Home namma chikmagalur chikamagalur ಅಡಿಕೆ ದರೋಡೆ ಪ್ರಕರಣ-ಮಾಲು ಸಮೇತ ನಾಲ್ವರು ಆರೋಪಿಗಳ ಬಂಧನ
chikamagalurHomeLatest Newsnamma chikmagalur

ಅಡಿಕೆ ದರೋಡೆ ಪ್ರಕರಣ-ಮಾಲು ಸಮೇತ ನಾಲ್ವರು ಆರೋಪಿಗಳ ಬಂಧನ

Share
Share

ನರಸಿಂಹರಾಜಪುರ: ಅಡಿಕೆ ದರೋಡೆ ಪ್ರಕರಣ ಭೇದಿಸಿರುವ ಪೊಲೀಸರು, ಮಾಲು ಸಮೇತ ನಾಲ್ವರು ಆರೋಪಿಗಳನ್ನು ಬಂಧಿಸಿದ್ದಾರೆ. ಭದ್ರಾವತಿ ತಾಲ್ಲೂಕು ಅಗರದಹಳ್ಳಿ ಕ್ಯಾಂಪ್‌ನ ನಿವಾಸಿ ವಿರೇಶ, ಮಹೇಶ, ಎಂ.ಕಾರ್ತಿಕ ಹಾಗೂ ಆರ್. ಶ್ರೀಹರಿ ಬಂಧಿತರು.

ತಾಲ್ಲೂಕಿನ ಬಾಳೆಹೊನ್ನೂರು– ನರಸಿಂಹರಾಜಪುರ ಮಾರ್ಗಮಧ್ಯೆ ಬರುವ ಅಳೇಹಳ್ಳಿ ಗ್ರಾಮದಲ್ಲಿ ಡಿ. 12ರಂದು ಪಿಕಪ್ ವಾಹನ ಅಡ್ಡಗಟ್ಟಿ ವಾಹನದ ಮಾಲೀಕ ಕೆ. ರವಿ ಹಾಗೂ ಚಾಲಕ ವಿಶ್ವಾಸ್‌ ಮೇಲೆ ಹಲ್ಲೆ ನಡೆಸಿ, 44 ಕ್ವಿಂಟಲ್ ತೂಕದ 67 ಚೀಲ ಹಸಿ ಅಡಿಕೆ, ₹29 ಸಾವಿರ ನಗದು ಹಾಗೂ 2 ಮೊಬೈಲ್ ಫೋನ್‌ಗಳನ್ನು ದರೋಡೆ ಮಾಡಲಾಗಿತ್ತು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳಿಂದ ದರೋಡೆ ಮಾಡಿದ್ದ ₹2.56 ಲಕ್ಷ ಮೌಲ್ಯದ 44 ಕ್ವಿಂಟಲ್ ಅಡಿಕೆ, ₹3 ಲಕ್ಷ ಮೌಲ್ಯದ ಬೊಲೆರೋ ವಾಹನ, ಅಂದಾಜು ₹15 ಸಾವಿರ ಮೊತ್ತದ ಬೈಕ್ ಸೇರಿ ₹5.71 ಲಕ್ಷದ ಸ್ವತ್ತನ್ನು ವಶಪಡಿಸಿಕೊಂಡಿದ್ದಾರೆ.

ಕಾರ್ಯಾಚರಣೆಯಲ್ಲಿ ಪೊಲೀಸ್ ಇನ್‌ಸ್ಪೆಕ್ಟರ್ ಗುರುದತ್ ಕಾಮತ್, ಸಬ್ ಇನ್‌ಸ್ಪೆಕ್ಟರ್ ಬಿ.ಎಸ್. ನಿರಂಜನ್ ಗೌಡ, ಅಪರಾಧ ವಿಭಾಗದ ಸಬ್ ಇನ್‌ಸ್ಪೆಕ್ಟರ್ ಎನ್.ಎ. ಜ್ಯೋತಿ, ಸಿಬ್ಬಂದಿಗಳಾದ ಮಧು, ಎಸ್.ಜಿ. ಸೋಮೇಶ, ಯುಗಾಂಧರ, ಪಿ.ಎ. ಬಿನು, ಅಮಿತ್ ಚೌಗುಲೆ, ದೇವರಾಜ, ರೇವಗೊಂಡ ಅರಾಧರ, ಎಂ.ಸಿ. ಮನು, ಮುರುಗೇಶ, ಚಂದ್ರಕಾಂತ ಪೂಜಾರಿ ಭಾಗವಹಿಸಿದ್ದರು.

Areca nut robbery case – Four accused arrested along with goods

Share

Leave a comment

Leave a Reply

Your email address will not be published. Required fields are marked *

Don't Miss

ನಾಮಫಲಕದಲ್ಲಿ ಶೇ.೬೦ರಷ್ಟು ಕನ್ನಡಕ್ಕೆ ಪ್ರಾಧಾನ್ಯತೆಗೆ ಸೂಚನೆ

ಚಿಕ್ಕಮಗಳೂರು: ಮುಂದಿನ ಒಂದು ವಾರದೊಳಗೆ ಉದ್ಯಮದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ನಿಯಮಗಳ ಅನ್ವಯ ಶೇ. ೬೦ರಷ್ಟು ಕನ್ನಡ ನಾಮಫಲಕ ಇರುವಂತೆ ಕ್ರಮ ಕೈಗೊಳ್ಳಬೇಕು. ತಪ್ಪಿದಲ್ಲಿ ನಗರಸಭೆಯಿಂದ ನಾಮಫಲಕಗಳನ್ನು ತೆರವುಗೊಳಿಸಿ ಕಾನೂನು ರೀತಿ...

ಮದುವೆ ಮನೆಯಲ್ಲಿ ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳವು

ಚಿಕ್ಕಮಗಳೂರು: ಜಿಲ್ಲೆಯ ಬಾಳೆಹೊನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಮದುವೆ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಸುಮಾರು ₹3.75 ಲಕ್ಷ ಮೌಲ್ಯದ ಚಿನ್ನಾಭರಣ ಕಳುವಾಗಿರುವ ಘಟನೆ ಬೆಳಕಿಗೆ ಬಂದಿದೆ. ಪ್ರಕರಣ ಸಂಬಂಧ ಇಬ್ಬರು ಸಂಬಂಧಿಕರ...

Related Articles

ಮನೆಯಲ್ಲಿ ಇಟ್ಟಿದ್ದ ಚಿನ್ನಾಭರಣ-20 ಸಾವಿರ ನಗದು ಕಳವು

ಚಿಕ್ಕಮಗಳೂರು: ಮನೆಯ ಬೀರುವಿನಲ್ಲಿ ಇರಿಸಿದ್ದ ಸುಮಾರು ೨೮ ಗ್ರಾಂ ಚಿನ್ನಾಭರಣ ಹಾಗೂ ?೨೦ ಸಾವಿರ ನಗದು...

ವೃದ್ದಾಪ್ಯ, ಅಂಗವಿಕಲ ವೇತನ ವಿಳಂಬ ಖಂಡಿಸಿ ಬಿಜೆಪಿ ಪ್ರತಿಭಟನೆ

ಚಿಕ್ಕಮಗಳೂರು: ವೃದ್ದಾಪ್ಯ, ವಿಧವಾ, ವಿಕಲಚೇತನ ಹಾಗೂ ಬಿಪಿಎಲ್ ಕಾರ್ಡ್ ರದ್ದು ಪಡಿಸಿರುವ ರಾಜ್ಯದ ಕಾಂಗ್ರೆಸ್ ಸರ್ಕಾರದ...

19 ಲಕ್ಷ ಜನರ ಪಿಂಚಣಿ ರದ್ದು: ಸರ್ಕಾರದ ವಿರುದ್ಧ ವಿಧಾನಮಂಡಲದಲ್ಲಿ ಸಂಗ್ರಾಮ

ಸಖರಾಯಪಟ್ಟಣ: ರಾಜ್ಯದಲ್ಲಿ 19 ಲಕ್ಷಕ್ಕೂ ಹೆಚ್ಚು ಜನರ ವೃದ್ಧಾಪ್ಯ, ವಿಧವಾ ಹಾಗೂ ಅಂಗವಿಕಲ ಪಿಂಚಣಿಯನ್ನು ರದ್ದುಪಡಿಸಲಾಗಿದೆ....

ಸಖರಾಯಪಟ್ಟಣದ ಮೂಲಸೌಕರ್ಯ ಸಮಸ್ಯೆ ಪರಿಹಾರಕ್ಕೆ 5 ಬೇಡಿಕೆ

ಚಿಕ್ಕಮಗಳೂರು: ಜಿಲ್ಲೆಯ ಪ್ರಮುಖ ಗ್ರಾಮ ಪಂಚಾಯಿತಿಗಳಲ್ಲಿ ಒಂದಾಗಿರುವ ಸಖರಾಯಪಟ್ಟಣದಲ್ಲಿ ಮೂಲಭೂತ ಸೌಲಭ್ಯಗಳ ಕೊರತೆಯಿಂದ ಜನರು ತೊಂದರೆ...