Home Latest News ಪುರಸಭೆ- ಪ.ಪಂ.ಗೆ ನೇಮಿಸಿದ ಆಡಳಿತಾಧಿಕಾರಿ ಹಿಂಪಡೆಯಲು ಮನವಿ
Latest NewschikamagalurHomenamma chikmagalur

ಪುರಸಭೆ- ಪ.ಪಂ.ಗೆ ನೇಮಿಸಿದ ಆಡಳಿತಾಧಿಕಾರಿ ಹಿಂಪಡೆಯಲು ಮನವಿ

Share
????????????????????????????????????
Share

ಚಿಕ್ಕಮಗಳೂರು: ಅವಧಿ ಪೂರ್ವ ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳಿಗೆ ಮಾಡಿರುವ ಆಡಳಿತಾಧಿಕಾರಿಗಳ ನೇಮಕ ಹಿಂಪಡೆಯಬೇಕು ಎಂದು ವಿವಿಧ ಪುರಸಭೆ, ಪಟ್ಟಣ ಪಂಚಾ ಯಿತಿ ಆಡಳಿತ ಮಂಡಳಿ ಪದಾಧಿಕಾರಿಗಳು ಶನಿವಾರ ಅಪರ ಜಿಲ್ಲಾಧಿಕಾರಿ ನಾರಾಯಣಕನಕರಡ್ಡಿ ಮುಖಾ ಂತರ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಈ ವೇಳೆ ಕಡೂರು ಪುರಸಭೆ ಅಧ್ಯಕ್ಷ ಶ್ರೀನಿವಾಸ್ ಭಂಡಾರಿ ಮಾತನಾಡಿ ಜಿಲ್ಲೆಯ ಕಡೂರು, ಬೀರೂ ರು ಪುರಸಭೆ ಮತ್ತು ಮೂಡಿಗೆರೆ, ನ.ರಾ.ಪುರ ಹಾಗೂ ಶೃಂಗೇರಿ ಪಟ್ಟಣ ಪಂಚಾಯಿತಿಗಳಿಗೆ ಜಿಲ್ಲಾಡಳಿತ ಅವಧಿಗೂ ಮುನ್ನವೇ ಆಡಳಿತಾಧಿಕಾರಿ ನೇಮಕ ಮಾಡಿರುವುದು ಸರಿಯಲ್ಲ. ಈ ಕೂಡಲೇ ಆದೇಶವನ್ನು ಹಿಂಪಡೆಯಬೇಕು ಎಂದು ಆಗ್ರಹಿಸಿದರು.

ಆಡಳಿತಾಧಿಕಾರಿಗಳನ್ನು ನೇಮಕ ಮಾಡಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಆದರೆ ಆಯಾ ಅಧಿಕಾ ರದ ಅವಧಿಯು ಎರಡನೇ ಅವಧಿ ಅಧ್ಯಕ್ಷರು, ಉಪಾಧ್ಯಕ್ಷರ ಚುನಾವಣೆಯು ಅವಧಿ ೩೦ ತಿಂಗಳು ಆಗಿರು ತ್ತದೆ. ಎರಡನೇ ಅವಧಿಯು ಚುನಾವಣೆಯು ನಡೆದು ೩೦ ತಿಂಗಳು ಅಪೂರ್ಣಗೊಂಡಿರುವುದಿಲ್ಲ ಎಂದು ತಿಳಿಸಿದರು.

ಕಡೂರು ಹಾಗೂ ಬೀರೂರು ಪುರಸಭೆಯ ಎರಡನೇ ಅವಧಿಯ ಚುನಾವಣೆ ಕಳೆದ ವರ್ಷ ಆಗಸ್ಟ್ ನಲ್ಲಿ ನಡೆದಿದೆ. ಅಲ್ಲದೇ ಈ ವಿಚಾರವಾಗಿ ಈಗಾಗಲೇ ರಾಜ್ಯಾದ್ಯಂತ ಕರ್ನಾಟಕ ಉಚ್ಚ ನ್ಯಾಯಾಲಯದಲ್ಲಿ ದಾವೆ ದಾಖಲಾಗಿದೆ. ದಾವೆಗೆ ಸಂಬಂಧಿಸಿದ ದಾಖಲೆಗಳನ್ನು ಜಿಲ್ಲಾಡಳಿತ ಒದಗಿಸಲಾಗಿದೆ ಎಂದು ಹೇಳಿ ದರು.

ದಾಖಲೆ ಸಮೇತ ಜಿಲ್ಲಾಡಳಿತ ಸಮಗ್ರ ಮಾಹಿತಿ ಒದಗಿಸಿದರೂ ಆಡಳಿತಾಧಿಕಾರಿ ನೇಮಕ ಮಾಡಲಾ ಗಿದೆ. ಆದ್ದರಿಂದ ಪ್ರಜಾಪ್ರಭುತ್ವದ ಅಡಿಯಲ್ಲಿ ಪ್ರತಿನಿಧಿಗಳ ಹಕ್ಕು ಮೊಟಕುಗೊಳಿಸದೇ ಪೂರ್ಣಗೊಳಿಸಲು ಅವಕಾಶ ನೀಡಬೇಕು ಹಾಗೂ ಸರ್ಕಾರಕ್ಕೆ ಈ ಮನವಿ ಶೀಘ್ರವೇ ಸಲ್ಲಿಸಿ ರಾಜಕೀಯ ನ್ಯಾಯ ಒದಗಿಸಿಕೊ ಡಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ಕಡೂರು ಪುರಸಭೆ ಉಪಾಧ್ಯಕ್ಷೆ ಮಂಜುಳಾ ಚಂದ್ರು, ಬೀರೂರು ಪುರಸಭೆ ಅಧ್ಯಕ್ಷೆ ಭಾಗ್ಯಲಕ್ಷ್ಮೀ ಮೋಹನ್, ಉಪಾದ್ಯಕ್ಷ ಎನ್.ಎಂ.ನಾಗರಾಜು, ಮೂಡಿಗೆರೆ ಪ.ಪಂ. ವೆಂಕಟೇಶ್, ಪುರಸಭೆ ಮಾಜಿ ಅಧ್ಯಕ್ಷ ಎಂ.ಪಿ.ಸುದರ್ಶನ್, ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಮೋಹನ್‌ಕುಮಾರ್, ವಿವಿಧ ಸದಸ್ಯ ರಾದ ಕಾಂತರಾಜು, ಮನುಮರಗುದ್ದಿ, ಪುರಸಭೆ ಸದಸ್ಯರಾದ ಸುಬ್ಬಣ್ಣ, ಗೋವಿಂದರಾಜ್, ವಿಜಯಚಿನ್ನ ರಾಜು, ಯತೀರಾಜ್, ಜ್ಯೋತಿ ವೆಂಕಟೇಶ್, ಶಾರದಾ ರುದ್ರಪ್ಪ, ಸುಮಿತ್ರ ಹಾಜರಿದ್ದರು.

Appeal to withdraw administrator appointed to municipal council

Share

Leave a comment

Leave a Reply

Your email address will not be published. Required fields are marked *

Don't Miss

ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ಬಳಿ ಹೊಸ ವಿವಾದ

ಚಿಕ್ಕಮಗಳೂರು: ಕಾಫಿನಾಡಿನ ಧಾರ್ಮಿಕ ಕ್ಷೇತ್ರ ‘ಇನಾಂ ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ’ (ದತ್ತಪೀಠ) ಆವರಣದಲ್ಲಿ ಈಗ ಮತ್ತೊಂದು ಹೊಸ ವಿವಾದ ಮುನ್ನೆಲೆಗೆ ಬಂದಿದೆ. ದತ್ತಪೀಠದಿಂದ ಸುಮಾರು 6 ಕಿಲೋಮೀಟರ್ ದೂರದಲ್ಲಿರುವ ಮಾಣಿಕ್ಯಧಾರಕ್ಕೆ ತೆರಳುವ...

ರ್‍ಯಾಪಿಡ್ ಬೈಕ್-ಆಟೋ ಪರವಾನಗಿ ನಿಲ್ಲಿಸುವಂತೆ ಆಗ್ರಹಿಸಿ ಪ್ರತಿಭಟನೆ

ಚಿಕ್ಕಮಗಳೂರು: ರ್‍ಯಾಪಿಡ್ ಬೈಕ್ ಮತ್ತು ಆಟೋ ಪರವಾನಗಿಯನ್ನು ನಿಲ್ಲಿಸಬೇಕು ಎ ಂದು ಒತ್ತಾಯಿಸಿ ಸೋಮವಾರ ಚಿಕ್ಕಮಗಳೂರು ನಗರ ಆಟೋ ಚಾಲಕರು ಮತ್ತು ಮಾಲೀಕರ ಸಂಘವು ನಗರದ ಹನುಮಂತಪ್ಪ ವೃತ್ತದಿಂದ ಆಜಾದ್‌ಪಾರ್ಕ್ ವೃತ್ತದವರೆಗೆ...

Related Articles

ರಾಜ್ಯ ಪರಿಸರ ಮೌಲ್ಯಮಾಪನ ಸಮಿತಿಯು ದೇಶದಲ್ಲೇ ನಂ.1ನೇ ಸ್ಥಾನ

ಚಿಕ್ಕಮಗಳೂರು: ಪರಿಸರದ ಮೇಲೆ ಹಾನಿ, ಒತ್ತಡ ತಡೆಯುವ ನಿಟ್ಟಿನಲ್ಲಿ ಈವರೆಗೆ ಯಾವುದೇ ಕೈಗಾರಿಕೆ ಅಥವಾ ಕಟ್ಟಡ...

ಅಶ್ಲೀಲ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೆ ಪ್ರಕರಣ ದಾಖಲು

ಚಿಕ್ಕಮಗಳೂರು: ಸೈಬರ್ ಕ್ರೈಮ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಪ್ರಾಪ್ತ ವಯಸ್ಸಿನ ಮಕ್ಕಳ ಲೈಂಗಿಕ ಶೋಷಣೆಯ ಅಶ್ಲೀಲ...

ಬಾಹ್ಯಾಕಾಶ ಕ್ಷೇತ್ರದಲ್ಲಿ ಆಲ್ದೂರಿನ ಯುವಕನ ಸಾಧನೆ

ಚಿಕ್ಕಮಗಳೂರಿನ ಆಲ್ದೂರು ಗ್ರಾಮದ ಅವೈಸ್ ಅಹ್ಮದ್, ತಮ್ಮ ‘Pixxeಟ’ ಸ್ಟಾರ್ಟ್‌ಅಪ್ ಮೂಲಕ ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ...

ನಾಮಫಲಕಗಳಲ್ಲಿ ಶೇ.60 ರಷ್ಟು ಕನ್ನಡ ಪದ ಬಳಸಲು ಮನವಿ

ಚಿಕ್ಕಮಗಳೂರು: ಕರ್ನಾಟಕ ಸರ್ಕಾರದ ಆದೇಶದಂತೆ ಜಿಲ್ಲೆಯ ಅಂಗಡಿ-ಮುಂಗಟ್ಟು ಹಾಗೂ ಸಾರ್ವಜನಿಕ ಪ್ರದೇಶದಲ್ಲಿ ಶೇ.೬೦ರಷ್ಟು ಕನ್ನಡ ಪದಗಳ...