Home namma chikmagalur ಅತಿವೇಗದಿಂದ ಸಂಚರಿಸುವ ಟಿಪ್ಪರ್-ಟ್ರ್ಯಾಕ್ಟರ್ ವಿರುದ್ಧ ಕ್ರಮಕ್ಕೆ ಮನವಿ
namma chikmagalurchikamagalurHomeLatest News

ಅತಿವೇಗದಿಂದ ಸಂಚರಿಸುವ ಟಿಪ್ಪರ್-ಟ್ರ್ಯಾಕ್ಟರ್ ವಿರುದ್ಧ ಕ್ರಮಕ್ಕೆ ಮನವಿ

Share
????????????????????????????????????
Share

ಚಿಕ್ಕಮಗಳೂರು: ಕಟ್ಟಡ ನಿರ್ಮಾಣದ ಸಾಮಾಗ್ರಿ ಸಾಗಿಸುವಾಗ ಟಿಪ್ಪರ್ ಲಾರಿಗಳು ಮ ತ್ತು ಟ್ರ್ಯಾಕ್ಟರ್‌ಗಳ ಅತಿವೇಗದಿಂದಾಗಿ ಅಪಘಾತಗಳು ಸಂಭವಿಸಿದ್ದು ಕೂಡಲೇ ಈ ಬಗ್ಗೆ ಕ್ರಮ ವಹಿಸಬೇಕು ಎಂದು ತಾಲ್ಲೂಕು ಬಹುಜನ ಸಮಾಜ ಪಕ್ಷ ಶುಕ್ರವಾರ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಡಾ.ವಿಕ್ರಮ್ ಅ ಮಟೆ ಅವರಿಗೆ ಮನವಿ ಸಲ್ಲಿಸಿದರು.

ಈ ಕುರಿತು ಬಿಎಸ್ಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಕೆ.ಟಿ.ರಾಧಾಕೃಷ್ಣ ಮಾತನಾಡಿ ಇಟ್ಟಿಗೆ, ಜಲ್ಲಿ, ಮರ ಳು, ಮಣ್ಣು ಸೇರಿದಂತೆ ಇನ್ನಿತರೆ ಕಟ್ಟಡ ಸಾಮಾಗ್ರಿಗಳನ್ನು ನಗರಕ್ಕೆ ಮತ್ತು ನಗರದಿಂದ ಹೊರವಲಯಕ್ಕೆ ಸಾಗಿಸುತ್ತಿರುವಾಗ ಮುನ್ನೆಚ್ಚರಿಕಾ ಕ್ರಮ ಪಾಲಿಸದೇ ಏಕಾಏಕಿ ಸಂಚರಿಸಿ ಸಾರ್ವಜನಿಕರಿಗೆ ತೊಂದರೆ ನೀಡ ಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಹಾಗೂ ಪೊಲೀಸ್ ವರಿಷ್ಟಾಧಿಕಾರಿಗಳ ಸುತ್ತಮುತ್ತಲು ಟಿಪ್ಪರ್ ಲಾರಿಗಳು ಮರಳು, ಜಲ್ಲಿ ಯನ್ನು ತುಂಬಿಸಿ ಟಾರ್ಪಲ್ ಹಾಕದೇ ಅತಿವೇಗದಿಂದ ಸಂಚರಿಸುತ್ತಿವೆ. ಇದರಿಂದ ತಿರುವುಗಳಲ್ಲಿ ಬ್ರೇಕ್ ಹಾಕುವ ವೇಳೆಯಲ್ಲಿ ತುಂಬಿರುವ ಸಾಮಾಗ್ರಿಗಳು ಪಾದಚಾರಿಗಳು, ವಾಹನಗಳ ಮೇಲೆ ಬೀಳುತ್ತಿರುತ್ತಿವೆ ಎಂದು ತಿಳಿಸಿದರು.

ಮುಖ್ಯವಾಗಿ ನಗರ ಭಾಗದ ಅರಣ್ಯ ಇಲಾಖೆ, ಹೊಸಮನೆ ಬಡಾವಣೆ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳ ಕಚೇರಿ ಮುಂಭಾಗ ಹಾಗೂ ಆಜಾದ್‌ಪಾರ್ಕ್ ವೃತ್ತದಲ್ಲಿ ಕಟ್ಟಡ ಸಾಮಾ ಗ್ರಿಗಳು ರಸ್ತೆಗೆ ಬೀಳುತ್ತಿರುವ ಪರಿಣಾಮ ಪ್ರತಿನಿತ್ಯವು ಸಾರ್ವಜನಿಕರಿಗೆ ಕಿರಿಕಿರಿ ಉಂಟಾಗುತ್ತಿದೆ ಎಂದರು.

ಬಿಎಸ್ಪಿ ಜಿಲ್ಲಾಧ್ಯಕ್ಷ ಪಿ.ಪರಮೇಶ್ವರ್ ಮಾತನಾಡಿ ಟಿಪ್ಪರ್ ಲಾರಿ ಮತ್ತು ಟ್ರ್ಯಾಕ್ಟರ್‌ಗಳ ವಾಹನಗಳ ಮಾ ಲೀಕರು ನಿಗಧಿಗೊಳಿಸಿದ ಸರ್ಕಾರಿ ಆದೇಶವನ್ನು ಪಾಲಿಸುತ್ತಿಲ್ಲ. ಈ ವಿರುದ್ಧವಾಗಿ ಸಾಗಣೆ ಮಾಡುತ್ತಿರುವ ವಾಹನಗಳ ಮೇಲೆ ಕ್ರಮ ಕೈಗೊಂಡು ಸಾರ್ವಜನಿಕರಿಗೆ ತೊಂದರೆಯಾಗದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಬಿಎಸ್ಪಿ ರಾಜ್ಯ ಕಾರ್ಯದರ್ಶಿ ಕೆ.ಬಿ.ಸುಧಾ, ಜಿಲ್ಲಾ ಉಪಾದ್ಯಕ್ಷ ಕೆ.ಎಸ್.ಮಂಜುಳಾ, ಅಸ್ಲೆಂಬಿ ಉಪಾಧ್ಯಕ್ಷ ಹೊನ್ನಪ್ಪ, ಪ್ರಧಾನ ಕಾರ್ಯದರ್ಶಿ ವಸಂತ್, ನಗರಾಧ್ಯಕ್ಷ ಡಿ.ಹೆಚ್.ವಿಜಯ್ ಕುಮಾ ರ್ ಮತ್ತಿತರರು ಹಾಜರಿದ್ದರು.

Appeal for action against tipper-tractors travelling at high speed

 

 

Share

Leave a comment

Leave a Reply

Your email address will not be published. Required fields are marked *

Don't Miss

ನೋಟರಿ ವಿ.ಕೆ.ರಘುಯಿಂದ ನೀರಿನ ಮೇಲೆ ತೇಲುತ್ತಾ ಯೋಗ ಭಂಗಿ ಪ್ರದರ್ಶನ

ಚಿಕ್ಕಮಗಳೂರು: ಯೋಗ ಸಾಧಕ ನಗರದ ವಕೀಲ ಹಾಗೂ ನೋಟರಿ ವಿ.ಕೆ.ರಘು ಅವರು  ಅಂತರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ನೀರಿನ ಮೇಲೆ ತೇಲುತ್ತಾ ವಿವಿಧ ಯೋಗ ಭಂಗಿಗಳನ್ನು ಪ್ರದರ್ಶಿಸಿದರು. ಬೈಪಾಸ್ ರಸ್ತೆಯ ನರ್ಚರ್...

ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕ ಆತ್ಮಹತ್ಯೆಗೆ ಶರಣು

ಕಡೂರು: ಪೊಲೀಸರ ವಿಚಾರಣೆಗೆ ಒಳಗಾಗಿದ್ದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಕಡೂರು ತಾಲೂಕಿನ ಬೀರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಲ್ಲೂರು ಗ್ರಾಮದ 20 ವರ್ಷದ ಚಂದನ್ ಮೃತಪಟ್ಟ ದುರ್ದೈವಿ. ಇತ್ತೀಚೆಗೆ...

Related Articles

ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ

ಚಿಕ್ಕಮಗಳೂರು: ನಗರದ ಎಐಟಿ ವೃತ್ತದ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಕಚೇರಿಯಿಂದ ಮೋಟಾರ್ ಸೈಕಲ್‌ನಲ್ಲಿ...

ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ

ಚಿಕ್ಕಮಗಳೂರು: ಅಭಿವೃದ್ಧಿ ಕೆಲಸಗಳ ಬಗ್ಗೆ ಕೆಲವರು ಪೂರ್ವಗ್ರಪಿಡಿತರಾಗಿ ಮಾತನಾಡುತ್ತಿದ್ದಾರೆ. ಈ ಹಿಂದೆ ಒಬ್ಬರಿಗೆ ಮಾತ್ರ ಗುತ್ತಿಗೆ...

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು...