Home namma chikmagalur chikamagalur ಅಡಿಕೆ ವ್ಯಾಪಾರಿಗೆ 22 ಲಕ್ಷ ರೂಪಾಯಿ ಪಂಗನಾಮ
chikamagalurHomeLatest Newsnamma chikmagalur

ಅಡಿಕೆ ವ್ಯಾಪಾರಿಗೆ 22 ಲಕ್ಷ ರೂಪಾಯಿ ಪಂಗನಾಮ

Share
Share

ಕಡೂರು: ಅಡಿಕೆ ವ್ಯಾಪಾರಿಯೊಬ್ಬರಿಗೆ ಬರೋಬ್ಬರಿ 22 ಲಕ್ಷ ರೂಪಾಯಿ ಪಂಗನಾಮ ಹಾಕಿರುವ ಘಟನೆ ಬೆಳಕಿಗೆ ಬಂದಿದೆ. ದೇವಸ್ಥಾನದ ಪೂಜಾರಿ ಮತ್ತು ಆತನ ಮಗ ಸೇರಿ ಹೂತಿಟ್ಟ ಚಿನ್ನದ ಆಮಿಷವೊಡ್ಡಿ  ವಂಚನೆ ಎಸಗಿದ್ದಾರೆ.

ಬಾಣವಾರದ ಗರುಡನಗಿರಿ ಗ್ರಾಮದ ಜುಂಜಪ್ಪ ದೇವಸ್ಥಾನದ ಪೂಜಾರಿ ಸ್ವಾಮಿ ಮತ್ತು ಆತನ ಮಗ ಗಂಗಾಧರ ಈ ಪ್ರಕರಣದ ಆರೋಪಿಗಳು. ಪರಿಚಯಸ್ಥರಾಗಿದ್ದ ಅಡಿಕೆ ವ್ಯಾಪಾರಿ ಹೇಮರಾಜ್ ಅವರಿಗೆ ಫೋನ್ ಮಾಡಿದ್ದ ಪೂಜಾರಿ ಸ್ವಾಮಿ, ದೇವಸ್ಥಾನದ ಪಕ್ಕದಲ್ಲಿ ನಿಧಿ ರೂಪದ 7 ಚಿನ್ನದ ಮಡಿಕೆಗಳು ಸಿಕ್ಕಿವೆ ಎಂದು ನಂಬಿಸಿದ್ದರು.

ಆ ಮಡಿಕೆಗಳಲ್ಲಿ ಒಂದನ್ನು ನಿಮಗೆ ನೀಡುತ್ತೇನೆ, ಅದರಿಂದ ನಿಮ್ಮ ಮನೆ ಸಮೃದ್ಧಿಯಾಗುತ್ತದೆ ಎಂದು ಆಸೆ ತೋರಿಸಿದ್ದರು. ಆರೋಪಿಗಳು ಕಡೂರಿನ ಎಪಿಎಂಸಿ ಮಾರುಕಟ್ಟೆ ಬಳಿ ಹೇಮರಾಜ್ ಅವರನ್ನು ಭೇಟಿಯಾಗಿ, ಮಡಿಕೆಯಲ್ಲಿ ಚಿನ್ನದ ನಾಣ್ಯಗಳಂತಹ ವಸ್ತುಗಳನ್ನು ತೋರಿಸಿ ನಂಬಿಸಿದ್ದರು. ಇದನ್ನು ಎಲ್ಲಿಯೂ ಪರೀಕ್ಷೆ ಮಾಡಿಸಬೇಡಿ ಎಂದು ಎಚ್ಚರಿಕೆ ನೀಡಿ, ಅವರಿಂದ 22 ಲಕ್ಷ ರೂಪಾಯಿಗಳನ್ನು ಪಡೆದುಕೊಂಡು ಒಂದು ಮಡಿಕೆಯನ್ನು ಹಸ್ತಾಂತರಿಸಿದ್ದರು.

ಇಷ್ಟಕ್ಕೇ ಸುಮ್ಮನಾಗದ ತಂದೆ ಮಗ. 20 ದಿನಗಳ ನಂತರ ಮತ್ತೆ ಕರೆ ಮಾಡಿ ಮಡಿಕೆಯಲ್ಲಿ ಹೆಚ್ಚಿನ ಚಿನ್ನವಿದೆ ಎಂದು ಹೇಳಿ ಹೆಚ್ಚುವರಿಯಾಗಿ 3.5 ಲಕ್ಷ ರೂಪಾಯಿಗೆ ಬೇಡಿಕೆ ಇಟ್ಟಿದ್ದಾರೆ. ಇದರಿಂದ ಅನುಮಾನಗೊಂಡ ಹೇಮರಾಜ್ ಅವರು ಅಕ್ಕಸಾಲಿಗರಲ್ಲಿ ಚಿನ್ನವನ್ನು ಪರೀಕ್ಷಿಸಿದಾಗ ಅದು ನಕಲಿ ಎಂದು ತಿಳಿದುಬಂದಿದೆ.

ತಕ್ಷಣವೇ ಎಚ್ಚೆತ್ತ ಸಂತ್ರಸ್ತರು ಕಡೂರು ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Areca nut trader fined Rs 22 lakh

Share

Leave a comment

Leave a Reply

Your email address will not be published. Required fields are marked *

Don't Miss

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು. ಶೃಂಗೇರಿ ತಾಲೂಕಿನ ಬುಕ್ಕಡಿಬೈಲು ಗ್ರಾಮದ ನಿವಾಸಿಯಾಗಿರುವ ಬಿ.ಜಿ. ಕೃಷ್ಣಮೂರ್ತಿ ವಿರುದ್ಧ ಕರ್ನಾಟಕದಲ್ಲಿ ಒಟ್ಟು 54...

ವಾಹನಗಳ ಮಿರರ್ ತಗುಲಿ-ಕತ್ತಿ-ಬಂದೂಕು ಝಳಪಿಸಿದ ಗಲಾಟೆ

ಚಿಕ್ಕಮಗಳೂರು: ವಾಹನಗಳ ಮಿರರ್ ಪರಸ್ಪರ ತಗುಲಿದ ಸಣ್ಣ ವಿಚಾರ ಕತ್ತಿ-ಬಂದೂಕು ಝಳಪಿಸುವ ಹಂತಕ್ಕೆ ತಲುಪಿರುವ ಆರೋಪವೊಂದು ಚಿಕ್ಕಮಗಳೂರು ತಾಲೂಕಿನ ಆಲ್ಲೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಸರವಳ್ಳಿ ಗ್ರಾಮದಲ್ಲಿ ಜುಲೈ 2...

Related Articles

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ,...

ಕವಿಕಲ್ ಮಠದ ರಸ್ತೆಯಲ್ಲಿ ಹುಲಿ ದಿಢೀರನೆ ಪ್ರತ್ಯಕ್ಷ

ಚಿಕ್ಕಮಗಳೂರು: ಕಾಫಿನಾಡಿನ ಹಸಿರು ಕಾಡುಗಳ ನಡುವೆ ಸಂಚರಿಸುತ್ತಿದ್ದ ಪ್ರವಾಸಿಗರಿಗೆ ಮರೆಯಲಾಗದ ಅನುಭವವೊಂದು ಎದುರಾಗಿದೆ. ಚಿಕ್ಕಮಗಳೂರು ತಾಲೂಕಿನ...

ಭದ್ರಾ ಜಲಾಶಯದ ನೀರು ಕುಡಿಯುವ ಉದ್ದೇಶಕ್ಕೆ ಮಾತ್ರ ಬಳಸಲು ಸೂಚನೆ

ಚಿಕ್ಕಮಗಳೂರು: ಪ್ರಸಕ್ತ ಸಾಲಿನಲ್ಲಿ ಮುಂಗಾರು ಮಳೆಯ ತೀವ್ರ ಕೊರತೆಯಿಂದಾಗಿ ಜಲಾಶಯಗಳಲ್ಲಿ ನೀರಿನ ಮಟ್ಟ ಗಣನೀಯವಾಗಿ ಕುಸಿಯುತ್ತಿದ್ದು,...