ಚಿಕ್ಕಮಗಳೂರು: ಶ್ರೀರಾಮನ ಹೆಸರಲ್ಲಿ ಅಕಾರಕ್ಕೆ ಬಂದ ಬಿಜೆಪಿ ಶ್ರೀರಾಮನ ಟ್ರಸ್ಟ್ ಮೂಲಕ ಹಣಲೂಟಿ ಮಾಡಿದ್ದೇ ಸಾಧನೆಯಾಗಿದೆ. ಶ್ರೀ ರಾಮನ ಹೆಸರಲ್ಲಿ ಲೂಟಿ ಮಾಡಿರುವ ಟ್ರಸ್ಟ್ ಆಡಳಿತ ಮುಖ್ಯಸ್ಥನ ವಿರುದ್ಧ ತನಿಖೆ ನಡೆಸಿ ಕಾನೂನುಕ್ರಮ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಪ್ರಚಾರ ಸಮಿತಿ ವಕ್ತಾರ ಮಹೇಶ್ವರಪ್ಪ ಆಗ್ರಹಿಸಿದರು.
ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಅಯೋದ್ಯೆ ಶ್ರೀ ರಾಮಮಂದಿರ ಭೂಮಿ ಪೂಜೆಯಿಂದ ಹಿಡಿದು ಉದ್ಘಾಟನೆವರೆಗೂ ಪ್ರತಿಯೊಂದು ಧಾರ್ಮಿಕ ಕಾರ್ಯಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರು ಪ್ರಚಾರಕ್ಕಾಗಿ ಬಳಸಿಕೊಂಡರು. ಆದರೆ, ಈಗ ಕೋಟ್ಯಂರ ರೂ. ಲೂಟಿಯಾಗಿದ್ದರೂ ಇದುವರೆಗೆ ಪ್ರಧಾನಿ ಮೋದಿ ಅವರು ಮೌನವಹಿಸಿದ್ದಾರೆ ಎಂದು ದೂರಿದರು.
ಅಯೋದ್ಯೆ ಶ್ರೀರಾಮನ ಟ್ರಸ್ಟ್ನ ಪ್ರಮುಖರು ನೀಡಿದ ರಾಜೀನಾಮ ಇನ್ನೂ ಅಂಗೀಕಾರವಾಗಿಲ್ಲ. ಎಸ್ಐಟಿ ವರದಿಯಲ್ಲಿ ದೊಡ್ಡ ದೊಡ್ಡ ವ್ಯಕ್ತಿಗಳನ್ನು ಬಿಟ್ಟು ಕಾರು ಚಾಲಕ, ಸೆಕ್ಯೂರಿಟಿಗಾರ್ಡ್, ಹುಂಡಿ ಎಣಿಕೆ ಸಿಬ್ಬಂದಿ ಸೇರಿ ೬ ಜನರ ಹೆಸರನ್ನು ಮಾತ್ರ ಸೇರಿಸಲಾಗಿದೆ. ಈ ತನಿಖಾ ವರದಿಯೂ ಪಾರದರ್ಶಕವಾಗಿಲ್ಲ. ಹೀಗಾಗಿ ಈ ಪ್ರಕರಣದ ಬಗ್ಗೆ ಎಸ್ಐಟಿ ತನಿಖೆಯನ್ನು ಕೂಡಲೇ ಬಹಿರಂಗಪಡಿಸಬೇಕು. ಸುಪ್ರೀಂಕೋರ್ಟಿನ ನ್ಯಾಯಾಶರ ಮೇಲ್ವಿಚಾರಣೆಯಲ್ಲಿಪಾರದರ್ಶಕ ತನಿಖೆ ನಡೆಯಬೇಕು ಎಂದು ಒತ್ತಾಯಿಸುತ್ತೇವೆ ಎಂದರು.
ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಹನೀಫ್ ಮಾತನಾಡಿ, ಬಿಜೆಪಿ ಸರಕಾರ ಅಕಾರಕ್ಕೆ ಬಂದಾಗಿನಿಂದ ೧೫೨ ಬಾರಿ ವಿವಿಧ ಸ್ಪರ್ಧಾತ್ಮಕ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿವೆ. ಅದರ ಜವಾಬ್ದಾರಿ ಹೊತ್ತು ರಾಜೀನಾಮೆ ನೀಡಬೇಕಿದ್ದ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರಪ್ರಧಾನ್ ಅಕಾರಕ್ಕೆ ಅಂಟಿಕೂತಿದ್ದಾರೆ.
ವಿದ್ಯಾರ್ಥಿಗಳ ಭವಿಷ್ಯದ ಜತೆ ಚೆಲ್ಲಾಟ ಆಡುತ್ತಿರುವ ಕೇಂದ್ರ ಬಿಜೆಪಿ ಸರಕಾರ ಅನೇಕ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದಿದೆ. ಈ ಕೂಡಲೇ ಈ ಪ್ರಕರಣದ ನೈತಿಕ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು. ಇಲ್ಲದಿದ್ದರೆ ಕಾಂಗ್ರೆಸ್ ನಿಂದ ನಿರಂತರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು.
ಮುಖಂಡರಾದ ಚಂದ್ರು, ಗಂಗಾಧರ ಮತ್ತಿತರರಿದ್ದರು.
Ayodhya money theft should be investigated transparently by the Supreme Court
Leave a comment