ಚಿಕ್ಕಮಗಳೂರು: ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು.
ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ಶೋಷಿತರು, ದೌರ್ಜನ್ಯ ಕ್ಕೆ ಒಳಗಾದವರ ಪರವಾಗಿ ಹೋರಾಟ ಮಾಡಿದ ಭೂಮಾನಂದ ಅವರ ಹತ್ಯೆ ಅತ್ಯಂತ ಶೋಚನೀಯ. ಇದು ಹೋರಾಟಗಾರರ ಹತ್ತಿಕ್ಕುವ ಕೆಲಸ ಕಾಣದ ಕೈಗಳು ಮಾಡುತ್ತಿವೆ ಎಂದು ದೂರಿದರು.
ಪ್ರಸ್ತುತ ಕಾಲಮಾನದಲ್ಲಿ ಸಾರ್ವಜನಿಕ ಹೋರಾಟ ರೂಪಿಸುವವರಿಗೆ ಬರ್ಬರವಾಗಿ ಹತ್ಯೆಗೈದಿರುವು ದು ಸಮಾಜ ತಲೆತಗ್ಗಿಸುವ ಕೆಲಸವಾಗಿದೆ. ಹೀಗಾಗಿ ಸರ್ಕಾರಗಳು ಸಾಮಾಜಿಕ ಹೋರಾಟಗಾರರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಹತ್ಯೆಗೈದ ಆರೋಪಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಮರಣ ದಂಡನೆ ಶಿಕ್ಷೆ ವಿಧಿ ಸಬೇಕು ಎಂದು ಒತ್ತಾಯಿಸಿದರು.
ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ. ಹೋರಾಟಗಾರರನ್ನು ಬೆದರಿಸುವ ವಾತಾವ ರಣ ಸೃಷ್ಟಿಯಾಗಿದೆ. ಈ ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದ್ದು ಆರೋಪಿಗಳ ವಿರುದ್ಧ ಯಾ ವುದೇ ಒತ್ತಡಗಳಿಗೆ ಮಣಿಯದೇ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
ಈಗಾಗಲೇ ಭೂಮಾನಂದ ಕುಟುಂಬವು ಅತ್ಯಂತ ದುಃಖದ ಕಡಲಲ್ಲಿ ಮುಳುಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕುಟುಂಬದ ಓರ್ವರಿಗೆ ಸರ್ಕಾರಿ ಹುದ್ದೆ ಹಾಗೂ ೨೫ ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸ ಬೇಕು ಎಂದು ಶಿರಸ್ತೇದಾರ್ ಮನು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಎನ್.ಆರ್.ಪುರ ರಾಮು, ಮಹೇಂದ್ರ ಸ್ವಾಮಿ, ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ಪವಿತ್ರ, ಮುಖಂಡರುಗಳಾದ ಗೋಪಾಲ್, ನಾಗೇಶ್, ಚಂ ದ್ರು, ಮಹೇಶ್, ಸುನೀಲ್, ಅಭಿಷೇಕ್, ಚೇತನ, ಅರುಣಾಕ್ಷಿ, ಸರೋಜಾ, ನಾಗಪ್ಪ ಮುಂತಾದವರಿದ್ದರು.
Appeal for severe punishment for those accused of murdering social activist
Leave a comment