Home namma chikmagalur chikamagalur ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು
chikamagalurCrime NewsHomeLatest Newsnamma chikmagalur

ವಿಳಾಸ ಕೇಳುವ ನೆಪದಲ್ಲಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ ಕಳವು

Share
Share

ಚಿಕ್ಕಮಗಳೂರು: ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆಗೆ ಸೆಳೆದು ಬರೋಬ್ಬರಿ ಎಂಟು ಲಕ್ಷ ರೂಪಾಯಿ ಹಣವಿದ್ದ ಬ್ಯಾಗ್‌ನ್ನು ಕಿತ್ತುಕೊಂಡು ಇನ್ನೋವಾ ಕಾರಿನಲ್ಲಿ ಪರಾರಿಯಾಗಿರುವ ಆಘಾತಕಾರಿ ಘಟನೆ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬ್ರಹ್ಮಾವರ ತಾಲೂಕಿನ ನಡೂರು ಗ್ರಾಮದ ನಿವಾಸಿ ರವಿಕುಮಾರ್ ಶೆಟ್ಟಿ ಹಾಗೂ ಅವರ ಸ್ನೇಹಿತರಾದ ನಾಗೇಶ್, ಹರ್ಷ ಶೆಟ್ಟಿ ಮತ್ತು ಸುಧಾಕರ್ ಚಾರ್ಯ ಅವರು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು. ಚಿಕ್ಕಮಗಳೂರು ತಾಲೂಕಿನ ಕೈಮರ ಸರ್ಕಲ್ ಸಮೀಪ ಮೂತ್ರ ವಿಸರ್ಜನೆಗಾಗಿ ಗಾಡಿ ನಿಲ್ಲಿಸಿದಾಗ ಈ ಘಟನೆ ಸಂಭವಿಸಿದೆ.

ಈ ವೇಳೆ ಬಿಳಿ ಬಣ್ಣದ ಇನ್ನೋವಾ ಕ್ರಿಸ್ಟಾ ಕಾರಿನಲ್ಲಿ (ನಂಬರ್ KA56M7886) ಬಂದ ಅಪರಿಚಿತ ಚಾಲಕನು ವಿಳಾಸ ಕೇಳಿದ್ದಾನೆ. ಸುಧಾಕರ್ ಅವರು ವಿಳಾಸ ಹೇಳುತ್ತಿದ್ದಾಗ, ಚಾಲಕನು ತಕ್ಷಣವೇ ಅವರ ಬಳಿ ಇದ್ದ ಎಂಟು ಲಕ್ಷ ರೂಪಾಯಿ ನಗದನ್ನು ಒಳಗೊಂಡಿದ್ದ ಬ್ಯಾಗ್‌ನ್ನು ಬಲವಂತವಾಗಿ ಕಿತ್ತುಕೊಂಡು ಕಾರಿನೊಂದಿಗೆ ಸ್ಥಳದಿಂದ ವೇಗವಾಗಿ ಪರಾರಿಯಾಗಿದ್ದಾನೆ.

ಸಂತ್ರಸ್ತ ರವಿಕುಮಾರ್ ಶೆಟ್ಟಿ ಅವರು ನೀಡಿದ ದೂರಿನನ್ವಯ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

Bag containing Rs 8 lakh stolen on pretext of asking for address

Share

Leave a comment

Leave a Reply

Your email address will not be published. Required fields are marked *

Don't Miss

ಅಪಘಾತದಲ್ಲಿ ಸಾವು: ಚಾಲಕನಿಗೆ 9 ತಿಂಗಳು ಸಜೆ

ಚಿಕ್ಕಮಗಳೂರು: ಅತೀ ವೇಗ ಮತ್ತು ಅಜಾಗರೂಕತೆಯಿಂದ ಕಾರು ಚಾಲನೆ ಮಾಡಿ ಸಂಭವಿಸಿದ ಭೀಕರ ಅಪಘಾತದಲ್ಲಿ ಓರ್ವ ಮೃತಪಟ್ಟು ಇನ್ನಿಬ್ಬರು ಗಾಯಗೊಂಡ ಘಟನೆಗೆ ಸಂಬಂಧಿಸಿದಂತೆ ಚಾಲಕನಿಗೆ ನಗರದ ಒಂದನೇ ಅಧಿಕ ಹಿರಿಯ ಸಿ.ಜೆ....

ದ್ವಿಚಕ್ರ ವಾಹನ ಡಿಕ್ಕಿ-ಪಾದಚಾರಿ ಯುವಕ ಸಾವು

ಚಿಕ್ಕಮಗಳೂರು: ತಾಲೂಕಿನ ಕುರುಬರಹಳ್ಳಿ ಗ್ರಾಮದ ಸಮೀಪ ದ್ವಿಚಕ್ರ ವಾಹನ ಡಿಕ್ಕಿ ಹೊಡೆದ ಪರಿಣಾಮ ಪಾದಚಾರಿ ಯುವಕ ಮೃತಪಟ್ಟಿದ್ದು, ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಮಾಚೇನಹಳ್ಳಿ ಗ್ರಾಮದ...

Related Articles

100 ಅಡಿ ಪ್ರಪಾತಕ್ಕೆ ಉರುಳಿದ 10 ಚಕ್ರದ ಲಾರಿ

ಚಿಕ್ಕಮಗಳೂರು: ಬ್ರೇಕ್ ಫೇಲ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ೧೦ ಚಕ್ರದ ಲಾರಿಯೊಂದು ರಸ್ತೆ ಪಕ್ಕದ...

ದಾಸರಹಳ್ಳಿ ಕೆರೆ ಸೆ.೧೦ ರಂದು ಲೋಕಾರ್ಪಣೆ

ಚಿಕ್ಕಮಗಳೂರು: ಸುಮಾರು ೨ ಕೋಟಿ ರುಪಾಯಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಾಗುತ್ತಿರುವ ದಾಸರಹಳ್ಳಿ ಕೆರೆಯನ್ನು ಸೆಪ್ಟಂಬರ್ ೧೦...

ಸಾಮಾಜಿಕ ಹೋರಾಟಗಾರನ ಹತ್ಯೆಯ ಆರೋಪಿಗಳ ಕಠಿಣ ಶಿಕ್ಷೆಗೆ ಮನವಿ

ಚಿಕ್ಕಮಗಳೂರು:  ಸಾಮಾಜಿಕ ಹೋರಾಟಗಾರ ಹಾಗೂ ದಲಿತ ಮುಖಂಡ ಭೂಮಾನ ಂದ ಹತ್ಯೆಗೈದ ಆರೋಪಿಗಳಿಗೆ ಕಠಿಣ ಶಿಕ್ಷೆ...

ಕನಿಷ್ಟ ವೇತನ ಜಾರಿಗೆ ಆಗ್ರಹಿಸಿ ಹೊರಗುತ್ತಿಗೆ ನೌಕರರಿಂದ ಪ್ರತಿಭಟನೆ

ಚಿಕ್ಕಮಗಳೂರು:  ಸರ್ಕಾರಿ ಕಚೇರಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಹೊರಗುತ್ತಿಗೆ ನೌ ಕರರಿಗೆ ಕಾರ್ಮಿಕ ಆಯುಕ್ತರ ಆದೇಶದಂತೆ ಕನಿಷ್ಟ ವೇತನ...