Home Latest News ಬಳ್ಳಾರಿ ಬಾಣಂತಿರ ಸಾವಿಗೆ ಕಾರಣವಾದ ದ್ರಾವಣ ಇಲ್ಲೂ ಕೊಡಲಾಗ್ತಿದ್ಯಾ ?
Latest News

ಬಳ್ಳಾರಿ ಬಾಣಂತಿರ ಸಾವಿಗೆ ಕಾರಣವಾದ ದ್ರಾವಣ ಇಲ್ಲೂ ಕೊಡಲಾಗ್ತಿದ್ಯಾ ?

Share
Share

ಚಿಕ್ಕಮಗಳೂರು : ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಬಳ್ಳಾರಿ, ಬೆಳಗಾವಿ ವಿಜಾಪುರದಲ್ಲಿ ನಡೆದಿದ್ದು ಚಿಕ್ಕಮಗಳೂರಿನಲ್ಲಿ ಕೂಡ ಇಂತಹ ಪ್ರಕರಣ ಸಂಭವಿಸಬಹುದು ಎಂಬ ಶಂಕೆ ಇದೆ. ಶಂಕರಪುರದ ಕೂಲಿ ಕಾರ್ಮಿಕ ಪ್ರವೀಣ್ ಎಂಬುವರ ಪತ್ನಿ ಸವಿತಾ ಎಂಬುವವರು ಎರಡನೇ ಹೆರಿಗೆಗೆ ಮೊನ್ನೆ ಚಿಕ್ಕಮಗಳೂರು ಮಲ್ಲೇಗೌಡ ಸರ್ಕಾರಿ ಆಸ್ಪತ್ರೆಗೆ ಅಡ್ಮಿಟ್ ಆಗಿದ್ದು ನಿನ್ನೆ ಡಾ.ಲೋಹಿತ್ ಎಂಬುವವರು ಹೆರಿಗೆ ಮಾಡಿಸಿ ಬಾಣಂತಿಗೆ ಡ್ರಿಪ್ ಹಾಕಿದ ತಕ್ಷಣ ಇದ್ದಕ್ಕಿದ್ದಂತೆ ಹೃದಯಾಘಾತವಾಗಿದ್ದು ಸಾವು ಬದುಕಿನ ಮಧ್ಯೆ ಸೆಣಸಾಡುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಬಳ್ಳಾರಿಯಲ್ಲಿ ಉಪಯೋಗಿಸಿರುವ ಕಂಪನಿಯ ಪಶ್ಚಿಮ ಭಂಗ ಫಾರ್ಮಾಸಿಟಿಕಲ್ ಡ್ರಿಪ್ ಉಪಯೋಗಿಸಿರುವುದಾಗಿ ತಿಳಿದುಬಂದಿದೆ. ಕಳೆದ ಕೆಲ ದಿನಗಳಿಂದ ಪಶ್ಚಿಮ ಭಂಗ ಕಂಪನಿಯ ಸ್ಟಾಕ್‌ ತರಿಸಿರುವುದು ಖಚಿತವಾಗಿದ್ದು ಮೊನ್ನೆ ಕೂಡ ಜಿಲ್ಲಾ ಆಸ್ಪತ್ರೆಗೆ 51 ಬಾಕ್ಸ್ ಗಳಲ್ಲಿ 3753 ಬಾಟಲ್ ಸರಬರಾಜು ಆಗಿದೆ. ಇದನ್ನು ಸವಿತಾರಿಗೆ ನೀಡಿರಬಹುದು ಎಂದು ಹೇಳಲಾಗುತ್ತಿದೆ. ಇದರ ಸತ್ಯಾಸತ್ಯತೆ ತನಿಖೆಯಿಂದ ಮಾತ್ರ ಗೊತ್ತಾಗಲಿದೆ. ಇದರಿಂದಾಗಿ ಮತ್ತಷ್ಟು ಜನರಿಗೆ ತೊಂದರೆ ಆಗಬಹುದು ಎನ್ನಲಾಗಿದೆ.

ಬೆಳಗಾವಿಯಲ್ಲಿ ವೈದ್ಯಕೀಯ ಸಚಿವರು ಈ ಬಗ್ಗೆ ಸಭೆ ಕರೆದಿದ್ದು ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಮೋಹನ್ ಕುಮಾರ್ ಯಾರ ಮೊಬೈಲ್ ಕರೆ ಸ್ವೀಕರಿಸುತ್ತಿಲ್ಲ .ಜಿಲ್ಲಾ ಆಸ್ಪತ್ರೆಯಿಂದ ಕೆ.ಅರ್.ಎಸ್ ಆಸ್ಪತ್ರೆಗೆ ಸವಿತಾರನ್ನು ಸಿಫ್ಟ್ ಮಾಡಿದ್ದು ಅಲ್ಲಿ ಕೋಮದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಳೆದ ಐದು ವರ್ಷಗಳಿಂದ ಜಿಲ್ಲಾ ಆಸ್ಪತ್ರೆಯಲ್ಲಿರುವ ಮೋಹನ್ ಕುಮಾರ್ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ನೊಂದವರು ಒತ್ತಾಯ ಮಾಡಿದ್ದಾರೆ.

Share

Leave a comment

Leave a Reply

Your email address will not be published. Required fields are marked *

Don't Miss

30 ಲಕ್ಷ ರೂಪಾಯಿ ಹಣ ನೀಡುವಂತೆ ಬ್ಲಾಕ್‌ ಮೆಲ್

ಚಿಕ್ಕಮಗಳೂರು: ಎಡಿಟ್ ಮಾಡಿದ ಗೃಹಿಣಿಯೊಬ್ಬರ ಫೋಟೋಗಳನ್ನು ಅವರ ಮೊಬೈಲ್‌ಗೇ ಕಳುಹಿಸಿ, ಬರೋಬ್ಬರಿ 30 ಲಕ್ಷ ರೂಪಾಯಿ ಹಣ ನೀಡುವಂತೆ ಕಿಡಿಗೇಡಿಗಳು ಬೇಡಿಕೆಯಿಟ್ಟಿದ್ದ ಘಟನೆ ಬೆಳಕಿಗೆ ಬಂದಿದೆ. ಒಂದು ವೇಳೆ ಹಣ ನೀಡದಿದ್ದರೆ...

ವಿವಾಹಿತ ಮಹಿಳೆಗಾಗಿ ನಡೆದ ಜಗಳದಲ್ಲಿ ಕೈ ಕಟ್

ಎನ್.ಆ‌ರ್.ಪುರ: ವಿವಾಹಿತ ಮಹಿಳೆಯೊಬ್ಬರಿಗಾಗಿ ಇಬ್ಬರು ವ್ಯಕ್ತಿಗಳು ಲಾಂಗು ಮಚ್ಚಿನಿಂದ ಬಡಿದಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆ‌ರ್.ಪುರ ತಾಲೂಕಿನ ಬಾಳೆಹೊನ್ನೂರು ಸಮೀಪದ ಅಡಿಗೆಬೈಲು ಗ್ರಾಮದಲ್ಲಿ ನಡೆದಿದೆ. ಗಂಡನಿಂದ ದೂರವಿದ್ದ ಮಹಿಳೆಯೊಬ್ಬರ ವಿಚಾರವಾಗಿ ಶೇಷಗಿರಿ...

Related Articles

5 ದಶಕದ ಬಳಿಕ ನಿಡಘಟ್ಟ ಆಂಜನೇಯಸ್ವಾಮಿ ದೇವಾಲಯಕ್ಕೆ ದಲಿತರ ಪ್ರವೇಶ

ಚಿಕ್ಕಮಗಳೂರು: ಇತಿಹಾಸ ಪ್ರಸಿದ್ಧ ಗಟಾಗಟಿ ದೇವರು ಎಂದು ಕರೆಯಲ್ಪಡುವ ಕಡೂರು ತಾಲೂಕಿನ ನಿಡಘಟ್ಟದ ಶ್ರೀ ಆಂಜನೇಯಸ್ವಾಮಿ ದೇವಾಲಯಕ್ಕೆ...

ದೇಶ ವ್ಯಾಪ್ತಿ ಛಾತ್ರೋನ್ ಕಿ ಗೂಂಚ್ ವಿದ್ಯಾರ್ಥಿ ಆಂದೋಲನ

ಚಿಕ್ಕಮಗಳೂರು: ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ನಾಯಕರ ನೇತೃತ್ವದಲ್ಲಿ ಛಾತ್ರೋನ್ ಕಿ ಗೂಂಚ್ ಎಂಬ ದೇಶ ವ್ಯಾಪಿ...

ಕುಡಿಯುವ ನೀರು-ಜಾನುವಾರು ಮೇವಿಗೆ ಕೊರತೆಯಾಗದಂತೆ ಕ್ರಮಕ್ಕೆ ಸೂಚನೆ

ಚಿಕ್ಕಮಗಳೂರು: ಕುಡಿಯುವ ನೀರು, ಜಾನುವಾರುಗಳ ಮೇವಿಗೆ ಕೊರತೆಯಾಗದಂತೆ ಕ್ರಮ ಕೈಗೊಳ್ಳುವಂತೆ ಇಂಧನ, ಪ್ರವಾಸೋದ್ಯಮ ಹಾಗೂ ಚಿಕ್ಕಮಗಳೂರು...

ಗೃಹಜ್ಯೋತಿ ಯೋಜನೆ ಅರ್ಹ ಗುರುತಿಸುವ ಉದ್ದೇಶದಿಂದ ಪರಿಷ್ಕರಣೆ

ಚಿಕ್ಕಮಗಳೂರು: ಸರ್ಕಾರ ಗೃಹಜ್ಯೋತಿ ಯೋಜನೆಯನ್ನು ಸಾರಾಸಗಟಾಗಿ ಪರಿಷ್ಕರಿಸುವ ಅಥವಾ ಕಡಿತಗೊಳಿಸುವ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು...