ಚಿಕ್ಕಮಗಳೂರು: ಇಲ್ಲಿನ ವೈದ್ಯಕೀಯ ಕಾಲೇಜು ಮತ್ತು ಹಾಸ್ಟೆಲ್ಗೆ ಮೂಲಭೂತ ಸೌಕರ್ಯಗಳನ್ನು ಶೀಘ್ರವೇ ಕಲ್ಪಿಸುವಂತೆ ಆಗ್ರಹಿಸಿ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಜಿಲ್ಲಾಧಿಕಾರಿಗಳ ಮೂಲಕ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ಪಾಟೀಲ್ರವರಿಗೆ ಮನವಿ ಸಲ್ಲಿಸಿದರು.
ನಂತರ ಪತ್ರಿಕಾ ಹೇಳಿಕೆಯಲ್ಲಿ ಈ ವಿಷಯ ತಿಳಿಸಿರುವ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಜಸಂತಾಅನಿಲ್ ಕುಮಾರ್ ಅವರು ಕಾಲೇಜು ಮತ್ತು ಹಾಸ್ಟೆಲ್ಗಳಲ್ಲಿ ನೀರಿನ ಸೌಲಭ್ಯದ ಕೊರತೆಯಿದೆ. ವಿದ್ಯುತ್ಚ್ಚಕ್ತಿ ಮತ್ತು ಇಂಟರ್ನೆಟ್ ಸೌಲಭ್ಯವಿಲ್ಲ. ಹೆಣ್ಣುಮಕ್ಕಳ ವಸತಿ ನಿಲಯದಲ್ಲಿ ಭದ್ರತೆಯನ್ನು ಒಳಗೊಂಡಿಲ್ಲ ಎಂದು ಹೇಳಿದರು.
ಆಹಾರದ ಸ್ವಚ್ಚತೆ, ಗುಣಮಟ್ಟ, ಸಾಕಷ್ಟು ಆಹಾರವನ್ನು ನೀಡುತ್ತಿಲ್ಲ, ಸ್ವಚ್ಚತಾ ಸಿಬ್ಬಂದಿಯ ಕೊರತೆ ಇದೆ. ವಿದ್ಯಾರ್ಥಿಗಳಿಗೆ ಅನುಕೂಲವಾಗುವಂತೆ ಸಾರ್ವಜನಿಕ ಸಾರಿಗೆ ವ್ಯವಸ್ಥೆ ಇರುವುದಿಲ್ಲ. ನಾಲ್ಕನೇ ವರ್ಷದ ವಿದ್ಯಾರ್ಥಿಗಳಿಗೆ ಅಧ್ಯಾಪಕರ ಕೊರತೆ ಇದೆ ಎಂದು ಹೇಳಿದ್ದಾರೆ.
ಕಾಲೇಜು ಮತ್ತು ಹಾಸ್ಟೆಲ್ ಕ್ಯಾಂಪಸ್ಗಳಲ್ಲಿ ಜೇನುಗೂಡು ಕಟ್ಟಿದ್ದು, ಜೇನುನೊಣಗಳು ಹಾಸ್ಟೆಲ್ ಕೊಠಡಿ ಒಳ ಪ್ರವೇಶಿಸದಂತೆ ಕಿಟಕಿಗಳಿಗೆ ಮೆಸ್ ಹಾಗೂ ಕರ್ಟನ್ಗಳನ್ನು ಅಳವಡಿಸಬೇಕೆಂದು ಒತ್ತಾಯಿಸಿದರು.
ಅಡುಗೆ ಕೋಣೆಯಲ್ಲಿಯೇ ಪಾತ್ರೆಗಳನ್ನು ತೊಳೆಯುತ್ತಿದ್ದು, ಅಡುಗೆ ಕೊಠಡಿ ಸ್ವಚ್ಚವಾಗಿಲ್ಲ, ಹಣ್ಣು-ತರಕಾರಿಗಳ ಗುಣಮಟ್ಟ ಹಾಗೂ ಶೌಚಾಲಯಗಳ ಸ್ವಚ್ಚತೆ ಕೊರತೆ, ಪೋಷಕರಿಗೆ ವೇಟಿಂಗ್ ರೂಂ ಕೊರತೆ ಇದೆ ಎಂದು ತಿಳಿಸಿದ್ದಾರೆ.
ಕಾಲೇಜು ಕ್ಯಾಂಪಸ್ ಹೊರಭಾಗದಲ್ಲಿ ಬೀದಿದೀಪದ ವ್ಯವಸ್ಥೆ ಇರುವುದಿಲ್ಲ. ಕ್ಯಾಂಪಸ್ನ ಸುತ್ತಮುತ್ತ ಸ್ಟೇಷನರಿ ಹಾಗೂ ಕ್ಯಾಂಟಿನ್ ವ್ಯವಸ್ಥೆ ಇರುವುದಿಲ್ಲ. ವಿದ್ಯಾರ್ಥಿಗಳ ಕೊಠಡಿಗೆ ಪೀಠೋಪಕರಣಗಳ ವ್ಯವಸ್ಥೆ ಇಲ್ಲ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಈ ಎಲ್ಲಾ ಸಮಸ್ಯೆಗಳನ್ನು ಕೂಡಲೇ ಇತ್ಯರ್ಥಪಡಿಸಿ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವಂತೆ ವೈದ್ಯಕೀಯ ಶಿಕ್ಷಣ ಸಚಿವರಿಗೆ ಮನವಿ ಸಲ್ಲಿಸಿ ಒತ್ತಾಯಿಸಿದ್ದಾರೆ.
ಈ ಸಂದರ್ಭದಲ್ಲಿ ಮಹಿಳಾ ಮೋರ್ಚಾ ಮುಖಂಡರಾದ ವೀಣಾಶೆಟ್ಟಿ, ಕವಿತಾ ಶೇಖರ್, ಅಂಕಿತ, ಲಲಿತಾರವಿನಾಯ್ಕ್, ಇಂದಿರಾ ಮತ್ತಿತರರು ಉಪಸ್ಥಿತರಿದ್ದರು.
Appeal to urge medical college to teach basic facilities
Leave a comment