Home namma chikmagalur ಆಂಟಿ ಪ್ರೀತ್ಸಿ ಬೆಚ್ಚಿ ಬಿದ್ದ ಯುವಕ !
namma chikmagalurchikamagalurCrime NewsHomeLatest News

ಆಂಟಿ ಪ್ರೀತ್ಸಿ ಬೆಚ್ಚಿ ಬಿದ್ದ ಯುವಕ !

Share
Share

ಚಿಕ್ಕಮಗಳೂರು: ಸೋಷಿಯಲ್‌ ಮಿಡಿಯಾದಲ್ಲಿ ಪರಿಚಯವಾದ ಹುಡುಗ ,ಹುಡುಗಿಯರು ಪ್ರೀತಿಸಿ ಮೋಸ ಹೋಗುವ ಹಲವು ಘಟನೆಗಳಿವೆ.

ಪಾಕಿಸ್ತಾನದ ಗೃಹಿಣಿ ಭಾರತದ ಯುವಕ,ಬಾಂಗ್ಲಾದೇಶ ಹುಡುಗ ಭಾರತದ ಯುವತಿ ಪ್ರೀತಿಯ ಜಾಲದಲ್ಲಿ ಮುಳುಗಿದ ಸುದ್ದಿಗಳನ್ನು ಕೇಳಿತ್ತಿರುವಾಗಲೇ ವಿವಿಧ ರಾಜ್ಯಗಳ ಹಡುಗ ಹುಡುಗಿಯರ ಪ್ರೇಮ್ ಕಹಾನಿ ಗೊತ್ತು ಫಜೀತಿ ಮಾಡಿಕೊಂಡಿದ್ದು ಉಂಟು.
ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೊಸಕೆರೆಯ ಗೃಹಿಣಿಯ ಪ್ರೇಮ ಕತೆ ಇನ್ನೂ ಮಜವಾಗಿದೆ.

ಕೋಲಾರ ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ದ್ವಾರಸಂದ್ರದ ಇಪ್ಪತ್ತೈದು ವಯಸ್ಸಿನ ನವನೀತ್ ಎಂಬ ಯುವಕ ಹುಡುಗಿ ಎಂದು ನಂಬಿ ಗೃಹಿಣಿಯನ್ನು ಪ್ರೀತಿಸಿ ಗುಂಡಿಗೆ ಬಿದ್ದು ಪೇಚಾಡುತ್ತಿರುವ ವಿಷಯ ತಿಳಿದುಬಂದಿದೆ.

ಇನ್ ಸ್ಟಾದಲ್ಲಿ ಪರಿಚಯವಾಗಿ ಚಾಟಿಂಗ್ ನಲ್ಲಿ ಪ್ರೀತಿ ವಿಷಯ ಪ್ರಸ್ತಾಪವಾಗಿದೆ ಮೂಡಿಗೆರೆ ತಾಲೂಕಿನ ಹೊಸಕೆರೆ ಎಂಬ ಊರಿನ ಅನ್ನಪೂರ್ಣ ನವನೀತ್ ಮನೆಗೆ ಹೋಗಿ ಬಂದು ಮದುವೆ ಪ್ರಸ್ತಾಪ ಕೂಡ ಆಗಿದೆ.ನವನೀತ್ ಬಂಧುಗಳಿಗೆ ವಿಷಯ ತಿಳಿದು ಮದುವೆಗೆ ಒತ್ತಾಯ ಮಾಡಿದ್ದಾರೆ.ಒಂದು ವರ್ಷದಿಂದ ಕಾರಣ,ನೆಪ ಹೇಳಿಕೊಂಡು ಮದುವೆ ಮುಂದೆ ಮಾಡಿಕೊಳ್ಳುವ ಎಂದು ದುಡ್ಡು,ಖಾಸು ತೆಗೆದು ಕೊಂಡು ಬಂದಿದ್ದಾಳೆ ಎನ್ನುತ್ತಾನೆ .

ಇತ್ತೀಚಿಗೆ ಅನ್ನಪೂರ್ಣ ಳ ಮೊಬೈಲ್ ಗೆ ಕರೆ ಮಾಡಿದಾಗ ಅಣ್ಣನ ಮಗನಿಗೆ ಹುಷಾರಿಲ್ಲಾ ಎಂಬ ಕಾರಣ ಹೇಳಿ ನವನೀತ್ ನಂಬರ್ ಬ್ಲಾಕ್ ಮಾಡಿದ್ದಾಳಂತೆ ಹಣ ತೆಗೆದುಕೊಂಡು ಬಂದ ನವನೀತ್ ಹೊಸಕೆರೆಯ ಅನ್ನಪೂರ್ಣ ಮನೆಗೆ ಬಂದು ನೋಡಿದಾಗ ಬೆಚ್ಚಿಬಿದ್ದಿದ್ದಾನೆ.ಅನ್ನಪೂರ್ಣ ಮೂರು ಮಕ್ಕಳ ತಾಯಿ ಗಂಡ ಕೂಡ ಇದ್ದಾನೆ ಎಂದು ತಿಳಿದು ಹಣ ಕಳೆದುಕೊಂಡು ಮೋಸ ಹೋಗಿದ್ದೇನೆ ಎಂದು ತಿಳಿದು ಚಡಪಡಿಸುತ್ತಾ ಆಕ್ರೋಶ ವ್ಯಕ್ತಪಡಿಸಿ ಕೂಗಾಡಿ ಹೋಗಿದ್ದಾನೆ ಎಂದು ತಿಳಿದು ಬಂದಿದೆ.

Aunty Preetse shocked the young man!

Share

Leave a comment

Leave a Reply

Your email address will not be published. Required fields are marked *

Don't Miss

ಗಿರಿ ಪ್ರದೇಶದಲ್ಲಿ ವಾಹನ ದಟ್ಟಣೆ ನಿಯಂತ್ರಿಸಲು ನೂತನ ಸಂಚಾರ ವ್ಯವಸ್ಥೆ

ಚಿಕ್ಕಮಗಳೂರು: : ಮುಳ್ಳಯ್ಯನಗಿರಿ ಭಾಗದಲ್ಲಿ ಇತ್ತೀಚೆಗೆ ವಾರಾಂತ್ಯದಲ್ಲಿ ವಾಹನಗಳ ದಟ್ಟಣೆ ನಿಯಂತ್ರಿಸಲು ಜಿಲ್ಲಾಡಳಿತದಿಂದ ಕ್ರಮ ಕೈಗೊಳ್ಳಲಾಗುತ್ತಿದ್ದು, ಎರಡು ಸ್ಲಾಟ್‌ಗಳಲ್ಲಿ ಪ್ರತೀದಿನ ವಾಹನಗಳನ್ನು ಗಿರಿಭಾಗಕ್ಕೆ ಬಿಡಲಾಗುವುದು ಎಂದು ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ತಿಳಿಸಿದರು....

ಕಾವೇರುತ್ತಿದೆ ಅಜ್ಜಂಪುರ ಪಟ್ಟಣ ಪಂಚಾಯತಿ ಚುನಾವಣೆ

ಅಜ್ಜಂಪುರ: ಕಳೆದ ಏಳು ವರ್ಷಗಳಿಂದ ಚುನಾಯಿತ ಪ್ರತಿನಿಧಿಗಳು ಇಲ್ಲದೆ ಬಣಗುಡುತ್ತಿದ್ದ ಪಟ್ಟಣ ಪಂಚಾಯತಿಗೆ ಆಗಷ್ಟ್ 17 ರಂದು ಚುನಾವಣೆ ದಿನಾಂಕ ನಿಗದಿಯಾಗಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಹಾಗೂ ಜನತಾದಳದ ಮಧ್ಯೆ ಬಿರುಸಿನ...

Related Articles

ಮಕ್ಕಳ ಬಾಲ್ಯ ಸುರಕ್ಷತೆಗಾಗಿ ಭದ್ರ ಬಾಲ್ಯ ಯೋಜನೆ ಅನುಷ್ಠಾನ

ಚಿಕ್ಕಮಗಳೂರು: ಮಕ್ಕಳ ಬಾಲ್ಯವನ್ನು ಸುರಕ್ಷಿತಗೊಳಿಸುವ ಗುರಿ ಇರಿಸಿಕೊಂಡು ಜಿಲ್ಲೆಯಲ್ಲಿ ಭದ್ರ ಬಾಲ್ಯ ಯೋಜನೆ ಅನುಷ್ಠಾನಗೊಳಿಸಲಾಗಿದ್ದು, ಎಲ್ಲಾ...

ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ವಿರುದ್ಧ ಸಮಾಜದಿಂದ ಪ್ರತಿಭಟನೆ

ಚಿಕ್ಕಮಗಳೂರು:  ಕ್ಷೌರಿಕ ವೃತ್ತಿಯ ದರಪಟ್ಟಿಯ ದುರ್ಬಳಕೆ ಮತ್ತು ಸಾಮಾಜಿಕ ಜಾಲ ತಾಣಗಳಲ್ಲಿ ನಿಗಧಿತ ದರಕ್ಕಿಂತ ಕಡಿಮೆ...

ಮಾದಕ ವಸ್ತು ವಿರೋಧಿ ಜಾಗೃತಿ ಸಮಿತಿ ರಚನೆ ಕಡ್ಡಾಯ 

ಚಿಕ್ಕಮಗಳೂರು:  ಶಾಲಾ ಕಾಲೇಜುಗಳಲ್ಲಿ ಮಾದಕವಸ್ತು ವಿರೋಧಿ ಜಾಗೃತಿ ಸಮಿತಿಗಳನ್ನು ಕಡ್ಡಾಯವಾಗಿ ರಚಿಸುವ ಮೂಲಕ ಮಾದಕ ವಸ್ತು...

ವೇದಾನದಿ ನೀರಿನ ಹಂಚಿಕೆಯಲ್ಲಿ ರೈತರು ಸಂಯಮ ಕಾಪಾಡಬೇಕು

ಚಿಕ್ಕಮಗಳೂರು: ವೇದಾ ನದಿ ನೀರಿನ ಹಂಚಿಕೆ ವಿಚಾರದಲ್ಲಿ ರೈತರು ಸಂಯಮ ಕಾಪಾಡಬೇಕು. ಜೊತೆಗೆ ಕೆರೆ ತುಂಬಿಸುವ...