Home namma chikmagalur chikamagalur ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ
chikamagalurHomeLatest Newsnamma chikmagalur

ಜಿಲ್ಲೆಯಲ್ಲಿ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಮನವಿ

Share
Share

ಚಿಕ್ಕಮಗಳೂರು: ಸಂಚಾರಿ ಹೈಕೋರ್ಟ್ ಪೀಠವನ್ನು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸ್ಥಾಪನೆ ಮಾಡುವುದು ಸೂಕ್ತವೆಂದು ವಕೀಲರ ಸಂಘದ ಅಧ್ಯಕ್ಷ ಡಿ.ಬಿ.ಸುಜೇಂದ್ರ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಗುರುವಾರ ಮಾತನಾಡಿ,ದಕ್ಷಿಣ ಕನ್ನಡ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ವಕೀಲರ ಸಂಘದ ಕೋರಿಕೆ ಮೇರೆಗೆ ಉಡುಪಿ, ದಕ್ಷಿಣಕನ್ನಡ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಪ್ರತ್ಯೇಕ ಸಂಚಾರಿ ಹೈಕೋರ್ಟ್ ಪೀಠವನ್ನು ಮಂಗಳೂರಿನಲ್ಲಿ ಸ್ಥಾಪನೆ ಮಾಡಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಲಿಖಿತವಾಗಿ ಮನವಿಮಾಡಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ವಕೀಲರ ಸಂಘದ ಕೋರಿಕೆಯಂತೆ ಉಚ್ಚ ನ್ಯಾಯಾಲಯದ ಮುಖ್ಯನ್ಯಾಯಾಧೀಶರಿಗೆ ಸಂಚಾರಿ ಹೈಕೋರ್ಟ್ ಪೀಠ ಸ್ಥಾಪನೆಗೆ ಶಿಫಾರಸ್ಸು ಮಾಡುವ ಮೂಲಕ ಪತ್ರ ಬರೆಯಲಾಗಿರುತ್ತದೆ ಎಂದು ಹೇಳಿದರು.

ಈ ಕುರಿತು ಶಿಫಾರಸ್ ಮಾಡುವ ಮೊದಲು ಚಿಕ್ಕಮಗಳೂರು ವಕೀಲರ ಸಂಘವನ್ನಾಗಲಿ ಅಥವಾ ಇತರೆ ಜಿಲ್ಲೆಗಳ ವಕೀಲರುಗಳ ಸಂಘದ ಅಭಿಪ್ರಾಯವನ್ನು ಪಡೆಯದೇ ಏಕಪಕ್ಷೀಯವಾಗಿ ಶಿಫಾರಸ್ಸುಮಾಡಿರುವುದು ಸಮಂಜಸವಾಗಿರುವುದಿಲ್ಲ. ಏಕೆಂದರೆ ಮಂಗಳೂರು ಜಿಲ್ಲೆ ಚಿಕ್ಕಮಗಳೂರು ೧೬೦ ಕಿ.ಮೀ. ಅಂತರಹೊಂದಿದ್ದು, ದಟ್ಟವಾದ ಕಾಡು, ಚಾರ್ಮಾಡಿಘಾಟಿಯನ್ನು ಹಾದುಹೋಗಬೇಕಾಗಿದೆ. ಮಳೆಗಾಲದಲ್ಲಿ ಹಲವಾರು ಕಡೆಗಳಲ್ಲಿ ಆಕಸ್ಮಿಕವಾಗಿ ಗುಡ್ಡಕುಸಿತಗಳು ಹಾಗೂ ರಸ್ತೆ ಮುಚ್ಚುವಂತಹ ಅನೇಕ ಘಟನೆಗಳು ಸಾಮಾನ್ಯವಾಗಿವೆ ಎಂದು ತಿಳಿಸಿದರು.

ಮಂಗಳೂರು ಹಾಗೂ ಚಿಕ್ಕಮಗಳೂರಿಗೆ ಯಾವುದೇ ವ್ಯವಹಾರಿಕ ವಹಿವಾಟುಗಳಾಗಲಿ ಸಾರ್ವಜನಿಕ ದಿನನಿತ್ಯದ ಸಂಪರ್ಕಗಳಾಗಿ ಇರುವುದಿಲ್ಲ ಅಲ್ಲದೇ ಕರ್ನಾಟಕದ ಅಂಚಿನ ಭಾಗದಲ್ಲಿ ಮಂಗಳೂರು ಇರುವುದರಿಂದ ಚಿಕ್ಕಮಗಳೂರಿನ ಜನತೆಗೆ ಯಾವುದೇ ಅನುಕೂಲರ ವಾತಾವರಣ ಇರುವುದಿಲ್ಲ. ದಕ್ಷಿಣ ಕನ್ನಡ ಜಿಲ್ಲೆ ಶಿವಮೊಗ್ಗದಿಂದ ೧೦೦ ಕಿ.ಮೀ. ಉಡುಪಿ ೧೬೦ ಕಿ.ಮೀ. ಅಂತರದಲ್ಲಿದೆ. ಚಿಕ್ಕಮಗಳೂರು ಹಾಗೂ ಮಡಿಕೇರಿ ೧೪೭ ಕಿ.ಮೀ.ಹಾಸನ ೬೦ ಕಿ.ಮೀ.ದಾವಣಗೆರೆ ೧೬೦ ಕಿ.ಮೀ. ಚಿತ್ರದುರ್ಗ ೧೪೦ ಕಿ.ಮೀ. ಆಗಿದ್ದು, ಈ ಎಲ್ಲಾ ಜಿಲ್ಲೆಗಳಿಗೆ ಚಿಕ್ಕಮಗಳೂರು ಹೃದಯ ಭಾಗವಾಗಿದೆ ಎಂದು ಹೇಳಿದರು.

ಈಗಾಗಲೇ ಚಿಕ್ಕಮಗಳೂರ ಜಿಲ್ಲೆಯಲ್ಲಿ ೧೦೦ ಕೋಟಿಗಿಂತಲೂ ಅಧಿಕವೆಚ್ಚದಲ್ಲಿ ನೂತನವಾದ ಆರು ಅಂತಸ್ತಿನ ೧೬ ನ್ಯಾಯಾಲಯಗಳ ಸಂಕೀರ್ಣ ಅವಶ್ಯಕ ವ್ಯವಸ್ಥೆಗಳೊಂದಿಗೆ ಕಾಮಗಾರಿ ಪೂರ್ಣಗೊಂಡು ಉದ್ಘಾಟನೆಯ ಹಂತದಲ್ಲಿರುವುದರಿಂದ ಸಂಚಾರಿ ಹೈಕೋರ್ಟ್ ಪೀಠವನ್ನು ಚಿಕ್ಕಮಗಳೂರ ಜಿಲ್ಲೆಯಲ್ಲಿ ಸ್ಥಾಪನೆ ಮಾಡುವುದು ಸೂಕ್ತವೆಂದು ಸಂಘವು ಬಯಸುತ್ತದೆ ಎಂದರು.

ಈ ಎಲ್ಲಾ ಕಾರಣಗಳಿಂದ ಕಕ್ಷಿದಾರರು, ಸಾರ್ವಜನಿಕರು, ವಕೀಲರುಗಳ ಹಿತದೃಷ್ಟಿಯಿಂದ ಮಾಜಿ ಮುಖ್ಯಮಂತ್ರತಿ ಸಿದ್ದರಾಮಯ್ಯನವರ ವೈಯಕ್ತಿಕ ಶಿಫಾರಸ್ಸನ್ನುಹ ಪರಿಗಣಿಸದೆ ಕೈಬಿಡಬೇಕೆಂದು ಸರ್ಕಾರದ ಮುಖ್ಯಕಾರ್ಯದರ್ಶಿ ಮತ್ತು ಮುಖ್ಯಮಂತ್ರಿಗಳಲ್ಲಿ ವಕೀಲರ ಸಂಘದ ಮನವಿ ಮಾಡಲಿದೆ ಎಂದು ತಿಳಿಸಿದರು.

ವಕೀಲರಸಂಘದ ಕಾರ್ಯದರ್ಶಿ ಅನಿಲ್‌ಕುಮಾರ್, ಉಪಾಧ್ಯಕ್ಷ ಕೆ.ಎಸ್.ಶರತ್‌ಚಂದ್ರ, ಖಜಾಂಚಿ ದೀಪಕ್, ವೀಣಾ ಆರ್.ಸೆರಾವ್, ಸಹಕಾರ್ಯದರ್ಶಿ ಎನ್.ವಿ.ಪ್ರಿಯದರ್ಶಿನಿ ಇದ್ದರು.

Appeal for establishment of a mobile High Court bench in the district

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲೆಗೆ ಮಂತ್ರಿಯಂತೆ, ಮಂತ್ರಿ ಇಲ್ಲವೇ, ಇಲ್ಲ ಸಾಧ್ಯವಿಲ್ಲ !

ಚಿಕ್ಕಮಗಳೂರು: ಕಳೆದ ಇಪ್ಪತೈದು ವರ್ಷಗಳಿಂದ ಜಿಲ್ಲೆಯವರು ಜಿಲ್ಲಾ ಉಸ್ತುವಾರಿ ಮಂತ್ರಿಯಾಗಿಲ್ಲಾ. ಮುಖ್ಯಮಂತ್ರಿಯಾಗಿದ್ದ ಸಿದ್ದರಾಮಯ್ಯ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಮುಂದಿನ ಮುಖ್ಯಮಂತ್ರಿಯಾಗಲು ಡಿ.ಕೆ.ಶಿವಕುಮಾರ್ ತುದಿಗಾಲಲ್ಲಿ ನಿಂತಿದ್ದಾರೆ. ಈ ಬಾರಿಯಾದರೂ ಜಿಲ್ಲೆಯವರಿಗೆ ಮಂತ್ರಿ...

ಸಿದ್ದರಾಮಯ್ಯ ಪರವಾಗಿ ಅಹಿಂದ ಸಂಘಟನೆ ರಾಜ್ಯದಾದ್ಯಂತ ಹೋರಾಟ

ಚಿಕ್ಕಮಗಳೂರು: ‘ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಇಳಿಸಿರುವುದನ್ನು ನಾವು ವಿರೋಧಿಸುತ್ತೇವೆ’ ಎಂದು ಜಿಲ್ಲಾ ಅಹಿಂದ ಘಟಕದ ಅಧ್ಯಕ್ಷ ತ್ರಿಭುವನ್ ಎತ್ತಿನಮನೆ ತಿಳಿಸಿದರು. ಸಿದ್ದರಾಮಯ್ಯ ಅವರನ್ನು ಕೈಬಿಟ್ಟರೆ ರಾಜ್ಯದಲ್ಲಿ ಅಹಿಂದ ವರ್ಗದ ಜನರ...

Related Articles

ತಾಲೂಕು ರೈತ ಸಂಘದ ಅಧ್ಯಕ್ಷರಾಗಿ ಹಾದಿಹಳ್ಳಿ ಭದ್ರೇಗೌಡ ಆಯ್ಕೆ

ಚಿಕ್ಕಮಗಳೂರು :ಕರ್ನಾಟಕ ರೈತ ಸಂಘದ ಚಿಕ್ಕಮಗಳೂರು ತಾಲೂಕು ಅಧ್ಯಕ್ಷರಾಗಿ ಹಾದಿಹಳ್ಳಿ ಭದ್ರೇಗೌಡ ಆಯ್ಕೆಯಾಗಿದ್ದಾರೆಂದು ರೈತ ಸಂಘದ...

ಬೀಗ ಹಾಕಿದ್ದ ಮನೆಯಿಂದ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತು ಕಳ್ಳತನ

ಮೂಡಿಗೆರೆ : ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಒಳನುಗ್ಗಿದ ಕಳ್ಳರು, ನಗದು ಹಣ ಹಾಗೂ...

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸಂಪುಟದ 13 ಸಚಿವರಿಗೆ ಖಾತೆ ಹಂಚಿಕೆ

ಬೆಂಗಳೂರು: ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್  ಅವರು ತಮ್ಮ ಸಂಪುಟದ (Cabinet) ಮೊದಲ 13 ಸಚಿವರಿಗೆ ಖಾತೆಯನ್ನು...

5.50 ಕೋಟಿಯ ಟಿಂಬರ್ ವ್ಯವಹಾರದಲ್ಲಿ ವಂಚನೆ

ಚಿಕ್ಕಮಗಳೂರು: ಕೋಟ್ಯಂತರ ರೂಪಾಯಿ ಮೌಲ್ಯದ ಟಿಂಬರ್ ವ್ಯವಹಾರಕ್ಕೆ ಸಂಬಂಧಿಸಿದಂತೆ ದೊಡ್ಡ ಮಟ್ಟದ ವಂಚನೆ, ಜಗಳ ಹಾಗೂ...