Home namma chikmagalur chikamagalur ಬಿಸಿಯೂಟ ಕಾರ್ಯಕರ್ತೆರ ವೇತನ ಬಿಡುಗಡೆಗೆ ಆಗ್ರಹಿಸಿ ಮನವಿ
chikamagalurHomeLatest Newsnamma chikmagalur

ಬಿಸಿಯೂಟ ಕಾರ್ಯಕರ್ತೆರ ವೇತನ ಬಿಡುಗಡೆಗೆ ಆಗ್ರಹಿಸಿ ಮನವಿ

Share
Share

ಚಿಕ್ಕಮಗಳೂರು: – ಬಿಸಿಯೂಟ ಕಾರ್ಯಕರ್ತೆಯರಿಗೆ ಬಾಕಿ ಉಳಿಸಿಕೊಂಡಿರುವ ಸಂಬಳವ ನ್ನು ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ಅಕ್ಷರ ದಾಸೋಹ ಕಾರ್ಯಕರ್ತೆಯರ ಫೆಡರೇಷನ್ ಜಿಲ್ಲಾ ಸಮಿತಿ ಮುಖಂಡರು ಮಂಗಳವಾರ ಅಪರ ಜಿಲ್ಲಾಧಿಕಾರಿ ನಂಜು ಂಡೇಗೌಡ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಮಾತನಾಡಿದ ಎಐಟಿಯುಸಿ ಜಿಲ್ಲಾದ್ಯಕ್ಷ ಎಸ್.ವಿಜಯ್‌ಕುಮಾರ್ ರಾಜ್ಯಾದ್ಯಂತ ಶಾಲಾ ಮಕ್ಕಳ ಮಧ್ಯಾಹ್ನದ ಬಿಸಿಯೂಟ ಅಡುಗೆ ಮಾಡುವ ಕಾರ್ಯಕರ್ತೆಯರಿಗೆ ಸರ್ಕಾರಿ ೪೬೦೦ ರೂ.ಗಳನ್ನು ಮಾಸಿಕ ವೇತನವಾಗಿ ನೀಡುತ್ತಿದ್ದು ಇದು ಸಹ ಕಳೆದ ಮೂರು ತಿಂಗಳಿನಿಂದ ವೇತನ ನೀಡದೇ ಬಾಕಿ ಉ ಳಿಸಿಕೊಂಡಿದೆ ಎಂದು ತಿಳಿಸಿದರು.

ವೇತನವನ್ನು ನಂಬಿ ಬಿಸಿಯೂಟ ಕಾರ್ಯಕರ್ತೆಯರು ಜೀವನ ಸಾಗಿಸುತ್ತಿದ್ದಾರೆ. ಆದ್ದರಿಂದ ಮೂರು ತಿಂಗಳ ವೇತನ ಕೂಡಲೇ ಬಿಡುಗಹಡೆ ಮಾಡಬೇಕು. ಮಕ್ಕಳ ಪೌಷ್ಠಿಕತೆಗೆ ಅನುಕೂಲವಾಗಲೆಂದು ನೀಡುತ್ತಿ ರುವ ಮೊಟ್ಟೆಯನ್ನು ಸುಲಿದು ಮಕ್ಕಳಿಗೆ ನೀಡಲು ಕನಿಷ್ಟ ೩೦ ಪೈಸೆಗಳಂತೆ ನೀಡಬೇಕು ಎಂದು ತಿಳಿಸಿದರು.

ಈಗಾಗಲೇ ೨೦೦೩-೦೩ನೇ ಸಾಲಿನಿಂದ ಅಡುಗೆ ಮಾಡಿ ನಿವೃತ್ತರಾದ ಕಾರ್ಯಕರ್ತೆಯರಿಗೆ ನೀಡಬೇ ಕಾದ ಹಿಡಿಗಂಟು ಹಣವನ್ನು ಇಲ್ಲಿಯವರೆಗೆ ನೀಡದೇ ನಿವೃತ್ತ ಕಾರ್ಯಕರ್ತೆಯರು ತಮ್ಮ ವೃದ್ದಾಪ್ಯವನ್ನು ನಿಭಾಯಿಸುವುದು ಬಹಷ್ಟು ಕಷ್ಟಕರವಾಗಿದ್ದು ಕೂಡಲೇ ಸರ್ಕಾರ ಹಿಡಿಗಂಟನ್ನು ಬಿಡುಗಡೆ ಮಾಡಿ ಕಾಯ ಕರ್ತೆಯರ ಸಹಾಯಕ್ಕೆ ಬರಬೇಕು ಎಂದರು.

ಎಐಟಿಯುಸಿ ತಾಲ್ಲೂಕು ಅಧ್ಯಕ್ಷ ಇಂದುಮತಿ ಮಾತನಾಡಿ ದಿನಕ್ಕೆ ೬ ರಿಂದ ೭ ಗಂಟೆ ಕಾಲಾವಕಾ ಶವಿಲ್ಲದೇ ಬಿಸಿಯೂಟ ಕಾರ್ಯಕರ್ತೆಯರನ್ನು ಕನಿಷ್ಟ ವೇತನ ವ್ಯಾಪ್ತಿಗೆ ಒಳಪಡಿಸಬೇಕು ಎಂಸು ಸಂಘ ಟನೆ ಒತ್ತಾಯಿಸಿದ್ದು ೨೦ ವರ್ಷಕ್ಕೂ ಹಾಜರಾತಿ ಸಂಖ್ಯೆ ನಿಗಧಿಗಿ ಂತ ಕಡಿಮೆಯಾಗುತ್ತಿದ್ದಂತೆ ಕಾರ್ಯ ಕರ್ತೆರ ಶ್ರಮ ಮತ್ತು ಸೇವೆ ಪರಿಗಣಿಸದೇ ಏಕಾಏಕಿ ಕೆಲಸದಿಂದ ತೆಗೆ ದು ಹಾಕಿ ಬೀದಿಪಾಲು ಮಾಡಲಾ ಗುತ್ತಿದೆ. ಈ ನೀತಿಯನ್ನು ಬದಲಾಯಿಸಿ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಎಐಟಿಯುಸಿ ತಾಲ್ಲೂಕು ಕಾರ್ಯದರ್ಶಿ ಶಮಿಮ ಬಾನು, ಉಪಾಧ್ಯಕ್ಷೆ ನಾಗಮ ಣಿ, ಕಡೂರು ತಾಲ್ಲೂಕು ಕಾರ್ಯದರ್ಶಿ ಸ್ವಪ್ನ ಮುಂತಾದವರು ಉಪಸ್ಥಿತರಿದ್ದರು.

Appeal demanding release of salaries of hot meal workers

 

Share

Leave a comment

Leave a Reply

Your email address will not be published. Required fields are marked *

Don't Miss

ಈಜಲು ತೆರಳಿದ್ದ ಯುವಕ ನೀರಿನಲ್ಲಿ ಮುಳುಗಿ ಸಾವು

ಚಿಕ್ಕಮಗಳೂರು: ಈಜಲು ತೆರಳಿದ್ದ 23 ವರ್ಷದ ಯುವಕನೊಬ್ಬ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಭೈರನಕಟ್ಟೆ ಸಮೀಪದ ಭದ್ರಾ ಬ್ಯಾಕ್‌ವಾಟರ್‌ನಲ್ಲಿ ನಡೆದಿದೆ. ಮೃತ ಯುವಕನನ್ನು ಶಿವಮೊಗ್ಗ ಜಿಲ್ಲೆಯ...

ಕೊಲೆ ಪ್ರಕರಣ: ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು: ಪತ್ನಿಯನ್ನು ಕತ್ತು ಹಿಸುಕಿ ಹಾಗೂ ಮೂಗು–ಬಾಯಿ ಮುಚ್ಚಿ ಉಸಿರುಗಟ್ಟಿಸಿ ಕೊಲೆ ಮಾಡಿದ ಪ್ರಕರಣದಲ್ಲಿ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಆರೋಪಿಗೆ ಚಿಕ್ಕಮಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೀವಾವಧಿ...

Related Articles

ಹೆಚ್ಚುವರಿ ಟಿಕೆಟ್ ದರ ವಸೂಲಿ ವಿರುದ್ಧ ಪರಿಹಾರಕ್ಕೆ ಸೂಚನೆ

ಚಿಕ್ಕಮಗಳೂರು: ಪ್ರಯಾಣಿಕರಿಂದ ನಿಯಮಬಾಹಿರವಾಗಿ ಹೆಚ್ಚುವರಿ ಟಿಕೆಟ್ ದರ ವಸೂಲಿ ಮಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ...

ಕ್ಷೌರಿಕ ಮೂಲ ವೃತ್ತಿಯನ್ನು ಉತ್ತೇಜಿಸುವ ಕಾರ್ಯ ಮಾಡಿ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯಲ್ಲಿ ತೊಡಗಿಸಿಕೊಳ್ಳಲು ಅನೇಕ ಬಲಾಡ್ಯ ಕಂಪನಿಗಳು ಮು ಂದಾಗಿವೆ. ಈ ಮೂಲ ವೃತ್ತಿದಾರರು...

ಅನುಸೂಚಿತ ಜಾತಿ-ಬುಡಕಟ್ಟುಗಳ ಆಯೋಗದ ಸಭೆಯಲ್ಲಿ ಸಮಸ್ಯೆಗಳ ಮಹಾಪೂರ

ಚಿಕ್ಕಮಗಳೂರು : ಇಂದು ನಗರದ ಕುವೆಂಪು ಕಲಾ ಮಂದಿರದಲ್ಲಿ ರಾಜ್ಯ ಅನುಸೂಚಿತ ಜಾತಿ, ಅನುಸೂಚಿತ ಬುಡಕಟ್ಟುಗಳ...

ಎಸ್ಸಿ-ಎಸ್ಟಿ ಪ್ರಕರಣಗಳ ಶೀಘ್ರ ವಿಲೇವಾರಿಗೆ ಕಟ್ಟುನಿಟ್ಟಿನ ಕ್ರಮ

ಚಿಕ್ಕಮಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಸಂಬಂಧಿಸಿದ ಪ್ರಕರಣಗಳ ಶೀಘ್ರ ವಿಲೇವಾರಿಗೆ ಆದ್ಯತೆ...