Home namma chikmagalur chikamagalur ಮುತ್ತೋಡಿ ಅಭಯಾರಣ್ಯದ ಮುಖ್ಯ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷ
chikamagalurHomeLatest Newsnamma chikmagalur

ಮುತ್ತೋಡಿ ಅಭಯಾರಣ್ಯದ ಮುಖ್ಯ ರಸ್ತೆಯಲ್ಲಿ ಕರಡಿ ಪ್ರತ್ಯಕ್ಷ

Share
Share

ಚಿಕ್ಕಮಗಳೂರು: ಕಾಫಿನಾಡಿನಲ್ಲಿ ಕಳೆದೊಂದು ತಿಂಗಳಿನಿಂದ ಅಬ್ಬರಿಸುತ್ತಿರುವ ಮುಂಗಾರು ಪೂರ್ವ ಮಳೆಗೆ ಪ್ರಕೃತಿ ಸೌಂದರ್ಯದ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದು ಇದರ ನಡುವೆ ವನ್ಯಜೀವಿಗಳ ಲೋಕ ಅನಾವರಣಗೊಂಡಂತಿದೆ. ಮುತ್ತೋಡಿ ಅಭಯಾರಣ್ಯದ ಮುಖ್ಯ ರಸ್ತೆಯಲ್ಲಿ ಇಂದು ಮುಂಜಾನೆ ಅಪರೂಪದ ಅತಿಥಿಯೊಂದು ಪ್ರತ್ಯಕ್ಷವಾಗಿ ವಾಹನ ಸವಾರರನ್ನು ಕೆಲಕಾಲ ಮಂತ್ರಮುಗ್ಧರನ್ನಾಗಿಸಿದೆ.

ಅಭಯಾರಣ್ಯದ ದಟ್ಟ ಅರಣ್ಯದ ರಸ್ತೆಯಲ್ಲಿ ವಾಹನವೊಂದು ಸಾಗುತ್ತಿದ್ದಾಗ, ಹಠಾತ್ತನೆ ಕರಡಿಯೊಂದು ರಸ್ತೆಯ ಮಧ್ಯದಲ್ಲೇ ಪ್ರತ್ಯಕ್ಷವಾಗಿದೆ. ವಾಹನದ ಹೆಡ್‌ಲೈಟ್‌ನ ಬೆಳಕಿನ ನಡುವೆಯೂ ಯಾವುದೇ ಆತಂಕವಿಲ್ಲದೆ, ಅತ್ಯಂತ ಗಂಭೀರವಾಗಿ ರಸ್ತೆಯುದ್ದಕ್ಕೂ ಹೆಜ್ಜೆ ಹಾಕುತ್ತಾ ಸಾಗಿದೆ. ವಾಹನವು ತನ್ನನ್ನು ಹಿಂಬಾಲಿಸುತ್ತಿದ್ದರೂ ತಲೆಕೆಡಿಸಿಕೊಳ್ಳದ ಜಾಂಬವಂತ ಗಾಂಭೀರ್ಯದಿಂದ ಮುಂದೆ ಸಾಗಿದ್ದಾನೆ.

ಸ್ವಲ್ಪ ದೂರ ಮುಂದೆ ಹೋಗಿ ರಸ್ತೆಯ ಮಧ್ಯದಲ್ಲೇ ನಿಂತ ಕರಡಿ, ಒಮ್ಮೆ ವಾಹನದ ಕಡೆಗೆ ತಿರುಗಿ ದಿಟ್ಟಿಸಿ ನೋಡಿದೆ. ಈ ದೃಶ್ಯವು ಸವಾರರಲ್ಲಿ ರೋಮಾಂಚನ ಮತ್ತು ಆತಂಕ ಮೂಡಿಸಿದೆ. ಬಳಿಕ ರಸ್ತೆ ಬದಿಯ ಪೊದೆಯತ್ತ ಸರಿದ ಕರಡಿ, ತಕ್ಷಣವೇ ತನ್ನ ಹಿಂಗಾಲುಗಳ ಮೇಲೆ ಎದ್ದು ನಿಂತು ವಾಹನವನ್ನು ಸೂಕ್ಷ್ಮವಾಗಿ ಗಮನಿಸಿದೆ. ಮನುಷ್ಯರಂತೆ ಎದ್ದು ನಿಂತು ನೋಡಿದ ಕರಡಿಯ ಈ ವಿಶಿಷ್ಟ ಭಂಗಿ ಅಚ್ಚರಿ ಮೂಡಿಸಿದೆ. ನಂತರ ನಿಧಾನವಾಗಿ ಹೆಜ್ಜೆ ಹಾಕುತ್ತಾ ದಟ್ಟ ಕಾಡಿನೊಳಗೆ ಕಣ್ಮರೆಯಾಗಿದೆ.

ವಾಹನದಲ್ಲಿದ್ದ ಚಾಲಕ ಈ ಇಡೀ ಅಪರೂಪದ ಕ್ಷಣಗಳನ್ನು ಹಾಗೂ ಕರಡಿಯ ಚಲನವಲನಗಳನ್ನು ಅತ್ಯಂತ ಜಾಣ್ಮಯಿಂದ ತಮ್ಮ ಮೊಬೈಲ್ ಕ್ಯಾಮೆರಾದಲ್ಲಿ ಸೆರೆಹಿಡಿದಿದ್ದಾರೆ. ಮುತ್ತೋಡಿ ಅರಣ್ಯ ಪ್ರದೇಶದಲ್ಲಿ ವನ್ಯಜೀವಿಗಳ ದರ್ಶನ ಸಾಮಾನ್ಯವಾದರೂ, ಇಷ್ಟು ಹತ್ತಿರದಲ್ಲಿ, ಅದೂ ಹೆಡ್‌ಲೈಟ್ ಬೆಳಕಿನಲ್ಲಿ ಕರಡಿಯು ಇಷ್ಟೊಂದು ವಿಭಿನ್ನವಾಗಿ ವರ್ತಿಸಿರುವುದು ತೀರಾ ಅಪರೂಪವಾಗಿದೆ.

Bear sighted on the main road of Muthodi Sanctuary

Share

Leave a comment

Leave a Reply

Your email address will not be published. Required fields are marked *

Don't Miss

ಚಾರ್ಮಾಡಿ ಘಾಟಿಯಲ್ಲಿ ಸಂಚಾರ ಸ್ಥಗಿತಗೊಂಡು ಟ್ರಾಫಿಕ್ ಜಾಮ್

ಚಿಕ್ಕಮಗಳೂರು:  ಜಿಲ್ಲೆಯ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟಿಯಲ್ಲಿ ಭಾರೀ ಗಾಳಿ-ಮಳೆಯ ಅಬ್ಬರ ಮುಂದುವರಿದಿದೆ. ನಿರಂತರ ಮಳೆಯಿಂದ ಬೃಹತ್ ಬಂಡೆಯೊಂದು ಹಾಗೂ ಮರ ರಸ್ತೆ ಮೇಲೆ ಧರೆಗುರುಳಿದ ಪರಿಣಾಮ ಸುಮಾರು ಅರ್ಧ ಗಂಟೆ...

ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ

ಕೊಪ್ಪ: ಪೊಲೀಸರ ಭರ್ಜರಿ ಕಾರ್ಯಾಚರಣೆಯಿಂದ ಇನ್ನೋವಾ ಕಾರಿನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಗೋವುಗಳ ರಕ್ಷಣೆ ಮಾಡಲಾಗಿದೆ. ನಂಬರ್ ಪ್ಲೇಟ್ ಇಲ್ಲದ ಇನ್ನೋವಾ ಕಾರಿನಲ್ಲಿ ಗೋವುಗಳ ಸಾಗಣೆಮಾಡುತ್ತಿರುವ ಖಚಿತ ಮಾಹಿತಿ ಮೇರೆಗೆ ಪೊಲೀಸರು ದಿಢೀರ್...

Related Articles

ಉಪ ಸಭಾಪತಿ ಸ್ಥಾನಕ್ಕೆ ಪ್ರಾಣೇಶ ರಾಜೀನಾಮೆ ಖಚಿತ

ಚಿಕ್ಕಮಗಳೂರು: ಉಪ ಸಭಾಪತಿ ಸ್ಥಾನಕ್ಕೆ ಎಂ,ಕೆ.ಪ್ರಾಣೇಶ್ ನಾಳೆ ರಾಜೀನಾಮೆನೀಡುತ್ತಾರೆ. ಕಳೆದ ನಾಲ್ಕುವರೆ ವರ್ಷಗಳಿಂದ ಪ್ರಾಣೇಶ್ ವಿಧಾನ...

ಬಹುಕೋಟಿ ರೂ.ಗಳ ಹಗರಣ ಪ್ರಕರಣದ ಸಿಬಿಐ-ಇಡಿ ತನಿಖೆಗೆ ತನಿಖೆ ಆಗ್ರಹ

ಚಿಕ್ಕಮಗಳೂರು : ವಿವಿಧ ಬ್ಯಾಂಕುಗಳಲ್ಲಿ ಬಡವರು, ಕೂಲಿ ಕಾರ್ಮಿಕರು, ಕೃಷಿಕರ ಹೆಸರಿನಲ್ಲಿ ಖಾತೆಗಳನ್ನು ತೆರೆದು ಬಹುಕೋಟಿ...

ಶಾಸಕಿ ನಯನ ನೈತಿಕತೆ ಇದ್ದರೆ ರಾಜೀನಾಮೆ ನೀಡಿ ಗೆದ್ದು ಬರಲಿ

ಚಿಕ್ಕಮಗಳೂರು: ಮೂಡಿಗೆರೆ ಶಾಸಕಿ ನಯನ ನೈತಿಕತೆ ಇದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ಮತ್ತೆ ಚುನಾವಣೆಯಲ್ಲಿ...

 ಹೊಸ ಬುಲೆಟ್ ಬೈಕ್‌ನಲ್ಲಿ ತೆರಳುತ್ತಿದ್ದ ವಿದ್ಯಾರ್ಥಿ ರಸ್ತೆ ಅಪಘಾತದಲ್ಲಿ ಸಾವು

ಚಿಕ್ಕಮಗಳೂರು: ಹೊಸ ಬುಲೆಟ್ ಬೈಕ್‌ನಲ್ಲಿ ಸ್ನೇಹಿತನನ್ನು ಕರೆತರಲು ತೆರಳುತ್ತಿದ್ದ 19 ವರ್ಷದ ವಿದ್ಯಾರ್ಥಿಯೊಬ್ಬ ರಸ್ತೆ ಅಪಘಾತದಲ್ಲಿ...