Home namma chikmagalur chikamagalur ಬಡವರ ಹಕ್ಕುಗಳಿಗೆ ಹೋರಾಡಿದ ದಿಟ್ಟ ನಾಯಕ ಬಿ.ಕೆ.ಸುಂದರೇಶ್
chikamagalurHomeLatest Newsnamma chikmagalur

ಬಡವರ ಹಕ್ಕುಗಳಿಗೆ ಹೋರಾಡಿದ ದಿಟ್ಟ ನಾಯಕ ಬಿ.ಕೆ.ಸುಂದರೇಶ್

Share
Share

ಚಿಕ್ಕಮಗಳೂರು: – ಬಡವರು, ಕಾರ್ಮಿಕರು ಮತ್ತು ರೈತರ ಹಕ್ಕುಗಳಿಗಾಗಿ ಹೋರಾಡಿದ ದಿಟ್ಟ ನಾಯಕ ಬಿ.ಕೆ.ಸುಂದರೇಶ್. ಅವರ ಅನೇಕ ಹೋರಾಟಗಳು ಸಮಾಜದಲ್ಲಿ ನೊಂದವರಿಗೆ ನ್ಯಾಯ ಕೊಡಿಸುವಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದೆ ಎಂದು ಸಿಪಿಐ ಜಿಲ್ಲಾ ಕಾರ್ಯದರ್ಶಿ ಜಿ.ರಘು ಹೇಳಿದರು.

ನಗರದ ಜಿಲ್ಲಾ ಸಿಪಿಐ ಕಚೇರಿಯಲ್ಲಿ ಬುಧವಾರ ದಿಟ್ಟ ಹೋರಾಟ, ಜನಾನುರಾಗಿ ದಿ|| ಬಿ.ಕೆ.ಸುಂದರೇ ಶ್ ಅವರ ೩೧ನೇ ಸ್ಮರಣೆ ದಿನಾಚರಣೆ ಕಾರ್ಯಕ್ರಮದಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಅವರು ಮಾತ ನಾಡಿದರು.

ಜಿಲ್ಲೆಯ ಜನರ ಸಮಸ್ಯೆಗಳಿಗೆ ನಿರಂತರ ಹೋರಾಟ ನಡೆಸಿ ಹಲವರಿಗೆ ನ್ಯಾಯ ಕೊಡಿಸುವಲ್ಲಿ ಬಿ.ಕೆ. ಸುಂದರೇಶ್ ಮೊದಲಿಗರು. ರೈತರ, ಕೂಲಿ ಕಾರ್ಮಿಕರು, ಅಂಗನವಾಡಿ ಕಾರ್ಯರ್ತೆಯರ ದ್ವನಿಯಾಗಿ ಹೋರಾಟ ಮಾಡಿದ ಅವರು ಜನನುರಾಗಿಯಾಗಿದ್ದು ಇಂಥ ನಾಯಕನನ್ನು ಪಕ್ಷ ಮತ್ತು ಜಿಲ್ಲೆ ಕಳೆದುಕೊಂ ಡಿರುವುದು ದುದೈರ್ವ ಎಂದರು.

ಸುಂದರೇಶ್ ಅವರ ಆದರ್ಶ ಬದುಕು ಇಂದಿನ ಯುವಕರಿಗೆ ಪ್ರೇರಣದೀಪ. ಶೋಷಿತರು, ದಿನಗೂ ಲಿ ನೌಕರರ ಬಗ್ಗೆ ಅಪಾರ ಕಾಳಜಿ ಹೊಂದಿದ್ದ ಅವರು ಸ್ವಇಚ್ಚೆಗಾಗಿ ಬದುಕದೇ, ಸದಾಕಾಲ ಶೋಷಿತರಿಗೆ ನ್ಯಾಯ ದೊರಕಿಸಿಕೊಡಬೇಕೆಂಬ ಹೋರಾಟದ ಫಲವಾಗಿತ್ತು. ಇದಕ್ಕೆ ಜನಸಾಮಾನ್ಯರಿಗೆ ಅಭಿಮಾನದಿಂದ ಜಿಲ್ಲೆಯ ವಿವಿಧ ವೃತ್ತಗಳಲ್ಲಿ ಬಿ.ಕೆ.ಎಸ್. ಹೆಸರನ್ನು ನಾಮಕರಣಗೊಳಿಸಿದ್ದಾರೆ ಎಂದು ಹೇಳಿದರು.

ಸಿಪಿಐ ಜಿಲ್ಲಾ ಕಾರ್ಯಕಾರಿ ಸಮಿತಿ ಸದಸ್ಯ ವಿಜಯ್‌ಕುಮಾರ್ ಮಾತನಾಡಿ ಹೋರಾಟದ ಹಾದಿಯಲ್ಲಿ ಸಾಗುತ್ತಿರುವ ಮುಖಂಡರಿಗೆ ಸುಂದರೇಶ್ ಪ್ರೇರಣೆ. ಇಂಥ ವ್ಯಕ್ತಿಯ ಮಾರ್ಗದರ್ಶನದಲ್ಲಿ ನಾವೆಲ್ಲರೂ ಮುಂದುವರಿದರೆ ಮಾತ್ರ ನ್ಯಾಯ ಒದಗಿಸಲು ಸಾಧ್ಯ ಎಂದು ಹೇಳಿದರು.

ಸಿಪಿಐ ಜಿಲ್ಲಾ ಮಾಜಿ ಕಾರ್ಯದರ್ಶಿ ರಾಧಾ ಸುಂದರೇಶ್ ಮಾತನಾಡಿ ಇಂದಿನ ರಾಜಕಾರಣದಲ್ಲಿ ತಾಳಕ್ಕೆ ತಕ್ಕಂತೆ ಬದಲಾಗುವ ಸನ್ನಿವೇಶವಿದೆ. ಸುಂದರೇಶ್ ರಾಜಕೀಯ ಎನ್ನುವುದು ಜನರ ಸೇವೆಯೇ ಹೊರತು ವೈಯಕ್ತಿಕ ಆದಾಯ ಮಾಡುವುದಾಗಿರಲಿಲ್ಲ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಸಿಪಿಐ ತಾಲ್ಲೂಕು ಕಾರ್ಯದರ್ಶಿ ಕೆರೆಮಕ್ಕಿ ರಮೇಶ್ ಜಿಲ್ಲಾ ಸಹಕಾರ್ಯದರ್ಶಿ ಗಳಾದ ಸೋಮೇಗೌಡ, ಹೆಡದಳ್ ಕುಮಾರ್, ಮುಖಂಡರುಗಳಾದ ಹೆಚ್.ಎಂ.ರೇಣುಕಾರಾಧ್ಯ, ಮುಖ ಂಡರುಗಳಾದ ಉಮೇಶ್, ಜೇರ್ಮಿ ಲೋಬೋ ಮತ್ತಿತರರು ಉಪಸ್ಥಿತರಿದ್ದರು.

B.K. Sundaresh a brave leader who fought for the rights of the poor

Share

Leave a comment

Leave a Reply

Your email address will not be published. Required fields are marked *

Don't Miss

ಅಮಾನವೀಯ ಜಾನುವಾರು ಸಾಗಾಟ – ಮೂವರ ಬಂಧನ

ಎನ್.ಆರ್. ಪುರ: ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮ ಹಾಗೂ ಅಮಾನವೀಯ ಜಾನುವಾರು ಸಾಗಾಟ ಪ್ರಕರಣವನ್ನು ಪೊಲೀಸರು ಪತ್ತೆ ಹಚ್ಚಿದ್ದಾರೆ. ಈ ಸಂಬಂಧ ಮೂವರನ್ನು ಬಂಧಿಸಿ, ವಾಹನ ಮತ್ತು ಜಾನುವಾರುಗಳನ್ನು ವಶಪಡಿಸಿಕೊಳ್ಳಲಾಗಿದೆ. ಕಾರ್ಯಾಚರಣೆ...

ಸಮಸ್ಯೆಗಳನ್ನು ಸರ್ಕಾರದ ಗಮನಕ್ಕೆ ತರುವ ಕೆಲಸ ಮಾಧ್ಯಮಗಳು ಮಾಡಬೇಕು

ಚಿಕ್ಕಮಗಳೂರು: ಬಡವರ ಕಷ್ಟಗಳನ್ನು, ಸಮಸ್ಯೆಗಳನ್ನು ಸಮಾಜದ ಮತ್ತು ಸರ್ಕಾರದ ಗಮನಕ್ಕೆ ತರುವ ಕೆಲಸವನ್ನು ಮಾಧ್ಯಮಗಳು ಮಾಡಬೇಕು ಎಂದು ಶಾಸಕ ಎಚ್.ಡಿ.ತಮ್ಮಯ್ಯ ಸಲಹೆ ಮಾಡಿದರು. ಹೊನ್ನ ಬಿತ್ತೇವು ಹೊಲಕೆಲ್ಲ ಮತ್ತು ನ್ಯೂಸ್ ಕಿಂಗ್...

Related Articles

ನೀರುಗಂಟಿ ಆತ್ಮಹತ್ಯೆ ಪ್ರಕರಣದಲ್ಲಿ ಎಫ್‌ಐಆರ್ ದಾಖಲು

ಚಿಕ್ಕಮಗಳೂರು: ಅಣೂರು ಗ್ರಾಮ ಪಂಚಾಯಿತಿಯಲ್ಲಿ ನೀರುಗಂಟಿಯಾಗಿ ಕೆಲಸ ಮಾಡುತ್ತಿದ್ದ ರಮೇಶ್ ಅವರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ,...

ಹೇಮಾವತಿ ನದಿಯ ಅಕ್ರಮವಾಗಿ ಮರಳು ಸಾಗಣೆ ಪ್ರಕರಣ ಪತ್ತೆ

ಮೂಡಿಗೆರೆ: ಜೀವನದಿ ಹೇಮಾವತಿಯ ಒಡಲಿಗೆ ಕನ್ನ ಹಾಕಿ ಅಕ್ರಮವಾಗಿ ಮರಳು ಸಾಗಿಸುತ್ತಿದ್ದ ಜಾಲದ ಮೇಲೆ ಗೋಣಿಬೀಡು...

ಕಾಫಿನಾಡಿನಲ್ಲಿ ರಂಜಾನ್ ಅಂಗವಾಗಿ ಸಾಮೂಹಿಕ ಪ್ರಾರ್ಥನೆ

ಚಿಕ್ಕಮಗಳೂರು : ಕಾಫಿನಾಡಿನಲ್ಲಿ ಪವಿತ್ರ ರಂಜಾನ್ ಹಬ್ಬದ ಸಂಭ್ರಮವು ಸಡಗರ ಹಾಗೂ ಸೌಹಾರ್ದತೆಯಿಂದ ಕಳೆಗಟ್ಟಿತ್ತು. ಕೆಂಪನಹಳ್ಳಿಯ...

ಕಾಫಿ ತೋಟದಲ್ಲಿ ಮರಗಸಿ – ಕಾರ್ಮಿಕನ ಸಾವು

ಚಿಕ್ಕಮಗಳೂರು : ಕಾಫಿ ತೋಟದ ಮಾಲೀಕರು ಮತ್ತು ಮೇಸ್ತ್ರಿಗಳ ನಿರ್ಲಕ್ಷ್ಯಕ್ಕೆ ಅಮಾಯಕ ಕಾರ್ಮಿಕನೊಬ್ಬ ಬಲಿಯಾದ ದಾರುಣ...