ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್ ಅವರ ಕರ್ತವ್ಯಕ್ಕೆ ಅಡ್ಡಿಪಡಿಸಿ, ಹಲ್ಲೆ ನಡೆಸಿದ ಘಟನೆ ನಡೆದಿದೆ.
ಜೂನ್ 25 ರಂದು ಸಂಜೆ ಗಸ್ತು ಕರ್ತವ್ಯದಲ್ಲಿದ್ದ ಎ.ಎಸ್.ಐ ಅವರು ಜೀಪ್ ತೆರವುಗೊಳಿಸುವಂತೆ ಸೂಚಿಸಿದಾಗ ಕೆರಳಿದ ಆರೋಪಿಗಳು, ಸಮವಸ್ತ್ರ ಹಿಡಿದು ಎಳೆದಾಡಿ ಕೆಳಗೆ ತಳ್ಳಿ ಅವಾಚ್ಯವಾಗಿ ನಿಂದಿಸಿದ್ದಾರೆ.
ತಕ್ಷಣ ಸ್ಥಳಕ್ಕೆ ಬಂದ ಪಿ.ಎಸ್.ಐ ಸುನಿತಾ ಮತ್ತು ಸಿಬ್ಬಂದಿ ವರ್ಗದವರು ಉಪ್ಪಳ್ಳಿಯ ಮಣಿಕಂಠ ಮತ್ತು ಅಂಬಳೆ ಹೋಬಳಿಯ ಪ್ರಜ್ವಲ್ ಎಂಬುವವರನ್ನು ಬಂಧಿಸಿದ್ದಾರೆ.
ರಿಜಿಸ್ಟ್ರೇಷನ್ ಆಗದ ಹೊಸ ಥಾರ್ ಜೀಪನ್ನು ವಶಪಡಿಸಿಕೊಳ್ಳಲಾಗಿದ್ದು, ನಗರ ಪೊಲೀಸ್ ಠಾಣೆಯಲ್ಲಿ ಕಾನೂನು ಕ್ರಮ ಜರುಗಿಸಲಾಗಿದೆ.
ASI attacked near district playground
Leave a comment