Home namma chikmagalur ಶ್ರೀಗಂಧದ ತೋಟಕ್ಕೆ ವೈಜ್ಞಾನಿಕ ಬೆಲೆ ನಿಗದಿಗೆ ಜಿಲ್ಲಾಡಳಿತಕ್ಕೆ ಮನವಿ
namma chikmagalurchikamagalurHomeLatest News

ಶ್ರೀಗಂಧದ ತೋಟಕ್ಕೆ ವೈಜ್ಞಾನಿಕ ಬೆಲೆ ನಿಗದಿಗೆ ಜಿಲ್ಲಾಡಳಿತಕ್ಕೆ ಮನವಿ

Share
Share

ಚಿಕ್ಕಮಗಳೂರು: ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗೆ ಸ್ವಾಧೀನವಾಗುತ್ತಿರುವ ಶ್ರೀಗಂಧದ ತೋಟಕ್ಕೆ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು ಎಂದು ಆಗ್ರಹಿಸಿ ರೈತರೇ ಟೋಲ್ ನಿರ್ಮಿಸಿ ಸಂಗ್ರಹಿಸಿದ್ದ ಹಣವನ್ನು ಒಪ್ಪಿಸಲು ಮುಖ್ಯಮಂತ್ರಿಗಳ ಸಮಯ ಕೊಡಿಸುವಂತೆ ಜಿಲ್ಲಾಧಿಕಾರಿಗೆ ಮಂಗಳವಾರ ಮನವಿ ಸಲ್ಲಿಸಿದರು.

ಶ್ರೀಗಂಧ ಬೆಳೆಗಾರ ಟಿ.ಎನ್.ವಿಶುಕುಮಾರ್ ಮತ್ತು ಇತರ ರೈತರು ಜಿಲ್ಲಾಧಿಕಾರಿ ಕಚೇರಿಯ ಶಿರಸ್ತೆದಾರ್‌ಗೆ ಮನವಿ ಸಲ್ಲಿಸಿ ಒಟ್ಟು 8 ಎಕರೆ ಜಾಗದಲ್ಲಿ 22 ರೈತರು ಸೇರಿ ಶ್ರೀಗಂಧದ ಮರ ಬೆಳೆಯ ಲಾಗಿದೆ. ಈ ಪೈಕಿ 3 ಎಕರೆ 30 ಗುಂಟೆ ಜಾಗ ರಾಷ್ಟ್ರೀಯ ಹೆದ್ದಾರಿಗೆ ಸ್ವಾಧೀನ ವಾಗಿದ್ದು, ಕಡಿಮೆ ಪರಿಹಾರ ನಿಗದಿ ಮಾಡಲಾಗಿದೆ ಎಂಬುದು ರೈತರ ಆರೋಪ. ಮೊದಲಿಗೆ ಇದೇ ಅಧಿಕಾ ರಿಗಳು ಅಂದಾಜಿಸಿದ್ದ ಪ್ರಕಾರ ₹62 ಕೋಟಿ ಪರಿಹಾರ ನೀಡ ಬೇಕು. ಆದರೆ, ₹17 ಲಕ್ಷ ಮಾತ್ರ ಪರಿಹಾರ ನೀಡಲಾಗಿದ್ದು, ಅನ್ಯಾಯವಾಗಿದೆ ಎಂದು ಆರೋಪಿಸಿದರು.

ಈ ಹಿಂದೆ ಹಲವು ಪ್ರತಿಭಟನೆ ನಡೆ ಸಿದ್ದ ರೈತ ವಿಶಕುಮಾರ್ ಮತ್ತು ಇತರರು, ಇತ್ತೀಚೆಗೆ ಅನಿರ್ದಿಷ್ಟಾವಧಿ ಮುಷ್ಕರ ಆರಂಭಿಸಿದ್ದರು. ಇದೇ ವೇಳೆ ರಸ್ತೆಯಲ್ಲಿ ರೈತರೇ ಗಂಧದ ಗುಡಿ ಹೆಸರಿನಲ್ಲಿ ಟೋಲ್ ನಿರ್ಮಿಸಿ ವಾಹನ ಸವಾರರಿಂದ ಹಣ ಸಂಗ್ರಹಿಸಿದ್ದರು. ಪ್ರತಿ ವಾಹನದಿಂದ ಸರ್ಕಾರಕ್ಕೆ ಭಿಕ್ಷೆಯಾಗಿ ₹1 ನೀಡುವಂತೆ ವಾಹನ ಚಾಲಕರ ಬಳಿ ಪಡೆದಿದ್ದರು.

ಈ ಹಣವನ್ನು ಸರ್ಕಾರಕ್ಕೆ ಜುಲೈ 2ರಂದು ಒಪ್ಪಿಸಲಾಗುವುದು. ಅದಕ್ಕೆ ಬೇಕಿರುವ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗೆ ಮನವಿ ಮಾಡಿದರು. ಇದೇ ವೇಳೆ ಸಂಗ್ರಹವಾಗಿದ್ದ ಹಣದ ಡಬ್ಬಿಗಳನ್ನು ಮಾಧ್ಯಮಗಳ ಎದುರು ಪ್ರವಾಸಿ ಮಂದಿರದ ಬಳಿ ತೆರೆದು ಲೆಕ್ಕ ಮಾಡಿದರು.

₹558 ಸಂಗ್ರಹವಾಗಿದ್ದು, ಸಾರ್ವ ಜನಿಕರ ಹಣ ಆಗಿರುವುದರಿಂದ ಸರ್ಕಾರಕ್ಕೆ ಒಪ್ಪಿಸಬೇಕಿದೆ. ಆದ್ದರಿಂದ ಮಾಧ್ಯಮಗಳ ಎದುರು ಲೆಕ್ಕ ಮಾಡ ಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಈ ಹಣ ಒಪ್ಪಿಸಲಾಗುವುದು ಎಂದರು. ಇತ್ತೀಚೆಗೆ ಟವರ್ ಏರಿ ಪ್ರತಿಭಟನೆ ನಡೆಸಿದಾಗ ಎರಡು ದಿನಗಳಲ್ಲಿ ಸಮಸ್ಯೆ ಇತ್ಯರ್ಥಪಡಿಸಲಾಗುವುದು ಎಂದು ಅಧಿ ಕಾರಿಗಳು ತಿಳಿಸಿದ್ದರು. ಆದರೆ, ಮತ್ತೆ ತಲೆಕೆಡಿಸಿಕೊಂಡಿಲ್ಲ’ ಎಂದು ಅವರು ದೂರಿದರು

‘ತುಮಕೂರು–ಹೊನ್ನಾವರ ರಸ್ತೆಗೆ ತರೀಕೆರೆ ಸಮೀಪದ ಶ್ರೀಗಂಧದ ತೋಟ ಸ್ವಾಧೀನಪಡಿಸಿಕೊಂಡಿರುವ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (ಎನ್‌ಎಚ್‌ಎಐ), ಒಂದು ಮರಕ್ಕೆ ₹420 ನಿಗದಿ ಮಾಡಿದ್ದಾರೆ. ಇದು ಅವೈಜ್ಞಾನಿಕ ಬೆಲೆಯಾಗಿದ್ದು, ಮತ್ತೊಮ್ಮೆ ಮೌಲ್ಯಮಾಪನ ನಡೆಸಿ ವೈಜ್ಞಾನಿಕ ಬೆಲೆ ನಿಗದಿ ಮಾಡಬೇಕು’ ಎಂದು ಟಿ.ಎನ್.ವಿಶುಕುಮಾರ್ ಒತ್ತಾಯಿಸಿದರು.

ಶ್ರಿಗಂಧ ಮರಗಳನ್ನು ಬೆಳೆಸಿದರೆ ಕೋಟಿ ಕೋಟಿ ಹಣ ಬರಲಿದೆ ಎಂದು ಸರ್ಕಾರವೇ ರೈತರಲ್ಲಿ ಜಾಗೃತಿ ಮೂಡಿಸುತ್ತಿದೆ. ಆದರೆ, ಒಂದು ಮರಕ್ಕೆ ₹420 ನಿಗದಿ ಮಾಡುವ ಮೂಲಕ ರೈತರಿಗೆ ಮೋಸ ಮಾಡುತ್ತಿದೆ. ಇದು ಸರಿಯಾದ ಕ್ರಮವಲ್ಲ. ಕೂಡಲೇ ಸಮಸ್ಯೆ ಸರಿಪಡಿಸಬೇಕು ಎಂದು ಆಗ್ರಹಿಸಿದರು.

Appeal to district administration for scientific price fixing for sandalwood plantation

Share

Leave a comment

Leave a Reply

Your email address will not be published. Required fields are marked *

Don't Miss

ಡಾ.ಮಂಜುನಾಥ್ ಚಿಕ್ಕ‌ಮಗಳೂರು ಡಿಎಚ್ಒ

ಚಿಕ್ಕಮಗಳೂರು: ಕಾಫಿನಾಡು ಚಿಕ್ಕ‌ಮಗಳೂರಿನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಯಾಗಿ ಡಾ.ಎಚ್.ಕೆ.ಮಂಜುನಾಥ್ ನೇಮಕಗೊಂಡಿದ್ದಾರೆ. ಈ ಹಿಂದೆ ಡಿಎಚ್ ಒ ಆಗಿದ್ದ ಅಶ್ವಥ್ ಬಾಬು ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ ಜಿಲ್ಲಾ ಸಂತಾನೋತ್ಪತ್ತಿ...

ಹಸಿರು ಚಾದರ್ ಅರ್ಪಿಸುವುದು ಹೊಸದಾಗಿ ಸೃಷ್ಟಿಸಿದ ಆಚರಣೆಯಲ್ಲ

ಚಿಕ್ಕಮಗಳೂರು: ಇನಾಂ ದತ್ತಾತ್ರೇಯ ಪೀಠ ಬಾಬಾ ಬುಡನ್ ದರ್ಗಾದ ಐತಿಹಾಸಿಕ ಸ್ವರೂಪ, ಧಾರ್ಮಿಕ ಆಚರಣೆಗಳು ಹಾಗೂ ಭಕ್ತರ ಹಕ್ಕುಗಳ ಕುರಿತು ಸಯ್ಯದ್ ಬುಡನ್ ಶಾ ಖಾದ್ರಿ ವಂಶಸ್ಥರು ಸ್ಪಷ್ಟನೆಯನ್ನು ನೀಡಿದ್ದಾರೆ. ಇತ್ತೀಚೆಗೆ...

Related Articles

ಕಳಸದಲ್ಲಿ ಕಾಡುಕೋಣ ದಾಳಿಗೆ ಮಹಿಳೆ ಬಲಿ

ಚಿಕ್ಕಮಗಳೂರು: ಜಿಲ್ಲೆಯ ಕಳಸ ತಾಲೂಕಿನ ಬಿಳಗುಳಿ ಗ್ರಾಮದ ಸಮೀಪ ಕಾಡುಕೋಣ ದಾಳಿಗೆ ಮಹಿಳೆಯೊಬ್ಬರು ಮೃತಪಟ್ಟಿರುವ ದುರ್ಘಟನೆ...

ರೈತ ಸಂಘ-ಹಸಿರು ಸೇನೆ ಸಂಘಟನೆಗೆ ನೂತನ ಪದಾಧಿಕಾರಿಗಳ ನೇಮಕ

ಚಿಕ್ಕಮಗಳೂರು: ಸಾಮೂಹಿಕ ನಾಯಕತ್ವದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಸಂಘಟನೆಗೆ ನೂತನ...

ಮಲೆನಾಡು ಭಾಗದಲ್ಲಿ ಭಾರೀ ಗಾಳಿ-ಮಳೆಯ ಅಬ್ಬರಕ್ಕೆ ಜನ ಜೀವನ ಅಸ್ತವ್ಯಸ್ತ

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಮುಂಗಾರು ಮಳೆ ತಡವಾಗಿ ಆರಂಭಗೊಂಡಿದ್ದರೂ ಇದೀಗ ಭರ್ಜರಿಯಾಗಿ ಸುರಿಯುತ್ತಿದ್ದು, ಮಲೆನಾಡು ಭಾಗದಲ್ಲಿ ಭಾರೀ...

ಕಳಸದಲ್ಲಿ ಬೃಹತ್ ಮರ ಬಿದ್ದು ಆಟೋರಿಕ್ಷಾ ಜಖಂ

ಕಳಸ: ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಗುಡ್ಡೆಮಕ್ಕಿ ಗ್ರಾಮದಲ್ಲಿ ಭಾರಿ ಗಾಳಿ-ಮಳೆಯ ಆರ್ಭಟಕ್ಕೆ ಸುಧೀರ್ ಆಚಾರ್...