Home Latest News ಸಿ.ಟಿ ರವಿ ನಗರದ ಮನೆ ಮನೆಗೆ ತೆರಳಿ ಭಿಕ್ಷಾಟನೆ
Latest News

ಸಿ.ಟಿ ರವಿ ನಗರದ ಮನೆ ಮನೆಗೆ ತೆರಳಿ ಭಿಕ್ಷಾಟನೆ

Share
Share

ಚಿಕ್ಕಮಗಳೂರು : ನಾಳೆ ದತ್ತ ಜಯಂತಿ ಕೊನೆ ದಿನ ಹಿನ್ನೆಲೆಯಲ್ಲಿ ಇಂದು ದತ್ತ ಮಾಲಾಧಾರಿಗಳು ಮನೆ ಮನೆಗೆ ತೆರಳಿ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹಿಸಿದರು. ಕಳೆದ 8 ದಿನಗಳಿಂದ ಮಾಲೆ ಧರಿಸಿ ವೃತದಲ್ಲಿದ್ದ ಭಕ್ತರು ಇಂದು ಇರುಮುಡಿಗೆ ಅಕ್ಕಿ ಬೆಲ್ಲ ಸಂಗ್ರಹ ಮಾಡಿದರು.

ದತ್ತಜಯಂತಿ ಹಿನ್ನೆಲೆಯಲ್ಲಿ
ಮಾಲಾಧಾರಿಯಾಗಿರುವ ಸಿ.ಟಿ.ರವಿ ಹಾಗೂ ಬಿಜೆಪಿಯ ಕೆಲ ಮುಖಂಡರು ಭಿಕ್ಷಾಟನೆ ನಡೆಸಿದರು,
ಚಿಕ್ಕಮಗಳೂರು ನಗರದಲ್ಲಿ ಭಿಕ್ಷಾಟನೆ ಮೂಲಕ ದತ್ತ ಭಕ್ತರು ಪಡಿ ಸಂಗ್ರಹ ಮಾಡಿದರು

ಸಿ.ಟಿ.ರವಿ ಸೇರಿ ಹಿಂದುಪರ ಸಂಘಟನೆಗಳ ಮಾಲಾಧಾರಿಗಳಿಂದ ಭಿಕ್ಷಾಟನೆ ನಡೆಸಲಾಯಿತು, ನಾರಾಯಣಪುರ ರಾಘವೇಂದ್ರ ಮಠದ ರಸ್ತೆಯಲ್ಲಿ ಮನೆ-ಮನೆಗೆ ತೆರಳಿ ಭಿಕ್ಷಾಟನೆ ಮೂಲಕ ಪಡಿ ಸಂಗ್ರಹಿದರು, ಪಡಿ ರೂಪದಲ್ಲಿ ಅಕ್ಕಿ, ಬೆಲ್ಲ, ಕಾಯಿಯನ್ನು ಸ್ಥಳೀಯರು ನೀಡಿದರು, ದತ್ತ ಭಜನೆಯೊಂದಿಗೆ ಮನೆಮನೆಗೆ ತೆರಳಿ ಸಿ.ಟಿ ರವಿ ಪಡಿ ಸಂಗ್ರಹ ಮಾಡಿದರು, ಪಡಿಯನ್ನ ನಾಳೆ ಇರುಮುಡಿ ರೂಪದಲ್ಲಿ ದತ್ತಾತ್ರೇಯರಿಗೆ ಮಾಲಾಧಾರಿಗಳು ಅರ್ಪಿಸಲಿದ್ದಾರೆ, ಚಿಕ್ಕಮಗಳೂರು ನಗರದಲ್ಲಿ ದತ್ತಭಕ್ತರು ಪಡಿ ಸಂಗ್ರಹಿಸಿದ್ದಾರೆ

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...