Home namma chikmagalur chikamagalur ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ
chikamagalurHomeLatest Newsnamma chikmagalur

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

Share
Share

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಿ, ನೊಂದ ಕುಟುಂಬಕ್ಕೆ ಸರ್ಕಾರಿ ಹುದ್ದೆ ಕಲ್ಪಿಸಿಕೊಡಬೇ ಕು ಎಂದು ಆಗ್ರಹಿಸಿ ದಸಂಸ ಮುಖಂಡರುಗಳು ಜಿಲ್ಲಾಡಳಿತಕ್ಕೆ ಸೋಮವಾರ ಮನವಿ ಸಲ್ಲಿಸಿದರು.

ಈ ವೇಳೆ ಮಾತನಾಡಿದ ದಸಂಸ ಜಿಲ್ಲಾ ಸಂಚಾಲಕ ಎಲ್.ಎಸ್.ಶ್ರೀಕಾಂತ್ ಶೋಷಿತರು, ದೌರ್ಜನ್ಯ ಕ್ಕೆ ಒಳಗಾದವರ ಪರವಾಗಿ ಹೋರಾಟ ಮಾಡಿದ ಭೂಮಾನಂದ ಅವರ ಹತ್ಯೆ ಅತ್ಯಂತ ಶೋಚನೀಯ. ಇದು ಹೋರಾಟಗಾರರ ಹತ್ತಿಕ್ಕುವ ಕೆಲಸ ಕಾಣದ ಕೈಗಳು ಮಾಡುತ್ತಿವೆ ಎಂದು ದೂರಿದರು.

ಪ್ರಸ್ತುತ ಕಾಲಮಾನದಲ್ಲಿ ಸಾರ್ವಜನಿಕ ಹೋರಾಟ ರೂಪಿಸುವವರಿಗೆ ಬರ್ಬರವಾಗಿ ಹತ್ಯೆಗೈದಿರುವು ದು ಸಮಾಜ ತಲೆತಗ್ಗಿಸುವ ಕೆಲಸವಾಗಿದೆ. ಹೀಗಾಗಿ ಸರ್ಕಾರಗಳು ಸಾಮಾಜಿಕ ಹೋರಾಟಗಾರರಿಗೆ ಸೂಕ್ತ ಭದ್ರತೆ ಒದಗಿಸಬೇಕು. ಹತ್ಯೆಗೈದ ಆರೋಪಿಗಳ ವಿರುದ್ಧ ಸೂಕ್ತ ತನಿಖೆ ನಡೆಸಿ ಮರಣ ದಂಡನೆ ಶಿಕ್ಷೆ ವಿಧಿ ಸಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯಗಳು ಹೆಚ್ಚುತ್ತಿವೆ. ಹೋರಾಟಗಾರರನ್ನು ಬೆದರಿಸುವ ವಾತಾವ ರಣ ಸೃಷ್ಟಿಯಾಗಿದೆ. ಈ ಪ್ರಕರಣದ ಹಿಂದೆ ಪ್ರಭಾವಿ ವ್ಯಕ್ತಿಗಳ ಕೈವಾಡವಿದ್ದು ಆರೋಪಿಗಳ ವಿರುದ್ಧ ಯಾ ವುದೇ ಒತ್ತಡಗಳಿಗೆ ಮಣಿಯದೇ ನಿಷ್ಪಕ್ಷಪಾತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಈಗಾಗಲೇ ಭೂಮಾನಂದ ಕುಟುಂಬವು ಅತ್ಯಂತ ದುಃಖದ ಕಡಲಲ್ಲಿ ಮುಳುಗಿದೆ. ಆದ್ದರಿಂದ ರಾಜ್ಯ ಸರ್ಕಾರ ಕುಟುಂಬದ ಓರ್ವರಿಗೆ ಸರ್ಕಾರಿ ಹುದ್ದೆ ಹಾಗೂ ೨೫ ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸ ಬೇಕು ಎಂದು ಶಿರಸ್ತೇದಾರ್ ಮನು ಅವರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ಸಂಘಟನಾ ಸಂಚಾಲಕ ಎನ್.ಆರ್.ಪುರ ರಾಮು, ಮಹೇಂದ್ರ ಸ್ವಾಮಿ, ಮಹಿಳಾ ಒಕ್ಕೂಟದ ಜಿಲ್ಲಾ ಸಂಚಾಲಕಿ ಪವಿತ್ರ, ಮುಖಂಡರುಗಳಾದ ಗೋಪಾಲ್, ನಾಗೇಶ್, ಚಂ ದ್ರು, ಮಹೇಶ್, ಸುನೀಲ್, ಅಭಿಷೇಕ್, ಚೇತನ, ಅರುಣಾಕ್ಷಿ, ಸರೋಜಾ, ನಾಗಪ್ಪ ಮುಂತಾದವರಿದ್ದರು.

Appeal for severe punishment for those accused of murdering social activist

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...