ಚಿಕ್ಕಮಗಳೂರು: ಜಿಲ್ಲಾ ಕೇಂದ್ರ ಸೇರಿದಂತೆ ಕಾಫಿ ನಾಡಿನಾದ್ಯಂತ ಶನಿವಾರ ಬಕ್ರೀದ್ ಆಚರಣೆ ನಡೆಯಿತು.
ಮುಸ್ಲಿಂ ಸಮುದಾಯದವರು, ಮಸೀದಿ, ಈದ್ಗಾ ಮೈದಾನಗಳಲ್ಲಿ ಸಾಮೂಹಿಕವಾಗಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಪರಸ್ಪರ ಶುಭಾಶಯವನ್ನು ವಿನಿಯಮ ಮಾಡಿಕೊಂಡರು.
ನಗರದ ಎಂ.ಜಿ. ರಸ್ತೆಯಲ್ಲಿರುವ ತಾಜಾರಿನ್, ಸಂಗೀನಾ, ನೆಹರು ನಗರದ ಬದ್ರಿಯಾ, ಉಪ್ಪಳ್ಳಿಯ ಶಾದ್ರುಲಿ, ಕಲ್ಲುದೊಡ್ಡಿಯ ಅಮ್ಜದ್ ಖಾರಾರ್ ಹಾಗೂ ಆದಿಶಕ್ತಿ ನಗರದ ಮಸೀದಿಗಳಲ್ಲಿ ಬ್ಯಾರಿ ಸಮುದಾಯದವರು ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.
ಮುಸ್ಲಿಂ ಸಮುದಾಯದವರು ನಗರದ ವಿಜಯಪುರ ಹಾಗೂ ಕೆಂಪನಹಳ್ಳಿಯ ಈದ್ಗಾ ಮೈದಾನಗಳಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು. ಕೆಂಪನಹಳ್ಳಿಯ ಈದ್ಗಾ ಮೈದಾನಕ್ಕೆ ಸಾಮೂಹಿಕ ಪ್ರಾರ್ಥನೆ ಬಕ್ರೀದ್ ಹಬ್ಬದ ಶುಭಾಶಯ ಸಲ್ಲಿಸಿದರು.
ಎಲ್ಲರೂ ಕೂಡ ಜಾತಿ, ಧರ್ಮವನ್ನು ಬದಿಗಿಟ್ಟಿ ಸೌಹಾರ್ದತೆಯಿಂದ ಬಾಳಬೇಕು. ಇದು, ಸಂವಿಧಾನದ ಆಶಯವಾಗಿದೆ. ಅದರಂತೆ ಎಲ್ಲರೂ ನಡೆದುಕೊಳ್ಳಬೇಕೆಂದು ಕರೆ ನೀಡಿದರು. ಈ ಸಂದರ್ಭದಲ್ಲಿ ಧರ್ಮಗುರುಗಳು ಹಾಜರಿದ್ದರು.
Bakrid celebration across coffee country
Leave a comment