ಚಿಕ್ಕಮಗಳೂರು: ರೈತರ ಒಪ್ಪಿಗೆ ಇಲ್ಲದೇ ಜಮೀನಿನಲ್ಲಿ ವಸತಿ ಬಡಾವಣೆಗೆ ಕೃಷಿ ಭೂ ಮಿಯನ್ನು ಆಕ್ರಮಿಸುತ್ತಿರುವ ಅಧಿಕಾರಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಂಡು ನ್ಯಾಯ ಒದಗಿಸಿಕೊಡಬೇಕು ಎಂದು ಇಂದಾವರ ಗ್ರಾಮಸ್ಥರು ಗುರುವಾರ ರೈತ ಸಂಘದ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ ಅವರಿಗೆ ಮನವಿ ಸಲ್ಲಿಸಿದರು.
ಈ ಕುರಿತು ಮಾತನಾಡಿದ ಗ್ರಾಮದ ಮುಖಂಡ ಐ.ಎಸ್.ಯತೀಶ್ ಕಸಾಬ ಹೋಬಳಿ ಇಂದಾವರ ಗ್ರಾಮದ ರೈತರು ಸಿಡಿಎಕ್ಕೆ ಈಗಾಗಲೇ ೧೯೩ ಎಕರೆ ಜಮೀನನ್ನು ಎಬಿ ವಾಜಪೇಯಿ ವಸತಿ ಬಡಾವಣೆ, ೨೦೮ ಎಕರೆ ಜಮೀನು ಇಂದಾವರ ವಸತಿ ಬಡಾವಣೆ ನೀಡಿದ್ದು ಬಡಾವಣೆಯನ್ನು ನಿರ್ಮಿಸಲಾಗಿದೆ ಎಂದರು.
ಪ್ರಸ್ತುತ ನಿರ್ಮಿಸಿರುವ ಬಡಾವಣೆಯಲ್ಲಿ ರೈತರಿಗೆ ಯಾವುದೇ ನಿವೇಶನಗಳನ್ನು ಹಂಚಿಕೆ ಮಾಡಿಲ್ಲ. ವಾಜಪೇಯಿ ವಸತಿ ಬಡಾವಣೆಗೆ ನೀರಿನ ಸೌಕರ್ಯವಿಲ್ಲ, ತಾತ್ಕಾಲಿಕ ವಿದ್ಯುತ್ ಪೂರೈಕೆ ಮಾಡಲಾಗಿದೆ. ಇಂದಾವರ ಬಡಾವಣೆಯ ಕೆಲಸವು ಆಮೆಗತಿಯಲ್ಲಿ ಸಾಗಿದ್ದು ಈಗಾಗಲೇ ಎರಡು ಕಡೆ ಭೂಮಿಯನ್ನು ಸಿಡಿಎ ಅಭಿವೃದ್ದಿಗಾಗಿ ನೀಡಲಾಗಿದೆ ಎಂದು ಹೇಳಿದರು.
ಮಲ್ಲಂದೂರು ಮುಖ್ಯರಸ್ತೆಯಲ್ಲಿ ಹೊಸದಾಗಿ ನಿರ್ಮಿಸಲಾಗುತ್ತಿರುವ ಇಂದಾವರ ವಸತಿ ಬಡಾವ ಣೆಯ ಎ.ಬಿವಾಜಪೇಯಿ ಬಡಾವಣೆಗೆ ಹೊಂದಿಕೊಂಡಿರುವ ಗ್ರಾಮದ ವಿವಿಧ ಸರ್ವೆ ನಂಬರ್ಗಳಲ್ಲಿ ೧೫೦ ಎಕರೆ ಪ್ರದೇಶದಲ್ಲಿ ರೈತರ ಸಹಭಾಗಿತ್ವದಲ್ಲಿ ಶೇ.೫೦:೫೦ ರ ಅನುಪಾತ ಎಂದು ನಮೂದಿಸಿದ್ದು ರೈತರು ಒಪ್ಪ ದಿದ್ದಲ್ಲಿ ಭೂಸ್ವಾಧೀನದಡಿ ಹೆಚ್ಚುವರಿ ವಸತಿ ಯೋಜನೆಯ ರೂಪಿಸುವುದಾಗಿ ಆತಂಕವೊಡ್ಡುತ್ತಿದ್ದಾರೆ ಎಂ ದರು
ಈಗಾಗಲೇ ಸಿಡಿಎ ಹಲವಾರು ವಸತಿ ಬಡಾವಣೆಗಳನ್ನು ನಿರ್ಮಾಣ ಮಾಡಿದ್ದು, ಪ್ರಾಧಿಕಾರದ ಆ ಯುಕ್ತರು, ಗುತ್ತಿಗೆದಾರರು ನೀಡುವ ಹಣದ ಆಮಿಷದೊಂದಿಗೆ ರೈತರಿಗೆ ನೋಟೀಸ್ ನೀಡಿ ಬೆದರಿಕೆ ಒಡ್ಡು ವ ಮೂಲಕ ಹೆಚ್ಚುವರಿ ವಸತಿ ಬಡಾವಣೆ ನಿರ್ಮಾಣ ಮಾಡಲು ಮುಂದಾಗಿರುವುದು ವಿಷಾಧಕರ ಸಂಗತಿ ಎಂದರು.
ಈ ಪ್ರದೇಶದಲ್ಲಿ ಕಾಫಿ, ಅಡಿಕೆ, ಸಿಲ್ವರ್, ತೆಂಗು, ಬಾಳೆ, ಕಾಳುಮೆಣಸು ಮತ್ತು ಮಾಸಿಕ ಬೆಳೆಗಳಾದ ತರಿಕಾರಿ ಇತ್ಯಾದಿಗಳನ್ನು ಬೆಳೆದು, ಹಸಿರು ವಲಯದಲ್ಲಿದ್ದರೂ ಸಹ ವಸತಿ ಬಡಾವಣೆ ನಿರ್ಮಿಸಲು ಹೊರ ಟಿರುವುದು ಬೇಸರದ ಸಂಗತಿ, ಹೀಗಾಗಿ ಇಂದಾವರ ಗ್ರಾಮಸ್ಥರಿಗೆ ಜೀವನ ಸಾಗಿಸಲು ಕೃಷಿ ಭೂಮಿಯ ಅವಶ್ಯಕತೆಯಿರುವ ಕಾರಣ ಭೂಮಿ ಒದಗಿಸಿಕೊಡಬೇಕು ಎಂದು ಒತ್ತಾಯಿಸಿದರು.
ಈ ಸಂದರ್ಭದಲ್ಲಿ ಇಂದಾವರ ಗ್ರಾ.ಪಂ. ಮಾಜಿ ಅಧ್ಯಕ್ಷ ಸುಭಾಶ್, ರೈತ ಸಂಘದ ಜಿಲ್ಲಾ ಉಪಾಧ್ಯಕ್ಷ ಹಿರಿಯಣ್ಣಗೌಡ, ಗ್ರಾಮಸ್ಥರಾದ ಚೇತನ್, ಸೋಮೇಗೌಡ, ಗುರುಶಾಂತಪ್ಪ ಉಪಸ್ಥಿತರಿದ್ದರು.
Appeal for action against land grabbing without farmers’ consent
Leave a comment