Home Latest News ಚಿಕ್ಕಮಗಳೂರಿನಿಂದ ತಿರುಪತಿಗೆ ಹೊಸ ರೈಲು ಸಂಚಾರಕ್ಕೆ ಅನುಮೋದನೆ
Latest NewschikamagalurHomenamma chikmagalur

ಚಿಕ್ಕಮಗಳೂರಿನಿಂದ ತಿರುಪತಿಗೆ ಹೊಸ ರೈಲು ಸಂಚಾರಕ್ಕೆ ಅನುಮೋದನೆ

Share
Share

ಚಿಕ್ಕಮಗಳೂರು:  ಕಾಫಿನಾಡಿನ ಜನರಿಗೆ ರೈಲ್ವೇ ಇಲಾಖೆ ಸಿಹಿ ಸುದ್ದಿ ನೀಡಿದೆ. ಚಿಕ್ಕಮಗಳೂರಿನಿಂದ ಹಿಂದೂಗಳ ಶ್ರದ್ಧಾಕೇಂದ್ರ ತಿರುಪತಿಗೆ ಹೊಸ ರೈಲು ಸಂಚಾರಕ್ಕೆ ಅನುಮೋದನೆ ನೀಡಿದೆ. ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರ ಅವಿರತ ಪ್ರಯತ್ನದ ಫಲವಾಗಿ ಜಿಲ್ಲೆಯ ಜನರ ಬಹುದಿನದ ಕನಸು ಇದೀಗ ನನಸಾಗಿದೆ.

ರಾಜ್ಯ ರೈಲ್ವೆ ಖಾತೆ ಸಚಿವ ಸೋಮಣ್ಣರವರ ಸಹಕಾರದೊಂದಿಗೆ, ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಚಿಕ್ಕಮಗಳೂರು-ಬೆಂಗಳೂರು-ತಿರುಪತಿ ಎಕ್ಸ್ ಪ್ರೆಸ್ ರೈಲಿಗೆ ಅನುಮೋದನೆ ನೀಡಿದ್ದಾರೆ. ಸಧ್ಯ ಈ ರೈಲು ಪ್ರಾಯೋಗಿಕವಾಗಿ ವಾರಕ್ಕೊಂದು ಬಾರಿ ಸಂಚಾರ ನಡೆಸಲಿದ್ದು, ಪ್ರತಿ ಶುಕ್ರವಾರ ಸಂಜೆ ೫.೩೦ ಕ್ಕೆ ಚಿಕ್ಕಮಗಳೂರು ಬಿಟ್ಟು, ಶನಿವಾರ ಬೆಳಗ್ಗೆ ೭.೪೦ ಕ್ಕೆ ತಿರುಪತಿ ತಲುಪಲಿದೆ.

ತಿರುಪತಿಯಿಂದ ಚಿಕ್ಕಮಗಳೂರಿಗೆ ಪ್ರತಿ ಗುರುವಾರ ರಾತ್ರಿ ೯ ಕ್ಕೆ ರೈಲು ಹೊರಡಲಿದ್ದು, ಶುಕ್ರವಾರ ಬೆಳಗ್ಗೆ ೧೦.೩೦ ಕ್ಕೆ ಚಿಕ್ಕಮಗಳೂರು ತಲುಪಲಿದೆ.
ಚಿಕ್ಕಮಗಳೂರು ನಿಲ್ದಾಣದಿಂದ ಹೊರಡುವ ರೈಲು ಮಾರ್ಗ ಮಧ್ಯೆ ಸಖರಾಯಪಟ್ಟಣ, ಬಿಸಲೇಹಳ್ಳಿ, ಕಡೂರು, ಬೀರೂರು, ದೇವನೂರು, ಅರಸೀಕರೆ, ತಿಪಟೂರು, ತುಮಕೂರು, ಚಿಕ್ಕಬಾಣಾವರ, ಬೆಂಗಳೂರು, ಕೆ.ಆರ್.ಪುರಂ. ವೈಟ್ ಫೀಲ್ಡ್, ಬಂಗಾರಪೇಟೆ, ಕುಪ್ಪಂ, ಜೋಲಾರ್‌ಪೇಟ್, ಕಟ್ಪಾಡಿ, ಚಿತ್ತೂರು ಹಾಗೂ ಪಾಕಲಾದಲ್ಲಿ ನಿಲುಗಡೆ ನೀಡಲಿದೆ.

ತಿರುಪತಿಗೆ ನೇರ ರೈಲು ಬಿಟ್ಟಿರುವುದರಿಂದ ಚಿಕ್ಕಮಗಳೂರು ತಾಲ್ಲೂಕು ಸೇರಿದಂತೆ ಜಿಲ್ಲೆಯ ಎಲ್ಲಾ ತಾಲ್ಲೂಕುಗಳ ಜನತೆಗೆ ಅನುಕೂಲವಾಗಲಿದೆ. ಮಲೆನಾಡಿನ ೫ ತಾಲ್ಲೂಕುಗಳ ಜನರು ಜಿಲ್ಲಾ ಕೇಂದ್ರ ಚಿಕ್ಕಮಗಳೂರಿನಿಂದ ರೈಲು ಹತ್ತಲು ಅನುಕೂಲವಾದರೆ, ಬಯಲಿನ ೪ ತಾಲ್ಲೂಕುಗಳ ಜನರು ಕಡೂರು ಅಥವಾ ಬೀರೂರು ರೈಲ್ವೇ ನಿಲ್ದಾಣದಿಂದ ಪ್ರಯಾಣ ಬೆಳೆಸಲು ಅನುಕೂಲವಾಗಿದೆ.

ಪ್ರಯಾಣಿಕರ ಬೇಡಿಕೆಯ ಮೇರೆಗೆ ನಂತರದ ದಿನಗಳಲ್ಲಿ ವಾರಕ್ಕೆ ಮೂರು ದಿನ ರೈಲು ಓಡಿಸುವ ಯೋಜನೆಯನ್ನು ಸಿದ್ಧಪಡಿಸಲಾಗಿದೆ.
ಈ ರೈಲಿನ ಪ್ರಯೋಜನವನ್ನು ಬಳಸಿಕೊಳ್ಳುವಂತೆ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಮನವಿ ಮಾಡಿದ್ದಾರೆ. ಚಿಕ್ಕಮಗಳೂರಿಗೆ ಹೊಸ ರೈಲು ಘೋಷಣೆ ಆಗಿರುವುದರಿಂದ ಸಂಸದರಿಗೆ ಸಾರ್ವಜನಿಕರು ಅಭಿನಂದನೆ ಸಲ್ಲಿಸಿದ್ದಾರೆ.

Approval for new train service from Chikkamagaluru to Tirupati

Share

Leave a comment

Leave a Reply

Your email address will not be published. Required fields are marked *

Don't Miss

ಅಜ್ಜಂಪುರದ‌ಲ್ಲಿ ಇಂದು ನೂತನ ರಸ್ತೆ ಮೇಲ್ವೇತುವೆಯ ನಿರ್ಮಾಣ ಕಾರ್ಯಕ್ಕೆ ಶಿಲಾನ್ಯಾಸ

ಚಿಕ್ಕಮಗಳೂರು: ಕೇಂದ್ರ ರೈಲ್ವೆ ಹಾಗೂ ಜಲಶಕ್ತಿ ಖಾತೆ ಸಚಿವರಾದ ವಿ.ಸೋಮಣ್ಣ ಅವರು ಮೇ 31 ರಂದು (ನಾಳೆ ಭಾನುವಾರ) ಚಿಕ್ಕಮಗಳೂರು ಜಿಲ್ಲೆಯ ವಿವಿಧ ರೈಲ್ವೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಿದ್ದಾರೆ. ಬೆಳಿಗ್ಗೆ...

ಶ್ರೀಗಂಧ ಮರಗಳ ರಕ್ಷಣೆ, ಪ್ಲಾಸ್ಟಿಕ್ ಮುಕ್ತಕ್ಕೆ ಆಗ್ರಹಿಸಿ ಮೌನ ಪ್ರತಿಭಟನೆ

ಚಿಕ್ಕಮಗಳೂರು: ನಾಡಿನಲ್ಲಿ ಶ್ರೀಗಂಧ ಮರಗಳ ರಕ್ಷಣೆ ಮತ್ತು ನಗರವನ್ನು ಪ್ಲಾಸ್ಟಿಕ್ ಮು ಕ್ತಗೊಳಿಸಬೇಕು ಎಂದು ಆಗ್ರಹಿಸಿ ಶುಕ್ರವಾರ ಜಿಲ್ಲಾ ಶ್ರೀಗಂಧ ಮತ್ತು ವನಕೃಷಿ ಬೆಳೆಗಾರರ ಸಂಘ ಮತ್ತು ವಿವಿಧ ಕನ್ನಡಪರ ಸಂಘಟನೆಗಳ...

Related Articles

ಪ್ಲೆಕ್ಸ್‌ ಹರಿದ ಪ್ರಕರಣ ಇಬ್ಬರು ಆರೋಪಿಗಳ ಬಂಧನ

ಚಿಕ್ಕಮಗಳೂರು: ಕಾಫಿನಾಡಿನ ಕಾಂಗ್ರೆಸ್ ಶಾಸಕ ಹೆಚ್.ಡಿ.ತಮ್ಮಯ್ಯ ಹಾಗೂ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ಭಾವಚಿತ್ರವಿದ್ದ ಪ್ಲೆಕ್ಸ್‌ಗೆ...

ಅಡಿಕೆ ಕಳವು ಪ್ರಕರಣದ ಆರೋಪಿಗಳ ಬಂಧನ

ಬಾಳೆಹೊನ್ನೂರು: ಇಲ್ಲಿಗೆ ಸಮೀಪದ ಜಕ್ಕಣಕ್ಕಿಯ ರೈತರ ಗೋದಾಮಿನಲ್ಲಿಟ್ಟಿದ್ದ ಅಡಿಕೆಯನ್ನು ಕಳವು ಮಾಡಿದ ಆರೋಪದಲ್ಲಿ ಪೊಲೀಸರು ಇಬ್ಬರನ್ನು...

ಮೂಡಿಗೆರೆಯಲ್ಲಿ ಬಾಗಿಲು ಮುರಿದು ಕಳ್ಳತನ

ಮೂಡಿಗೆರೆ: ಬೀಗ ಹಾಕಿದ್ದ ಮನೆಯೊಂದರ ಮುಂಬಾಗಿಲು ಮುರಿದು ಮನೆಯೊಳಗೆ ನುಗ್ಗಿ ನಗದು ಸಹಿತ ಅಪಾರ ಮೌಲ್ಯದ...

ನಾಗಲಕ್ಷ್ಮಿ ಚಿತ್ರಮಂದಿರದ ಪ್ರದರ್ಶನ ಸ್ಥಗಿತ

ಚಿಕ್ಕಮಗಳೂರು: ಅಗ್ನಿ ಸುರಕ್ಷತಾ ಪರಿಕರಗಳನ್ನು ಅಳವಡಿಸದ ಕಾರಣಕ್ಕೆ ನಗರದ ನಾಗಲಕ್ಷ್ಮಿ ಚಿತ್ರಮಂದಿರದಲ್ಲಿ ಚಲನಚಿತ್ರ ಪ್ರದರ್ಶನಗಳನ್ನು ಅಧಿಕಾರಿಗಳು...