Home Latest News ಮಳಲೂರು ದಲಿತ ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ
Latest NewschikamagalurHomenamma chikmagalur

ಮಳಲೂರು ದಲಿತ ಕುಟುಂಬಗಳಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಜಿಲ್ಲಾಡಳಿತಕ್ಕೆ ಮನವಿ

Share
Share

ಚಿಕ್ಕಮಗಳೂರು:  ಮೂಡಿಗೆರೆ ವಿಧಾನಸಭಾ ಕ್ಷೇತ್ರದ ಅಂಬಳೆ ಹೋಬಳಿ ಮಳಲೂರು ಗ್ರಾಮದಲ್ಲಿರುವ ೧೮ ಎಕರೆ ಗೋಮಾಳ ಜಮೀನಿನಲ್ಲಿ ನಿವೇಶನ ರಹಿತ ಪರಿಶಿಷ್ಟ ಕುಟುಂಬದವರಿಗೆ ನಿವೇಶನ ನೀಡುವಂತೆ ಆಗ್ರಹಿಸಿ ಇಂದು ಅಪರ ಜಿಲ್ಲಾಧಿಕಾರಿ ನಾರಾಯಣ ಕನಕರಡ್ಡಿ ಅವರಿಗೆ ಮನವಿ ಸಲ್ಲಿಸಿದರು.

ಭೀಮ್ ಆರ್ಮಿ, ಯುವ ಬ್ರಿಗೇಡ್, ಅಂಬೇಡ್ಕರ್ ಯುವಕ ಸಂಘ ಮಳಲೂರು ಗ್ರಾಮಸ್ಥರೊಂದಿಗೆ ನಗರಕ್ಕಾಗಮಿಸಿ ಅಪರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ ಒತ್ತಾಯಿಸಿ ಮಳಲೂರು ಗ್ರಾಮದ ಸರ್ವೆ ನಂ.೭೮, ೭೯ ರಲ್ಲಿ ೯.೨೪ ಹಾಗೂ ೮.೩೫ ಎಕರೆ ಗೋಮಾಳ ಜಮೀನು ಇದ್ದು, ಇದನ್ನು ನಿವೇಶನ ರಹಿತರಿಗೆ ನೀಡುವಂತೆ ಮನವಿಯಲ್ಲಿ ಒತ್ತಾಯಿಸಿರುವ ಪರಿಶಿಷ್ಟ ಜನಾಂಗದ ೧೫೦ ಕುಟುಂಬದವರು ನೂರಾರು ವರ್ಷಗಳಿಂದ ವಾಸಿಸುತ್ತಿದ್ದು, ಒಂದು ಕುಟುಂಬದಲ್ಲಿ ೮-೧೦ ಜನರಿದ್ದು, ಮನೆಗಳಿಲ್ಲದೆ ತುಂಬ ತೊಂದರೆಯಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಭೀಮ್ ಆರ್ಮಿ ಮುಖಂಡ ಹೊನ್ನೇಶ್ ಮಾತನಾಡಿ, ನಿವೇಶನ ನೀಡುವಂತೆ ಒತ್ತಾಯಿಸಿ ಪರಿಶಿಷ್ಟ ಜಾತಿ ಜನಾಂಗದವರು ೨೦೧೮ ರಲ್ಲೇ ಗ್ರಾಮ ಪಂಚಾಯಿತಿಗೆ ಮಳಲೂರು ಗ್ರಾಮಸ್ಥರು ಮನವಿ ನೀಡಿದ್ದರೂ ಯಾವುದೇ ಪ್ರಯೋಜನ ಆಗಿಲ್ಲ ಎಂದು ಆರೋಪಿಸಿದರು.
ದೌರ್ಜನ್ಯ ತಡೆ ಸಮಿತಿ ಸದಸ್ಯ ಹುಣಸೇಮಕ್ಕಿ ಲಕ್ಷ್ಮಣ ಮಾತನಾಡಿ, ಸಂವಿಧಾನದ ಆಶಯದಂತೆ ಪ್ರಾಥಮಿಕ ಸೌಲಭ್ಯಗಳಾದ ನಿವೇಶನ, ಮನೆ, ಶಿಕ್ಷಣ, ಆರೋಗ್ಯ ನೀಡಬೇಕೆಂದು ಡಾ. ಬಿ.ಆರ್ ಅಂಬೇಡ್ಕರ್ ಹೇಳಿದ್ದರೂ ಕಾರ್ಯರೂಪಕ್ಕೆ ತರುವಲ್ಲಿ ವಿಳಂಭವಾಗುತ್ತಿದೆ ಎಂದು ದೂರಿದರು.

ಸ್ವತಂತ್ರ ಬಂದು ೭೯ ವರ್ಷಗಳಾದರೂ ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಬಡವರಿಗೆ ಮೂಲಭೂತ ಹಕ್ಕುಗಳನ್ನು ಪಡೆಯುವಲ್ಲಿ ವಿಫಲರಾಗಿದ್ದು, ಮಳಲೂರು ಗ್ರಾಮದಲ್ಲಿ ೧೫೦ ಪರಿಶಿಷ್ಟ ಜನಾಂಗದ ಕುಟುಂಬಗಳು ವಾಸಿಸುತ್ತಿದ್ದು, ಬಲಾಢ್ಯರು ಒತ್ತುವರಿ ಮಾಡಿರುವ ಭೂಮಿಯನ್ನು ಜಿಲ್ಲಾಡಳಿತ ಹಾಗೂ ಅರಣ್ಯ ಇಲಾಖೆ ತೆರವು ಮಾಡಿ ನಿವೇಶನ ರಹಿತರಿಗೆ ನಿವೇಶನ ಮಂಜೂರು ಮಾಡಬೇಕೆಂದು ಆಗ್ರಹಿಸಿದರು.

ಗ್ರಾಮಸ್ಥರಾದ ಪವಿತ್ರ ಮಾತನಾಡಿ, ದಲಿತ ಕುಟುಂಬದ ಬಡವರಿಗೆ ನಿವೇಶನ ನೀಡಬೇಕೆಂದು ಒತ್ತಾಯಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರುಗಳಾದ ಮಲ್ಲಯ್ಯ, ನಳಿನ, ಸುಶೀಲ, ಗಂಗಮ್ಮ, ಪಾರ್ವತಮ್ಮ, ಗಂಗಮ್ಮ, ಪುಟ್ಟಮ್ಮ, ಮಂಜುಳ, ಲಕ್ಷ್ಮಮ್ಮ, ಚಂದ್ರಮ್ಮ, ಸುಶೀಲ, ಸಾವಿತ್ರಿ, ಭಾಗ್ಯ, ಹೂವಮ್ಮ, ಇಂದ್ರಾಣಿ ಮತ್ತಿತರರು ಉಪಸ್ಥಿತರಿದ್ದರು.

Appeal to the district administration demanding a site

Share

Leave a comment

Leave a Reply

Your email address will not be published. Required fields are marked *

Don't Miss

ಪದವಿ ಪೂರ್ವ ಕಾಲೇಜುಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟ

ಚಿಕ್ಕಮಗಳೂರು:  ಪರಿಶ್ರಮ ವಹಿಸಿದಾಗ ನಿಮ್ಮ ಭವಿಷ್ಯ ಸ್ವತಹಾ ನೀವೇ ರೂಪಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶಾಸಕ ಹೆಚ್.ಡಿ. ತಮ್ಮಯ್ಯ ತಿಳಿಸಿದರು. ಅವರು ಇಂದು ರಾಮನಹಳ್ಳಿಯ ಜಿಲ್ಲಾ ಪೊಲೀಸ್ ಕವಾಯತು ಮೈದಾನದಲ್ಲಿ ಶಾಲಾ ಶಿಕ್ಷಣ...

ನಗರಸಭೆ ನೂತನ ಉಪಾಧ್ಯಕ್ಷರಾಗಿ ಲಲಿತಾ ರವಿನಾಯ್ಕ ಅವಿರೋಧ ಆಯ್ಕೆ

ಚಿಕ್ಕಮಗಳೂರು:  ನಗರಸಭೆ ೩೫ನೇ ವಾರ್ಡಿನ ಕೆಂಪನಹಳ್ಳಿ ಬಡಾವಣೆಯ ಬಿಜೆಪಿ ಸದಸ್ಯೆ ಲಲಿತಾ ರವಿನಾಯ್ಕ ನಗರಸಭೆ ನೂತನ ಉಪಾಧ್ಯಕ್ಷರಾಗಿ ಅವಿರೋಧ ಆಯ್ಕೆಯಾಗಿದ್ದಾರೆಂದು ಚುನಾವಣಾಧಿಕಾರಿಯಾಗಿದ್ದ ಉಪವಿಭಾಗಾಧಿಕಾರಿ ಸುದರ್ಶನ್ ಘೋಷಿಸಿದರು. ಅವರು ಇಂದು ನಗರಸಭೆಯಲ್ಲಿ ಪಕ್ಷದ...

Related Articles

ಗಾಯಾಳಿಗೆ ಚಿಕಿತ್ಸೆ ನಿರಾಕರಿಸಿದರೆ 1 ಲಕ್ಷದವರೆಗೆ ದಂಡ

ಬೆಂಗಳೂರು: ರಸ್ತೆ ಅಪಘಾತದಿಂದ ಗಾಯಗೊಂಡು ಆಸ್ಪತ್ರೆಗೆ ದಾಖಲಾದವರಿಗೆ, ಯಾವುದೇ ಮುಂಗಡ ಹಣ ಕೇಳದೆ ಚಿಕಿತ್ಸೆ ನೀಡಬೇಕು...

ಜಿಂಕೆ ಮಾಂಸ ವಶ – ಮೂವರು ಆರೋಪಿಗಳ ಬಂಧನ

ನರಸಿಂಹರಾಜಪುರ: ಮುತ್ತಿನಕೊಪ್ಪ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಸುಬೂರು ಗ್ರಾಮದ ಆರಂಬಳ್ಳಿ ಅರಣ್ಯ ಪ್ರದೇಶದಲ್ಲಿ ಜಿಂಕೆ ಕೊಂದು...

ಕಾರ್ಪೋರೇಟ್ ಕಂಪನಿಗಳ ಆಸೆಗೆ ರೈತರು ಬಲಿಪಶು

ಚಿಕ್ಕಮಗಳೂರು:  ದೇಶದಲ್ಲಿ ರೈತ ವಿರೋಧಿ ಕಾಯ್ದೆಗಳು ಜಾರಿಗೊಂಡಲ್ಲಿ ಸಣ್ಣಪು ಟ್ಟ ಕೃಷಿಕರು ಬಹುರಾಷ್ಟ್ರೀಯ ಕಂಪನಿಗಳ ಅಡಿಯಾಳಾಗುತ್ತೇವೆ....

ಈದ್‌–ಮಿಲಾದ್ ಅಂಗವಾಗಿ ನಗರದಲ್ಲಿ ಬೃಹತ್‌ ಮೆರವಣಿಗೆ

ಚಿಕ್ಕಮಗಳೂರು: ಪ್ರವಾದಿ ಮಹಮ್ಮದ್ ಜನ್ಮದಿನದ ಅಂಗವಾಗಿ ನಗರದಲ್ಲಿ ಮುಸ್ಲಿಂ ಬಾಂಧವರು ಈದ್‌–ಮಿಲಾದ್ ಹಬ್ಬವನ್ನು ಶುಕ್ರವಾರ ಸಂಭ್ರಮದಿಂದ ಆಚರಣೆ...