ಚಿಕ್ಕಮಗಳೂರು : ಬಿಜೆಪಿಯನ್ನು ಮುಗಿಸಲು ಬಸವನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಜೊತೆ ಒಳ ಒಪ್ಪಂದ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಎಚ್.ಸಿ ಕಲ್ಮರಡಪ್ಪ ಆರೋಪಿಸಿದ್ದಾರೆ.
ನಗರದ ಪ್ರೆಸ್ ಕ್ಲಬ್ ನಲ್ಲಿ ಪತ್ರಕಾಗೋಷ್ಟಿ ನಡೆಸಿ ಮಾತನಾಡಿದ ಅವರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ವಿರುದ್ಧ ಬಸವನಗೌಡ ಪಾಟೀಲ್ ಯತ್ನಾಳ್ ಬಾಯಿಗೆ ಬಂದಂತೆ ಮಾತನಾಡುತ್ತಿದ್ದು, ಇದು ಪಕ್ಷದ ಮುಖಂಡರು ಕಾರ್ಯಕರ್ತರಲ್ಲಿ ಗೊಂದಲ ಮೂಡಿಸುತ್ತದೆ. ಅಲ್ಲದೇ ಆತ್ಮ ಸ್ಥೈರ್ಯ ಕುಗ್ಗಿಸುವಂತದ್ದು, ಇಂತಹ ಬಹಿರಂಗ ಹೇಳಿಕೆ ಕೊಡುವುದನ್ನು ಕೂಡಲೇ ನಿಲ್ಲಿಸಿ ಎಂದು ಒತ್ತಾಯಿಸಿದ್ದಾರೆ.
ಇದೇ ರೀತಿ ವರ್ತನೆ ಮುಂದುವರೆಸಿದಲ್ಲಿ ಮುಂದಿನ ದಿನಗಳಲ್ಲಿ ಪ್ರತಿ ಜಿಲ್ಲೆಗಳಲ್ಲೂ ಯತ್ನಾಳ್ ವಿರುದ್ಧ ಪೊರಕೆ ಚಳುವಳಿ ಮಾಡಬೇಕಾಗುತ್ತದೆ ಎಂದು ಕಲ್ಮರಡಪ್ಪ ಎಚ್ಚರಿಕೆ ಕೊಟ್ಟಿದ್ದಾರೆ. ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೀವು ಬಿಜಾಪುರ ಜಿಲ್ಲೆಯಲ್ಲಿ 14 % ಹಣವನ್ನು ಯಾರಿಂದ ಪಡೆದಿದ್ದೀರಿ ಎಂದು ಪ್ರಶ್ನಿಸಿರುವ ಅವರು ಬಬಲೇಶ್ವರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ವಿಜುಗೌಡ ಸೋಲಿಗೆ ಕಾರಣ ಯಾರೆಂಬುದನ್ನು ನೀವೆ ಬಹಿರಂಗ ಪಡಿಸಿ ಎಂದು ಸವಾಲು ಹಾಕಿದರು.
Leave a comment