Home namma chikmagalur ಆ.17: ಅಜ್ಜಂಪುರ ಪ.ಪಂ. ಚುನಾವಣೆಗೆ ವೇಳಾ ಪಟ್ಟಿ ಪ್ರಕಟ
namma chikmagalurajjampuraHomeLatest News

ಆ.17: ಅಜ್ಜಂಪುರ ಪ.ಪಂ. ಚುನಾವಣೆಗೆ ವೇಳಾ ಪಟ್ಟಿ ಪ್ರಕಟ

Share
Share

ಚಿಕ್ಕಮಗಳೂರು: ಹೊಸದಾಗಿ ರಚನೆಯಾಗಿರುವ ಅಜ್ಜಂಪುರ ಪಟ್ಟಣ ಪಂಚಾಯಿತಿಯ ನಂ. ೧ರಿಂದ ೧೨ ವಾರ್ಡ್‌ಗಳ ಕೌನ್ಸಿಲರುಗಳ ಸಾರ್ವತ್ರಿಕ ಚುನಾವಣಾ ವೇಳಾಪಟ್ಟಿಯನ್ನು ನಿಗದಿಪಡಿಸಿ ಜಿಲ್ಲಾಧಿಕಾರಿಗಳಾದ ಮೀನಾ ನಾಗರಾಜ್ ಸಿ.ಎನ್. ಇಂದು ಅಧಿಸೂಚನೆ ಹೊರಡಿಸಿದ್ದಾರೆ.

ಅದರಂತೆ ಚುನಾವಣೆಗೆ ನಾಮಪತ್ರಗಳನ್ನು ಸಲ್ಲಿಸಲು ಆಗಸ್ಟ್ ೫ ರಂದು ಕೊನೆಯ ದಿನವಾಗಿದ್ದು, ಆಗಸ್ಟ್ ೬ ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು.

ಉಮೇದುವಾರಿಕೆಯನ್ನು ಹಿಂತೆಗೆದುಕೊಳ್ಳಲು ಆಗಸ್ಟ್ ೮ ಕೊನೆಯ ದಿನವಾಗಿದೆ. ಮತದಾನ ಅಗತ್ಯವಿದ್ದರೆ ಆಗಸ್ಟ್ ೧೭ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ಮತದಾನವನ್ನು ನಡೆಸಲಾಗುವುದು.

ಮರು ಮತದಾನ ಅಗತ್ಯವಿದ್ದಲ್ಲಿ ಆಗಸ್ಟ್ ೧೯ ರಂದು ಬೆಳಿಗ್ಗೆ ೭ ಗಂಟೆಯಿಂದ ಸಂಜೆ ೫ ಗಂಟೆಯವರೆಗೆ ನಡೆಸಲಾಗುವುದು.

ಆಗಸ್ಟ್ ೨೦ ರಂದು ಬೆಳಿಗ್ಗೆ ೮ ಗಂಟೆಯಿಂದ ತಾಲ್ಲೂಕು ಕೇಂದ್ರದಲ್ಲಿ ಮತಗಳ ಎಣಿಕೆ ನಡೆಯಲಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Aug. 17: Schedule announced for Ajjampura Town Panchayat elections

Share

Leave a comment

Leave a Reply

Your email address will not be published. Required fields are marked *

Don't Miss

ಮಹಿಳೆ ಗಮನ ಬೇರೆಡೆ ಸೆಳೆದು ₹ 3.90 ಲಕ್ಷ ವಂಚನೆ

ಕಡೂರು: ಕಳೆದ ಜೂನ್‌ನಲ್ಲಿ ಗಮನ ಬೇರೆಡೆಗೆ ಸೆಳೆದು ಗ್ರಾಹಕರೋರ್ವರ ಖಾತೆಯಿಂದ ₹3.90 ಲಕ್ಷಡ್ರಾ ಮಾಡಿರುವ ಪ್ರಕರಣ ಕುರಿತು ಮಹಿಳೆಯೊಬ್ಬರುಕಡೂರು ಪೊಲೀಸರಿಗೆ ಗುರುವಾರ ದೂರು ನೀಡಿದ್ದಾರೆ. ತಾಲೂಕಿನ ಚಿಕ್ಕಪಟ್ಟಣಗೆರೆಯ ಸುನಂದ ಟಿ.ಎಂ. ಎಂಬವರು...

ಶಿವಮೊಗ್ಗ-ಶೃಂಗೇರಿ ಮಾರ್ಗ ಪರಿಗಣಿಸಿ

ಚಿಕ್ಕಮಗಳೂರು: ನೂತನ ರೈಲ್ವೆ ಯೋಜನೆಗೆ ಅಂತಿಮ ಸ್ಥಳ ನಿರ್ಧಾರ ಸಮೀಕ್ಷೆ ಮಾಡುವ ವೇಳೆ ಶಿವಮೊಗ್ಗ, ಭದ್ರಾವತಿ, ಮುತ್ತಿನಕೊಪ್ಪ, ಎನ್.ಆರ್.ಪುರ, ಬಾಳೆಹೊನ್ನೂರು, ಜಯಪುರ, ಕೊಪ್ಪ, ಹರಿಹರಪುರ, ಶೃಂಗೇರಿ ರೈಲ್ವೆ ಮಾರ್ಗವನ್ನು ಪ್ರಮುಖವಾಗಿ ಪರಿಗಣಿಸಬೇಕು...

Related Articles

ಮಾಧ್ಯಮ ಕ್ಷೇತ್ರ ಶಾಸಕಾಂಗ-ಕಾರ್ಯಾಂಗ-ಸಾರ್ವಜನಿಕರ ನಡುವೆ ಸೇತುವೆ

ಚಿಕ್ಕಮಗಳೂರು:  ಮಾಧ್ಯಮ ಕ್ಷೇತ್ರ ಪ್ರಜಾಪ್ರಭುತ್ವದ ನಾಲ್ಕನೆ ಅಂಗ ಎಂಬ ಮಾತು ಅಕ್ಷರಶಃ ಸತ್ಯ. ಸರಕಾರಗಳ ಯೋಜನೆಗಳ...

ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು

ಚಿಕ್ಕಮಗಳೂರು:  ರಕ್ತಕ್ಕೆ ಪರ್ಯಾಯ ವ್ಯವಸ್ಥೆಗಳಿಲ್ಲ. ಈ ದಿಸೆಯಲ್ಲಿ ರಕ್ತದ ಅವಶ್ಯಕತೆ ಅರಿತು ರಕ್ತದಾನ ಮಾಡಬೇಕು. ಇದು...

ಭೂದಾನ-ಗೋದಾನ-ಅನ್ನದಾನಕ್ಕಿಂತ ಮತದಾನ ಶ್ರೇಷ್ಠ

ಚಿಕ್ಕಮಗಳೂರು:  ಭೂದಾನ, ಗೋದಾನ, ಅನ್ನದಾನಕ್ಕಿಂತ ಸಮಾಜದ ನಾಗರೀಕರಿಗೆ ಮ ತದಾನ ಸರ್ವಶ್ರೇಷ್ಟ. ಆಸೆ-ಆಕಾಂಕ್ಷೆಗಳಿಗೆ ಒಳಗಾಗದೇ ಪ್ರಜೆಗಳ...

ಮರದಿಂದ ಬಿದ್ದು ಕಾರ್ಮಿಕ ಸಾವು

ಕಳಸ: ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಕಾಫಿ ಎಸ್ಟೇಟ್...