Home ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?
Homechikamagalurnamma chikmagalurPolitical News

ಬಿ.ಎಲ್.ಶಂಕರ್ ಗೆ ಮತ್ತೆ ಮತ್ತೆ ಮಿಸ್…?

Share
Share

ಚಿಕ್ಕಮಗಳೂರು: ರಾಜ್ಯ ಸಭೆ ಅಥವಾ ವಿಧಾನ ಪರಿಷತ್ ಸ್ಥಾನಗಳಿಗೆ ಆಯ್ಕೆ ಮಾಡುವಾಗ ಬಿ.ಎಲ್.ಶಂಕರ್ ಹೆಸರು ಎವರೆಸ್ಟ್ ಶಿಖರದ ತುದಿ ಮುಟ್ಟಿರುತ್ತದೆ ಇನ್ನೂ ಖಚಿತ ಎನ್ನುವಾಗ ಶಂಕರ್ ಹೆಸರು ತೆರೆಮರೆಗೆ ಸರಿದು ಮಾಯಾವಾಗುತ್ತದೆ.

ಮುಖ್ಯ ಮಂತ್ರಿ ಸಿದ್ದರಾಮಯ್ಯ ಉಪ ಮುಖ್ಯ ಮಂತ್ರಿ ಡಿ.ಕೆ.ಶಿವಕುಮಾರ್ ಶಂಕರ್ ಪರ ಪ್ರಬಲವಾಗಿ ನಿಂತು ವಿಧಾನ ಪರಿಷತ್ ಗೆ ಕಳುಹಿಸಿ ಸಭಾಪತಿ ಮಾಡುವ ಲೆಕ್ಕಾಚಾರವನ್ನು ಹೈಕಮ್ಯಾಂಡ್ ಎಳ್ಳುನೀರು ಬಿಟ್ಟಿದೆ.ಇದರಿಂದಾಗಿ ಶಂಕರ್ ಗೆ ಮತ್ತೆ ಮತ್ತೆ ಮಿಸ್ ಹೊಡೆಯುತ್ತಿರುವುದು ಏಕೆ .

ಶಂಕರ್ ಸದಾಕಾಲವೂ ಚಟುವಟಿಕೆಯಲ್ಲಿ ಇರುತ್ತಾರೆ.ಕಾಲೇಜು ದಿನಗಳಿಂದ ಸಂಘಟನೆ,ಹೋರಾಟ ರಾಜಕೀಯ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಇಪ್ಪತ್ತೈದನೇ ವಯಸ್ಸಿನಲ್ಲಿ ವಿಧಾನ ಪರಿಷತ್ ಸದಸ್ಯರಾಗಿ ಯುವಜನ ಸೇವಾ ಮಂತ್ರಿಯಾಗಿ ದೇವೇಗೌಡರ ನೀಲಿ ಕಣ್ಣಿನ ಹುಡುಗನಾಗಿ ಸಕ್ರಿಯವಾಗಿದ್ದರು.ಬೆಳಗ್ಗೆ ವಿಧಾನ ಪರಿಷತ್ ಸದಸ್ಯರಾಗಿ ಸಂಜೆ ಮಂತ್ರಿಯಾದ ಶಂಕರ್ ಎಷ್ಟು ಗಟ್ಟಿಯಾಗಿದ್ದರು ಎಂಬುದಕ್ಕೆ ಸಾಕ್ಷಿ.

ದೇವೇಗೌಡರ ಜೊತೆಗೆ ಸಂಬಂಧ ಹಳಸಿದ ಮೇಲೆ ರಾಜಕೀಯವಾಗಿ ಮೂಲೆ ಗುಂಪಾಗಿ ಚಿತ್ರಕಲಾ ಪರಿಷತ್ ಅಧ್ಯಕ್ಷರಾಗಿ ಚಿಕ್ಕಮಗಳೂರು ರಾಜಕಾರಣದ ಸೂತ್ರಧಾರರಾಗಿದ್ದಾರೆ.

ಸ್ಪರ್ಧೆ ಮಾಡಿದ ಚುನಾವಣೆಯಲ್ಲಿ ಸೋಲು ಖಚಿತ ಎನ್ನುವ ಪರಿಸ್ಥಿತಿ ಕಳೆದ ಇಪ್ಪತ್ತೈದು ವರ್ಷಗಳಿಂದ ದೇವೇಗೌಡರ ಶಾಪದಿಂದ ಮುಕ್ತರಾಗಿಲ್ಲ.ಇನ್ನೂ ಕಾಂಗ್ರೆಸ್ ನ ಹಲವರು ಒಳಗೆ ಬತ್ತಿ ಇಡುತ್ತಿದ್ದಾರೆ ಎನ್ನುವವರು ಇದ್ದಾರೆ ಜಿಲ್ಲೆಯ ಶಾಸಕರುಗಳು ಶಂಕರ್ ಬರದಂತೆ ತಡೆದಿದ್ದಾರೆ ಎನ್ನುವವರು ಇದ್ದಾರೆ.ಶಂಕರ್ ಪವರ್‌ ಸೆಂಟರ್ ನಲ್ಲಿ ಇದ್ದರೆ ಜನರಿಂದ ಚುನಾಯಿತರಾದ ನಾವು ಇವರ ಬಳಿ ಹೋಗಬೇಕು ಎಂಬ ಲೆಕ್ಕಾಚಾರದಲ್ಲಿ ಮುಖ್ಯ ಮಂತ್ರಿ ಬಳಿ ಅಲವತ್ತು ಕೊಂಡು ಕಾಲು ಎಳೆದಿದ್ದಾರೆ ಎನ್ನುತ್ತಾರೆ.

ಕಳೆದ ಎರಡು ತಿಂಗಳಿಂದ ಶಂಕರ್ ಗೆ ಶುಭಾಶಯ ಕೇಳಿ,ಕೇಳಿ ಸಾಕಾಗಿದೆ ಅಂತೂ ಇಂತೂ ಶಂಕರ್ ಗೆ ವಿಧಾನ ಪರಿಷತ್ ಗೆ ಹೋಗುವ ಭಾಗ್ಯ ಬರಲಿಲ್ಲ. ಜಿಲ್ಲೆಯ ಮಾಜಿ ಮಂತ್ರಿ ಬೇಗಾನೆ ರಾಮಯ್ಯನವರ ಮಗಳು ಅನಿವಾಸಿ ಭಾರತೀಯ ಉಪಾಧ್ಯಕ್ಷೆ ಆರತಿಕೃಷ್ಣರನ್ನು ವಿಧಾನ ಪರಿಷತ್ ಗೆ ಕಳುಹಿಸಲು ಹೈಕಮ್ಯಾಂಡ್ ತೀರ್ಮಾನ ಮಾಡಿರುವುದರಿಂದ ಶಂಕರ್ ಗೆ ಮತ್ತೆ,ಮತ್ತೆ ಪ್ರಯತ್ನ ಮಾಡುವುದು ಬಿಟ್ಟು ಬೇರೆ ಯಾವ ಗ್ಯಾರಂಟಿ ಇಲ್ಲ.

B.L. Shankar misses again and again…?

Share

Leave a comment

Leave a Reply

Your email address will not be published. Required fields are marked *

Don't Miss

ಮತದಾರ ಪಟ್ಟಿಗೆ ಮತದಾರರನ್ನು ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಲು

ಚಿಕ್ಕಮಗಳೂರು: ಕಾಂಗ್ರೆಸ್ ಸಾಂಪ್ರದಾಯಿಕ ಮತದಾರರನ್ನು ಮತದಾರ ಪಟ್ಟಿಗೆ ಸೇರಿಸುವಲ್ಲಿ ಬಿಎಲ್‌ಒ-೨ ಗಳು ಕಾಳಜಿ ವಹಿಸಿದಲ್ಲಿಮಾತ್ರ ಮುಂಬರುವ ಸ್ಥಳೀಯ ಸಂಸ್ಥೆ ಚುನಾವಣೆಯನ್ನು ಗಟ್ಟಿಯಾಗಿ ಎದುರಿಸಲು ಸಾಧ್ಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು. ನಗರದ...

ನೂತನ ತಂತ್ರಜ್ಞಾನವನ್ನು ಯುವಜನತೆ ಮಿತಿಯಲ್ಲಿ ಬಳಸಬೇಕು

ಚಿಕ್ಕಮಗಳೂರು: ಎ ಐ ಕೃತಕ ಬುದ್ಧಿಮತ್ತೆ ಸೇರಿದಂತೆ ನೂತನ ತಂತ್ರಜ್ಞಾನಗಳನ್ನು ಯುವಜನತೆ ಇತಿ ಮಿತಿಯಲ್ಲಿ ಬಳಸಬೇಕು ಎಂದು ಎ ಐ ಟಿ ಯು ಸಿ ರಾಜ್ಯ ಉಪಾಧ್ಯಕ್ಷ ಬಿ.ಅಮ್ಜದ್ ಸಲಹೆ ಮಾಡಿದರು....

Related Articles

ವಿದ್ಯಾರ್ಥಿ ಸಂಘಟನೆ ನೇತೃತ್ವದಲ್ಲಿ ಜೋಳದಾಳು ಗ್ರಾಮದಲ್ಲಿ ಪ್ರತಿಭಟನೆ

ಚಿಕ್ಕಮಗಳೂರು: ತಾಲೂಕಿನ ಜೋಳದಾಳು ಹಿರಿಯ ಪ್ರಾಥಮಿಕ ಶಾಲೆಯನ್ನು ಕೆಪಿಎಸ್ ಮ್ಯಾಗ್ನೆಟ್ ಯೋಜನೆ ಹೆಸರಲ್ಲಿ ಮೈಲಿಮನೆ ಗ್ರಾಮ...

ರಕ್ತದಾನದಿಂದ ಜೀವ ಉಳಿಸುವವರು ಜೀವಸಂರಕ್ಷಕರೇ

ಚಿಕ್ಕಮಗಳೂರು: – ರಕ್ತದಾನಕ್ಕೆ ಜಾತಿ ತಾರತಮ್ಯವಿಲ್ಲ. ಜೀವ ಉಳಿಸುವ ಪ್ರತಿಯೊಬ್ಬ ವ್ಯಕ್ತಿಯು ಜೀವಸಂರಕ್ಷಕರೇ. ಶ್ರೀಮಂತಿಕೆ ಎಷ್ಟೇ...

ಯುದ್ಧ ನಿಲ್ಲಿಸಬೇಕಾದವರು ಮೌನವಾಗಿರುವುದು ಮಾನವತೆಯ ಸೋಲು

ಚಿಕ್ಕಮಗಳೂರು: ಯುದ್ಧದ ಬೆಂಕಿ ವಿಶ್ವವನ್ನು ಸುಡುತ್ತಿರುವಾಗ, ಶಾಂತಿಯ ಮಾತುಗಳನ್ನು ಹೇಳಬೇಕಾದ ಸಂಘಟನೆಗಳು ರಾಜಕೀಯ ಲಾಭ-ನ?ದ ಲೆಕ್ಕಾಚಾರದಲ್ಲಿ...

ಸರ್ಕಾರ ಜ್ಯುವೆಲ್ಲರಿ ಪಾರ್ಕ್ ಸ್ಥಾಪಿಸಿ ಉದ್ಯೋಗಾವಕಾಶ ಕಲ್ಪಿಸಿಕೊಡಬೇಕು

ಚಿಕ್ಕಮಗಳೂರು: ಚಿನ್ನದ ಬೆಲೆ ಹೆಚ್ಚಳದಿಂದಾಗಿ ಶೇ.೮೦ ರಷ್ಟು ಗೋಲ್ಡ್‌ಸ್ಮಿತ್ ಕೆಲಸಗಾರರು ಕೆಲಸವಿಲ್ಲದೆ ಪೇಚಾಡುವಂತಾಗಿರುವ ಹಿನ್ನೆಲೆಯಲ್ಲಿ ಸರ್ಕಾರ...