Home namma chikmagalur chikamagalur ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ
chikamagalurHomeLatest Newsnamma chikmagalur

ಜಯಪುರ ಠಾಣೆಯ ಮಹಿಳಾ ಸಿಬ್ಬಂದಿಗೆ ಬಾಗಿನ

Share
Share

ಕೊಪ್ಪ : ಹಬ್ಬ-ಹರಿದಿನಗಳಲ್ಲೂ ಕರ್ತವ್ಯದಲ್ಲೇ ನಿರತರಾಗಿರುವ ಪೊಲೀಸ್ ಸಿಬ್ಬಂದಿಯ ಮೊಗದಲ್ಲಿ ಹಬ್ಬದ ಸಂಭ್ರಮ ಮೂಡಿಸುವ ಅರ್ಥಪೂರ್ಣ ಕಾರ್ಯಕ್ರಮವೊಂದು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಜಯಪುರ ಪೊಲೀಸ್ ಠಾಣೆಯಲ್ಲಿ ನಡೆದಿದೆ.

ಗೌರಿ ಹಬ್ಬದ ಹಿನ್ನೆಲೆಯಲ್ಲಿ ಠಾಣಾಧಿಕಾರಿ ಪಿಎಸ್‌ಐ ರವೀಶ್ ಅವರು ಠಾಣೆಯ ಮಹಿಳಾ ಸಿಬ್ಬಂದಿಗೆ ಸಾಂಪ್ರದಾಯಿಕವಾಗಿ ಬಾಗಿಣ ನೀಡಿ ಗೌರವಿಸಿ, ಹಬ್ಬದ ಶುಭಾಶಯ ಕೋರಿದರು.

ಕುಟುಂಬದಿಂದ ದೂರವಿದ್ದು ಕರ್ತವ್ಯ ನಿರ್ವಹಿಸುವ ಮಹಿಳಾ ಸಿಬ್ಬಂದಿಗೂ ಹಬ್ಬದ ಸಂಭ್ರಮ ಸಿಗಬೇಕು ಎಂಬ ಉದ್ದೇಶದಿಂದ ಪಿಎಸ್‌ಐ ರವೀಶ್ ಅವರು ಪ್ರತಿ ವರ್ಷ ಈ ರೀತಿಯ ಕಾರ್ಯಕ್ರಮ ನಡೆಸಿಕೊಂಡು ಬರುತ್ತಿದ್ದಾರೆ.

ಸಹೋದ್ಯೋಗಿಗಳೊಂದಿಗೆ ಕುಟುಂಬದ ರೀತಿಯ ಆತ್ಮೀಯತೆ ಬೆಳೆಸುವ ಜೊತೆಗೆ, ಕರ್ತವ್ಯದ ಒತ್ತಡದ ನಡುವೆಯೂ ಸಿಬ್ಬಂದಿಯಲ್ಲಿ ಸಂತಸ ಮೂಡಿಸುವ ಪ್ರಯತ್ನ ಇದಾಗಿದೆ.
ಪಿಎಸ್‌ಐ ಅವರ ಈ ಕಾಳಜಿ ಹಾಗೂ ಮಾನವೀಯ ನಡೆಗೆ ಪೊಲೀಸ್ ಸಿಬ್ಬಂದಿ ಸೇರಿದಂತೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಖಾಕಿ ಸಮವಸ್ತ್ರದ ಕರ್ತವ್ಯದ ನಡುವೆಯೂ ಸಹೋದ್ಯೋಗಿಗಳ ಭಾವನೆಗಳಿಗೆ ಸ್ಪಂದಿಸಿದ ಈ ನಡೆ ಪೊಲೀಸ್ ಇಲಾಖೆಯಲ್ಲಿನ ಮಾನವೀಯ ಮುಖವನ್ನು ಎತ್ತಿ ತೋರಿಸಿದೆ.

‘Bagina’ presented to the female staff of Jayapura police station.

Share

Leave a comment

Leave a Reply

Your email address will not be published. Required fields are marked *

Don't Miss

ಪ್ರವಾಸೋದ್ಯಮ ತಾಣಗಳಿಗೆ ಮೂಲಸೌಕರ್ಯಕ್ಕೆ ಆಗ್ರಹಿಸಿ ಕರವೇ ಧರಣಿ

ಚಿಕ್ಕಮಗಳೂರು:  ಮಲೆನಾಡಿನ ಪಶ್ಚಿಮ ಘಟ್ಟ ಪ್ರವಾಸೋದ್ಯಮದ ಹಲವಾರು ಸಮಸ್ಯೆಗಳ ನ್ನು ಪರಿಹರಿಸುವಲ್ಲಿ ವಿಫಲವಾಗಿರುವ ಜಿಲ್ಲಾಡಳಿತ ವಿರುದ್ಧ ಸೋಮವಾರ ಜಿಲ್ಲಾ ಕರವೇ (ಶಿವರಾಮೇ ಗೌಡ ಬಣ) ಮುಖಂಡರುಗಳು ಅರೆಬೆತ್ತಲಾಗಿ, ಬಾಯಿಗೆ ಕಪ್ಪುಪಟ್ಟಿ ಕಟ್ಟಿಕೊಂಡು,...

ಮಲ್ಲೇಗೌಡ ಆಸ್ಪತ್ರೆ ಆರೋಗ್ಯ ಸೇವೆ ಬಲಪಡಿಸಲು ಜಿಲ್ಲಾಧಿಕಾರಿ ಸೂಚನೆ

ಚಿಕ್ಕಮಗಳೂರು: ನಗರದ ಮಲ್ಲೇಗೌಡ ಸರ್ಕಾರಿ ಜಿಲ್ಲಾ ಆಸ್ಪತ್ರೆಗೆ ಜಿಲ್ಲಾಧಿಕಾರಿ ಭಂವರ್ ಸಿಂಗ್ ಮೀನಾ ಅವರು ಸೋಮವಾರ ಭೇಟಿ ನೀಡಿ ಆಸ್ಪತ್ರೆಯ ವಿವಿಧ ವಿಭಾಗಗಳ ಕಾರ್ಯವೈಖರಿ ಹಾಗೂ ಸಾರ್ವಜನಿಕರಿಗೆ ಸಿಗುತ್ತಿರುವ ಆರೋಗ್ಯ ಸೇವೆಗಳನ್ನು...

Related Articles

ಟ್ರಾಕ್ಟರ್ ಹರಿಸಿ ₹1.15 ಲಕ್ಷ ಮೌಲ್ಯದ ರಾಗಿ ಬೆಳೆ ನಾಶ

ತರೀಕೆರೆ : ನ್ಯಾಯಾಲಯದ ಸ್ಪಷ್ಟ ತಡೆಯಾಜ್ಞೆ ಇದ್ದರೂ ಅದ್ಯಾವುದನ್ನೂ ಲೆಕ್ಕಿಸದೆ, ಜಮೀನಿಗೆ ಅಕ್ರಮವಾಗಿ ನುಗ್ಗಿ ಕಟಾವಿಗೆ...

ಸಚಿವ ಕೃಷ್ಣಬೈರೇಗೌಡ ಹೇಳಿಕೆ ಖಂಡನೀಯ

ಚಿಕ್ಕಮಗಳೂರು- ಬೆಂಗಳೂರು ನಗರ ಪರಿಶೀಲನೆ ಮಾಡುವ ಸಂದರ್ಭದಲ್ಲಿ ಸಚಿವ ಕೃ?ಬೈರೇಗೌಡರು ಪೌರಕಾರ್ಮಿಕರ ಬಗ್ಗೆ ತುಚ್ಚವಾಗಿ ಮಾತನಾಡಿರುವುದನ್ನು...

ಮುಂದಿನ ದಿನಗಳಲ್ಲಿ ದೇವಾಲಯದ ಜಿರ್ಣೋದ್ದಾರಕ್ಕೆ ಅನುದಾನ

ಬೀರೂರು:ಕಾಂಗ್ರೆಸ್ ಸರಕಾರದಲ್ಲಿ ನನ್ನಂತ ಹಿಂದುಳಿದ ವರ್ಗದ ಶಾಸಕನಿಗೆ ಸಚಿವ ಸಂಪುಟದಲ್ಲಿ ಸ್ಥಾನ ನೀಡಿದ ಮಾಜಿ ಮುಖ್ಯಮಂತ್ರಿ...

ಗಂಗೆ ಪೂಜೆ ನೆರವೇರಿಸಿ ಸ್ವರ್ಣಗೌರಿ ಮನೆ ತುಂಬಿಸಿಕೊಂಡ ಮಹಿಳೆಯರು

ಕೊಟ್ಟಿಗೆಹಾರ: ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಸಮೀಪದ ದೇವನಗುಲ್ ಗ್ರಾಮದ ದೊಡ್ಡಬಾವಿ ಹಳ್ಳದಲ್ಲಿ ಸೋಮವಾರ ಮಹಿಳೆಯರು ಸಂಪ್ರದಾಯಬದ್ಧವಾಗಿ...