತ ಆಶ್ರಯದಲ್ಲಿ ನಗರದ ಕುವೆಂಪು ಕಲಾಮಂದಿರದಲ್ಲಿ ಇಂದು ನಡೆದ ಜನಜಾತೀಯ ಗೌರವ ದಿನದ ಪ್ರಯುಕ್ತ ಭಗವಾನ್ ಬಿರ್ಸಾಮುಂಡಾರವರ ೧೫೦ನೇ ಜನ್ಮ ವಾರ್ಷಿಕೋತ್ಸವ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಬಿರ್ಸಾಮುಂಡ ಅವರು ಸಾಮಾಜಿಕ ಹೋರಾಟಗಾರರು, ಚಿಂತಕರು ಮಾತ್ರವಲ್ಲ, ಸ್ವಾತಂತ್ರ್ಯ ಹೋರಾಟಗಾರರೂ ಆಗಿದ್ದರು, ಭಾರತಕ್ಕೆ ಸ್ವಾತಂತ್ರ್ಯ ತಂದು ಕೊಟ್ಟ ಹಲವಾರು ಹೆಸರುಗಳಲ್ಲಿ ಬಿರ್ಸಾಮುಂಡಾರವರ ಹೆಸರು ಕೂಡ ಸೇರ್ಪಡೆಯಾಗಿದೆ ಎಂದ ಅವರು, ಕೇವಲ ೨೫ ವರ್ಷ ಬದುಕಿ ಬುಡಕಟ್ಟು ಜನಾಂಗzವರ ಧ್ವನಿಯಾಗಿ ಕೆಲಸ ಮಾಡಿದ್ದಾರೆ, ಹಾಗಾಗಿ ಅವರು ಎಷ್ಟು ವರ್ಷ ಬದುಕಿದ್ದರು ಎನ್ನುವುದಕ್ಕಿಂತ ಬದುಕಿದಷ್ಟು ದಿನವೂ ಸಮಾಜದ ಶೋಷಿತ ವರ್ಗದವರ ಪರ ಗಟ್ಟಿ ಧ್ವನಿಯಾಗಿ ಮಾಡಿದ್ದ ಸಾಧನೆ ಮುಖ್ಯವಾಗುತ್ತದೆ.
ಇವರು ೧೮೭೫ರಲ್ಲಿ ಜಾರ್ಖಂಡ್ ರಾಜ್ಯದ ಕುಗ್ರಾಮದಲ್ಲಿ ಬುಡಕಟ್ಟು ಜನಾಂಗದಲ್ಲಿ ಜನಿಸಿ ಆ ಜನಾಂಗದ ಸಂಸ್ಕೃತಿಯನ್ನು ಉಳಿಸುವ ಸಲುವಾಗಿ ಹೋರಾಡಿದ್ದರು. ಅಂದಿನ ಬ್ರಿಟಿಷರ ಆಳ್ವಿಕೆಯಲ್ಲಿ ಜೈಲುವಾಸಕ್ಕೆ ಒಳಗಾದ ಅವರು ೧೯೦೦ ರಲ್ಲಿ ಜೈಲಿನಲ್ಲೇ ಸಾವಿಗೀಡಾದರು ಎಂದು ಹೇಳಿದರು. ಒಂದೆಡೆ ದೇಶ ಬ್ರಿಟಿಷರ ಆಳ್ವಿಕೆಯಲ್ಲಿದ್ದರೆ, ಇನ್ನೊಂದೆಡೆ ಜಮೀನ್ದಾರರ ದಬ್ಬಾಳಿಕೆ ಇತ್ತು. ಬ್ರಿಟಿಷರಿಂದ ಜೈಲುವಾಸಕ್ಕೆ ಒಳಗಾದ ಅವರು ೧೯೦೦ ರಲ್ಲಿ ಜೈಲಿನಲ್ಲೇ ಸಾವಿಗೀಡಾದರು ಎಂದರು.
ಬಿರ್ಸಾಮುಂಡಾ ಅವರು ಮದ್ಯಪಾನ, ಮೂಢನಂಬಿಕೆಯ ವಿರುದ್ಧ ಹೋರಾಡಿದ್ದರು. ಭೂಮಿಯನ್ನೇ ತಾಯಿ, ತಂದೆ ಎಂದು ಪೂಜಿಸುತ್ತಿದ್ದರು. ಅವರ ಹೋರಾಟದ ಫಲವಾಗಿ ಅನೇಕ ಬುಡಕಟ್ಟು ಸಮುದಾಯದವರು ಜಮೀನ್ದಾರರಿಂದ ಮರಳಿ ತಮ್ಮ ಜಮೀನನ್ನು ಪಡೆದುಕೊಳ್ಳಲು ಸಾಧ್ಯವಾಯಿತು ಎಂದು ಹೇಳಿದರು.
ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಮಾತನಾಡಿ ಯುವ ವಯಸ್ಸಿನಲ್ಲೇ ಆದಿವಾಸಿ ಸಮುದಾಯವನ್ನು ಪ್ರತಿನಿಧಿಸಿದವರು ಬಿರ್ಸಾಮುಂಡರವರು, ಇವರು ಭಾರತೀಯರಲ್ಲಿ ಅಪ್ರತಿಮ ಆದಿವಾಸಿ ನಾಯಕ. ಸ್ವಾತಂತ್ರ್ಯ ಹೋರಾಟಗಾರರಾಗಿದ್ದಂತೆ ಸಾಮಾಜಿಕ ಸಾಧಕರೂ ಆಗಿದ್ದವರು. ಕಳೆದ ಕೆಲವು ವರ್ಷಗಳಿಂದ ಈ ಕಾರ್ಯಕ್ರಮ ಆಯೋಜನೆ ಮಾಡಿ ಅವರ ಬಗ್ಗೆ ಹೆಚ್ಚು ಮಾಹಿತಿಯನ್ನು ತಿಳಿದುಕೊಳ್ಳುತ್ತಿದ್ದೇವೆ ಇವರ ಛಲ, ಸಾಧನೆ, ಧೈರ್ಯವನ್ನು ನಾವು ನಮ್ಮ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಇವರು ತಮಗೆದುರಾದ ಹಲವಾರು ಸಮಸ್ಯೆಗಳ ನಡುವೆ ಅವರು ನೀಡಿರುವ ಕೊಡುಗೆ ಶಾಶ್ವತವಾಗಿದೆ. ಅದಕ್ಕಾಗಿ ಅವರ ನಾಯಕತ್ವವನ್ನು ನಾವು ಸ್ಮರಿಸಿ ಅವರು ಮಾಡಿರುವ ದೈರ್ಯ, ಸಾಹಸಗಳು ಅವರ ಜಾತಿಯನ್ನು ಮುನ್ನೆಲೆಗೆ ತಂದಿರುವುದೇ ಅವರ ಹೋರಾಟದಲ್ಲಿ ಎಂದು ಹೇಳಿದರು.
ಐ,ಡಿ.ಎಸ್.ಜಿ ಸರ್ಕಾರಿ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯ್ಯಾಪಕರಾದ ಕೆ.ಜೆ.ವಸಂತ್ ಕುಮಾರ್ ಉಪನ್ಯಾಸ ನೀಡಿ, ಬುಡಕಟ್ಟು ಸಮುದಾಯಗಳಿಂದ ಭಗವಾನ್ ಎಂದು ಪೂಜಿಸಲ್ಪಡುವ ಬಿರ್ಸಾಮುಂಡಾ, ಶೋ?ಣೆ, ವಸಾಹತುಶಾಹಿ ವ್ಯವಸ್ಥೆಯ ವಿರುದ್ಧ ತೀವ್ರ ಪ್ರತಿರೋಧವನ್ನು ಒಡ್ಡಿದವರು. ಅವರ ಅನುಯಾಯಿಗಳಾಗಿರುವ ಆದಿವಾಸಿ ಜನಾಂಗದಿಂದಲೇ ಇಂದು ಅರಣ್ಯ ಉಳಿದಿದೆ. ಅವರಲ್ಲಿ ಮೂಡುವ ಕರಕುಶಲತೆ ಅತ್ಯದ್ಬುತವಾದದ್ದು, ಅವರ ನಡುವೆ ಲಿಂಗ ತಾರಮ್ಯವಿಲ್ಲ. ಸಮಾನ ಮನೋಭಾವದಿಂದ ಜೀವನ ಸಾಗಿಸುತ್ತಾರೆ ಎಂದರು.
ಕಾರ್ಯಕ್ರಮದಲ್ಲಿ ಜಿ.ಪಂ.ಮುಖ್ಯ ಕಾರ್ಯನಿರ್ವಣಾಧಿಕಾರಿ ಹೆಚ್,ಎಸ್.ಕೀರ್ತನಾ, ಪೊಲೀಸ್ ವರಿಷ್ಠಾಧಿಕಾರಿ ಡಾ.ವಿಕ್ರಮ್ ಅಮಟೆ, ಕೇಂದ್ರ ಸಂವಹನ ಇಲಾಖೆಯ ಶಿವಮೊಗ್ಗದ ಕ್ಷೇತ್ರ ಪ್ರಚಾರ ಅಧಿಕಾರಿ ಅಕ್ಷತಾ ಸಿ.ಹೆಚ್, ಜಂಟಿ ಕೃಷಿ ನಿರ್ದೇಶಕರಾದ ಎಂ.ತಿರುಮಲೇಶ್, ಬುಡಕಟ್ಟು ಸಮಾಜದ ಮುಖಂಡರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು,
ಕಾರ್ಯಕ್ರಮಕ್ಕೆ ಮುನ್ನ ತಾಲ್ಲೂಕು ಕಚೇರಿಯಿಂದ ಕುವೆಂಪು ಕಲಾಮಂದಿರದವರೆಗೆ ಬಿರ್ಸಾಮುಂಡ ಅವರ ಭಾವಚಿತ್ರದೊಂದಿಗೆ ನಡೆದ ಮೆರವಣಿಗೆಯಲ್ಲಿ ಡೊಳ್ಳು ಕುಣಿತ, ಹುಲಿವೇಷ, ಚಿಟ್ಟಿಮೇಳ, ಚೋಮನ ಕುಣಿತ, ಬೊಂಬೆ ಕುಣಿತ ಗಮನ ಸೆಳೆದರೆ, ವಿದ್ಯಾರ್ಥಿಗಳು ವಾದ್ಯಗೋಷ್ಠಿಯ ಶಬ್ದಕ್ಕೆ ಹೆಜ್ಜೆ ಹಾಕಿ ಸಂಭ್ರಮಿಸಿದರು.
An unusual great man of the tribe is Birsamunda
Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...