Home Crime News ಬೆಳಿಗ್ಗೆ ಬೆಡ್ ಶೀಟ್ ಮಾರಾಟಗಾರ : ಆಮೇಲೆ ಬೈಕ್ ಕಳ್ಳತನ
Crime News

ಬೆಳಿಗ್ಗೆ ಬೆಡ್ ಶೀಟ್ ಮಾರಾಟಗಾರ : ಆಮೇಲೆ ಬೈಕ್ ಕಳ್ಳತನ

Share
Share

ಚಿಕ್ಕಮಗಳೂರು / ಕಡೂರು :
ಬೀದಿ ಬೀದಿ ತಿರುಗಿ ಬೆಡ್ ಶೀಟ್ ಗಳನ್ನು ಮಾರಾಟ ಮಾಡುತ್ತಾ ಅಮಾಯಕನಂತೆ ವರ್ತಿಸುತ್ತಿದ್ದ ಅಜ್ಜಂಪುರ ತಾಲೂಕಿನ ಚನ್ನಾಪುರ ವಾಸಿ ಅರುಣಾ ಮಾಡುತ್ತಿದ್ದ ಸೈಡ್ ಬ್ಯುಸಿನೆಸ್ ಕೇಳಿ ಕಡೂರು ಪೊಲೀಸರು ಗಾಬರಿಯಾಗಿದ್ರು
ಪಟ್ಟಣದ ಸುತ್ತಮುತ್ತಲ ಪ್ರದೇಶಗಳಲ್ಲಿ ನಿಲ್ಲಿಸಿರುತ್ತಿದ್ದ ದ್ವಿಚಕ್ರ ವಾಹನಗಳನ್ನು ಕಳ್ಳತನ ಮಾಡಿ ಮಾರಾಟ ಮಾಡುತ್ತಿದ್ದ ಬೈಕ್ ಸಂಖ್ಯೆ ನಗಣ್ಯ, ಇದೀಗ 9 ಬೈಕ್ ಗಳನ್ನು ವಶಕ್ಕೆ ಪಡೆಸಿರುವ ಪೊಲೀಸರು 2 ಲಕ್ಷ 55 ಸಾವಿರ ಮೌಲ್ಯದ ವಸ್ತುಗಳನ್ನು ಸೀಜ್ ಮಾಡಿದ್ದಾರೆ.

ವಿವಿಧ ಆಯಾಮಗಳಲ್ಲಿ ವೈಜ್ಞಾನಿಕವಾಗಿ ತನಿಖೆ ನಡೆಸಿರುವ ಕಡೂರು ಪೊಲೀಸರು ಆರೋಪಿಯಾದ ಕೆ.ಅರುಣ್ @ ಸಡ್ಡೆ ಎಂಬುವವನನ್ನು ಬಂಧಿಸಿ ಆತನನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ. ಪ್ರಕರಣದ ತನಿಖೆಯಲ್ಲಿ ಕಡೂರು ಎಸೈಗಳಾದ ಪವನ್ ಕುಮಾರ್, ಅಜರುದ್ದೀನ್ ಧನಂಜಯ ಸಿಬ್ಬಂದಿಗಳಾದ ರಿಯಾಜ್, ದೇವರಾಜ್ ಬೀರೇಶ್ ಮಧು ಸೇರಿದಂತೆ ಜಿಲ್ಲಾ ಪೊಲೀಸ್ ಕಚೇರಿಯ ತಾಂತ್ರಿಕ ವಿಭಾಗದ ನಯಾಜ್, ಅಬ್ದುಲ್ ರಬ್ಬಾನಿ ತಂಡದಲ್ಲಿ ಇದ್ದರು. ಚಿಕ್ಕಮಗಳೂರು ಎಸ್ಪಿ ಡಾ ವಿಕ್ರಮ್ ಅಮಟೆ ಪ್ರಕರಣ ಭೇದಿಸಿದ ಎಲ್ಲರಿಗೂ ಮಾರ್ಗದರ್ಶನ ನೀಡಿ ಅಭಿನಂದಿಸಿದ್ದಾರೆ.

ಇದರೊಂದಿಗೆ ಕಡೂರು ಪಟ್ಟಣ ಹಾಗೂ ಸುತ್ತಮುತ್ತ ಹೆಚ್ಚುತ್ತಿದ್ದ ಬೈಕ್ ಕಳ್ಳತನ ಪ್ರಕರಣ ಭೇದಿಸುವಳ್ಳಿ ಕೊನೆಗೂ ಪೊಲೀಸರು ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಬೈಕ್ ಕಳ್ಳತನದ ಆತಂಕ ಇದೀಗ ಸ್ವಲ್ಪ ಕಡಿಮೆ ಆದಂತೆ ಆಗಿದೆ

Share

Leave a comment

Leave a Reply

Your email address will not be published. Required fields are marked *

Don't Miss

ಮುಸ್ಲಿಂ ಕುಟುಂಬ ಇಲ್ಲದ ಬಿ. ಹೊಸಹಳ್ಳಿ ಗ್ರಾಮದಲ್ಲಿ ಮೊಹರಂ ಆಚರಣೆ

ಚಿಕ್ಕಮಗಳೂರು: ಕಾಫಿನಾಡಿನ ಮೂಡಿಗೆರೆ ತಾಲ್ಲೂಕಿನ ಬಿ. ಹೊಸಹಳ್ಳಿ ಗ್ರಾಮದಲ್ಲಿ ಈ ಬಾರಿಯ ಮೊಹರಂ ಹಬ್ಬವು ಭಕ್ತಿ, ಸಂಭ್ರಮ ಹಾಗೂ ಅಭೂತಪೂರ್ವ ಕೋಮು ಸೌಹಾರ್ದತೆಗೆ ಸಾಕ್ಷಿಯಾಗಿದೆ. ಸುಮಾರು 100 ವರ್ಷಗಳ ಸುದೀರ್ಘ ಇತಿಹಾಸ...

ಜಿಲ್ಲಾ ಆಟದ ಮೈದಾನದ ಬಳಿ ಎ.ಎಸ್.ಐ ಮೇಲೆ ಹಲ್ಲೆ

ಚಿಕ್ಕಮಗಳೂರು: ಜಿಲ್ಲಾ ಆಟದ ಮೈದಾನದ ಗೇಟ್ ಮುಂಭಾಗದ ರಸ್ತೆಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗುವಂತೆ ಮಹೀಂದ್ರ ಥಾರ್ ಜೀಪನ್ನು ಅಡ್ಡವಾಗಿ ನಿಲ್ಲಿಸಿ ಗಲಾಟೆ ಮಾಡಿಕೊಳ್ಳುತ್ತಿದ್ದ ಇಬ್ಬರು ವ್ಯಕ್ತಿಗಳು, ಬುದ್ದಿ ಹೇಳಲು ಹೋದ ಎ.ಎಸ್.ಐ ಭುವನೇಶ್...

Related Articles

ಕುಂದೂರು ಫಾರೆಸ್ಟ್‌ನ ಹೆಬ್ಬಾಳ ಗದ್ದೆಯಲ್ಲಿ ಗಂಡು ಕಾಡಾನೆ ಸಾವು

​ಚಿಕ್ಕಮಗಳೂರು: ಜಿಲ್ಲೆಯ ಆಲ್ದೂರು ಅರಣ್ಯ ವಲಯದ ವ್ಯಾಪ್ತಿಯಲ್ಲಿ ಒಂಟಿ ಗಂಡು ಕಾಡಾನೆಯೊಂದು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿರುವ...

ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿ

ಶೃಂಗೇರಿ: ನಕ್ಸಲ್ ನಾಯಕ ಬಿ.ಜಿ. ಕೃಷ್ಣಮೂರ್ತಿಯನ್ನು ಕೇರಳ ಪೊಲೀಸರು ಶೃಂಗೇರಿ ಜೆಎಂಎಫ್ಸಿ ನ್ಯಾಯಾಲಯಕ್ಕೆ ಶುಕ್ರವಾರ  ಹಾಜರುಪಡಿಸಿದರು....

ಜಿಲ್ಲಾ ನ್ಯಾಯಾಲಯಕ್ಕೆ ಬಾಂಬ್ ಬೆದರಿಕೆ

ಚಿಕ್ಕಮಗಳೂರು:  ಜಿಲ್ಲಾ ನ್ಯಾಯಾಲಯಕ್ಕೆ ಬಂದಿರುವ ಬಾಂಬ್ ಬೆದರಿಕೆ ಇ-ಮೇಲ್ ಆತಂಕಕ್ಕೆ ಕಾರಣವಾಗಿದೆ. ಮಧ್ಯಾಹ್ನ 1.30 ರಿಂದ...

ಅತ್ತಿಗೆಯನ್ನೇ ಹತ್ಯೆಗೈದ ಆರೋಪಿಗೆ 7 ವರ್ಷಗಳ ಕಠಿಣ ಜೈಲು ಶಿಕ್ಷೆ

ಚಿಕ್ಕಮಗಳೂರು:  ಜಿಲ್ಲೆಯ ತರೀಕೆರೆ ತಾಲ್ಲೂಕಿನ ಬಾವಿಕೆರೆ ಗ್ರಾಮದಲ್ಲಿ ನಡೆದಿದ್ದ ಭೀಕರ ಕೊಲೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ, ಅತ್ತಿಗೆಯನ್ನೇ...