Home namma chikmagalur chikamagalur ಚಿಕ್ಕಮಗಳೂರು ನಗರದಲ್ಲಿ ಆಟೋ ಎಲ್‌ಪಿಜಿ ಗ್ಯಾಸ್ ಹಾಹಾಕಾರ
chikamagalurHomeLatest Newsnamma chikmagalur

ಚಿಕ್ಕಮಗಳೂರು ನಗರದಲ್ಲಿ ಆಟೋ ಎಲ್‌ಪಿಜಿ ಗ್ಯಾಸ್ ಹಾಹಾಕಾರ

Share
Share

ಚಿಕ್ಕಮಗಳೂರು: ನಗರದಲ್ಲಿ ಕಳೆದ ಆರು ದಿನಗಳಿಂದ ಎಲ್‌ಪಿಜಿ ಗ್ಯಾಸ್ ಲಭ್ಯವಾಗದ ಕಾರಣ ಆಟೋ ಚಾಲಕರ ಜೀವನ ನಿರ್ವಹಣೆ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದ್ದು, ಆಟೋ ಚಾಲಕರು ಮತ್ತು ಮಾಲೀಕರ ಸಂಘವು ಈಗ ಅನಿರ್ದಿಷ್ಟಾವಧಿ ಮುಷ್ಕರದ ಹಾದಿ ಹಿಡಿಯಲು ನಿರ್ಧರಿಸಿದೆ.

ನಗರದ ಮೂರು ಗ್ಯಾಸ್ ಬಂಕ್‌ಗಳಲ್ಲಿ ಒಂದೇ ರೀತಿಯ ದರ ಇರದೇ ಬೇರೆ ಬೇರೆ ದರ ನಿಗದಿಪಡಿಸಿರುವುದು ಚಾಲಕರಲ್ಲಿ ತೀವ್ರ ಗೊಂದಲ ಮೂಡಿಸಿದೆ. ಈ ಕುರಿತು ಬಂಕ್ ಸಿಬ್ಬಂದಿಯನ್ನು ಪ್ರಶ್ನಿಸಿದರೆ ಅವರು ಸರಿಯಾದ ಮಾಹಿತಿ ನೀಡದೆ ಕಿರುಕುಳ ನೀಡುತ್ತಿದ್ದಾರೆ ಎನ್ನುವುದು ಆಟೋ ಚಾಲಕರ ಆರೋಪ,

ಈಗಾಗಲೇ ಜಿಲ್ಲಾಡಳಿತ ಮತ್ತು ಆಹಾರ ಇಲಾಖೆಗೆ ಈ ಸಂಬಂಧ ಹಲವು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂಬುದು ಚಾಲಕರ ಆಕ್ರೋಶಕ್ಕೆ ಕಾರಣವಾಗಿದೆ. ಗ್ಯಾಸ್ ಅಲಭ್ಯತೆಯಿಂದಾಗಿ ದಿನನಿತ್ಯದ ದುಡಿಮೆ ಇಲ್ಲದೆ ಚಾಲಕರು ಸಂಕಷ್ಟಕ್ಕೆ ಸಿಲುಕಿದ್ದರೂ ಅಧಿಕಾರಿಗಳು ಮಾತ್ರ ಜಾಣ ಕುರುಡು ಪ್ರದರ್ಶಿಸುತ್ತಿದ್ದಾರೆ ಎಂದು ದೂರಿದ್ದಾರೆ.

ಜಿಲ್ಲಾಡಳಿತದ ಈ ಮೌನಕ್ಕೆ ಆಟೋ ಚಾಲಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಸೋಮವಾರದ ಒಳಗೆ ಗ್ಯಾಸ್ ಪೂರೈಕೆಯಾಗದಿದ್ದರೆ ಮುಷ್ಕರ ನಡೆಸುತ್ತೇವೆ ಎಂದು ಆಟೋ ಚಾಲಕರು ಎಚ್ಚರಿಕೆ ನೀಡಿದ್ದಾರೆ ಈ ಬಗ್ಗೆ ನಮ್ಮ ಚಿಕ್ಕಮಗಳೂರು ಪ್ರತಿನಿಧಿ ಡ್ಯಾನಿ ನೀಡಿರುವ ಪ್ರತ್ಯಕ್ಷ ವರದಿ ಇಲ್ಲಿದೆ.

Auto LPG gas chaos in Chikmagalur city

Share

Leave a comment

Leave a Reply

Your email address will not be published. Required fields are marked *

Don't Miss

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ 3.30 ರ ಅವಧಿಯಲ್ಲಿ ಕೋರ್ಟ್ ಆವರಣವನ್ನು ಸ್ಫೋಟಿಸುವುದಾಗಿ ದುಷ್ಕರ್ಮಿಗಳು ಕಳುಹಿಸಿರುವ ಸಂದೇಶದಿಂದಾಗಿ ನ್ಯಾಯಾಲಯದ ಆವರಣದಲ್ಲಿ...

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರು ಪ್ರವೇಶ ಮಾಡಿ ಹೊಸ ಇತಿಹಾಸ ನಿರ್ಮಾಣಕ್ಕೆ ನಾಂದಿ ಹಾಡಿದ್ದಕ್ಕೆ ತಾಲೂಕು ಆಡಳಿತ ಸಾಕ್ಷಿಯಾಯಿತು....

Related Articles

ಶ್ರೀಈಶ್ವರ-ಚೌಡೇಶ್ವರಿ ದೇವಾಲಯಗಳಲ್ಲಿ ಆಭರಣ ಕಳವು

ಕಡೂರು: ತಾಲ್ಲೂಕಿನ ಸಿಂಗಟಗೆರೆ ಸಮೀಪದ ಎಸ್.ಡಿ. ಕೊಪ್ಪಲು ಗ್ರಾಮದ ಶ್ರೀಈಶ್ವರ ಹಾಗೂ ಚೌಡೇಶ್ವರಿ ದೇವಾಲಯಗಳಲ್ಲಿ ದೇವರ...

ತರೀಕೆರೆಯ ಗೋಪಿಕೃಷ್ಣಗೆ ಎಂಎಲ್ ಸಿ ಸ್ಥಾನ ನೀಡಬೇಕು

ಚಿಕ್ಕಮಗಳೂರು: ಅಹಿಂದ ಪರವಾಗಿ ಮಾತಾಡುವ ಕಾಂಗ್ರೆಸ್ ಪಕ್ಷ ಮಡಿವಾಳ ಸಮುದಾಯದ ಮುಖಂಡರಿಗೆ ರಾಜಕೀಯ ಪ್ರಾತಿನಿಧ್ಯ ನೀಡುತ್ತಿಲ್ಲ....

ಪೋಕ್ಸೋ ಪ್ರಕರಣ ಆರೋಪಿಗೆ 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆ

ಚಿಕ್ಕಮಗಳೂರು: ಬಣಕಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಆರೋಪಿ ತಪ್ಪಿತಸ್ಥನೆಂದು ಸಾಬೀತಾದ ಹಿನ್ನೆಲೆಯಲ್ಲಿ ಚಿಕ್ಕಮಗಳೂರಿನ...

ಶಾಸಕಿ ನಯನಾ ಮೋಟಮ್ಮ ವಿರುದ್ಧ ಬಿ.ಕೆ. ಹರಿಪ್ರಸಾದ್ ದೂರು

ಚಿಕ್ಕಮಗಳೂರು: ಮೂಡಿಗೆರೆ ವಿಧಾನಸಭಾ ಕ್ಷೇತ್ರದಲ್ಲಿ ರಾಜಕೀಯ ಸಂಚಲನ ಸೃಷ್ಟಿಯಾಗಿದ್ದು, ಹಿರಿಯ ನಾಯಕರು ಹಾಗೂ ಕಾರ್ಯಕರ್ತರು ಕಾಂಗ್ರೆಸ್...