Home namma chikmagalur ಒಕ್ಕಲಿಗರ ಹೆಮ್ಮೆಯ ಬೆಳ್ಳಿ ಭವನ ಲೋಕಾರ್ಪಣೆಗೆ ಸಿದ್ದ
namma chikmagalur

ಒಕ್ಕಲಿಗರ ಹೆಮ್ಮೆಯ ಬೆಳ್ಳಿ ಭವನ ಲೋಕಾರ್ಪಣೆಗೆ ಸಿದ್ದ

Share
Share

ಚಿಕ್ಕಮಗಳೂರು : ಜಿಲ್ಲಾ ಒಕ್ಕಲಿಗರ ಸಂಘವು 25 ವರ್ಷಗಳ ಹಿಂದೆ ವಿಜಯಪುರದಲ್ಲಿ ಕಲ್ಯಾಣ ಮಂಟಪ ನಿರ್ಮಾಣ ಮಾಡಿದ್ದ ಸವಿನೆನಪಿಗಾಗಿ “ಬೆಳ್ಳಿ ಭವನ ” ವನ್ನು ಬಾಲಗಂಗಾಧರ ಸ್ವಾಮೀಜಿ ವೃತ್ತದಲ್ಲಿ ವಾಣಿಜ್ಯ ಸಂಕೀರ್ಣ (ಮಾಲ್ )ನಿರ್ಮಿಸಿ ಹಿರಿಯರನ್ನು ಸ್ಮರಿಸುವ ಕೆಲಸ ಎಲ್ಲರೂ ಮೆಚ್ಚುವಂತದ್ದು.

1937 ರಲ್ಲಿ ತಾಲ್ಲೂಕು ಒಕ್ಕಲಿಗರ ಸಂಘ ಪ್ರಾರಂಭವಾಗಿ 80_90 ರ ದಶಕದಲ್ಲಿ ಹಿರಿಯರ ದೂರದೃಷ್ಟಿ ದಾನ ಮತ್ತು ಶ್ರಮದಿಂದ ಜಿಲ್ಲೆಯಲ್ಲಿ ಬೃಹತ್ ಕಲ್ಯಾಣ ಮಂಟಪ ನಿರ್ಮಾಣ ಮಾಡಲಾಯಿತು.
ಪ್ರಸ್ತುತ ಟಿ.ರಾಜಶೇಖರ ಅಧ್ಯಕ್ಷತೆಯಲ್ಲಿ ಪದಾಧಿಕಾರಿಗಳು ಮತ್ತು ಹಿರಿಯರ ಮಾರ್ಗದರ್ಶನದಲ್ಲಿ ಹತ್ತು ಕೋಟಿ ವೆಚ್ಚದ ಕಟ್ಟಡ ನಾಳೆ ಆದಿಚುಂಚನಗಿರಿ ಮಠದ ಶ್ರೀ ನಿರ್ಮಲಾನಂದ ಸ್ವಾಮೀಜಿ ಯವರ ಸಾನಿಧ್ಯದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಸೇರಿದಂತೆ ಹಲವು ಜನಪ್ರತಿನಿಧಿಗಳು ಭಾಗವಹಿಲಿದ್ದಾರೆ.
1937 ರಲ್ಲಿ ಒಕ್ಕಲಿಗರ ವಿದ್ಯಾರ್ಥಿಗಳು ಬಾಳೆಹಳ್ಳಿ ನಾಗಮ್ಮ ಹೆಗ್ಗಡತಿಯವರ ನಿವಾಸದಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿಗಳನ್ನು ಮಾತನಾಡಿಸಲು ಉಳಿಕೆರೆ ದೇವೇಗೌಡ ಸೇರಿದಂತೆ ಹಲವು ಹಿರಿಯರು ಬಂದು ಹೋಗುತ್ತಿದ್ದರು ಅಲ್ಲಿದ್ದ ಒಕ್ಕಲಿಗರ ವಿದ್ಯಾರ್ಥಿ ನಿಲಯ ಎಂಬ ಬೋರ್ಡ್ ತಾಲ್ಲೂಕು ಒಕ್ಕಲಿಗರ ಸಂಘ ಪ್ರಾರಂಭವಾಗಲು ಕಾರಣವಾಯಿತು ಉಳಿಕೆರೆ ದೇವೇಗೌಡ ಅಧ್ಯಕ್ಷರಾದರೆ ಕಾರ್ಯದರ್ಶಿಯಾಗಿ ಕಳವಾಸೆ ಅಣ್ಣೇಗೌಡರಾಗಿದ್ದರು ಮುಂದೆ 1962 ರಲ್ಲಿಜಿಲ್ಲಾಒಕ್ಕಲಿಗರ ಸಂಘವಾಗಿ ಇಂದು ಬೃಹತ್ ಒಕ್ಕಲಿಗರ ಸಂಘವಾಗಿ ಬೆಳೆದಿರುವುದು ದಾಖಲೆ.ಸಣ್ಣ ಸಿದ್ದೇಗೌಡ ಅಧ್ಯಕ್ಷರಾಗಿ ಸಣ್ಣ ತಮ್ಮೇಗೌಡರು ಕಾರ್ಯದರ್ಶಿ ಯಾಗಿ ಹಲವು ಹಿರಿಯರ ಶ್ರಮದಿಂದ 1999 ರಲ್ಲಿ ವಿಜಯಪುರದಲ್ಲಿ ನಿರ್ಮಾಣ ಮಾಡಿದ ಕಲ್ಯಾಣ ಮಂಟಪ ಸ್ಮರಣೀಯ.
ಒಕ್ಕಲಿಗರ ಸಂಘಕ್ಕೆ ಜಾಗ ಪಡೆದ ಹೋರಾಟ ಕೂಡ ಮರೆಯುವಂತಿಲ್ಲ ಜಾನಪದ ವಿದ್ವಾಂಸ ಜಿಲ್ಲಾಧಿಕಾರಿ ಹೆಚ್.ಎಲ್.ನಾಗೇಗೌಡ ಸಹಕಾರವನ್ನು ಸ್ಮರಿಸುತ್ತಾರೆ.
1962 ರಲ್ಲಿ ಅಂದಿನ ಮುಖ್ಯಮಂತ್ರಿ ನಿಜಲಿಂಗಪ್ಪ ವಿದ್ಯಾರ್ಥಿ ನಿಲಯಕ್ಕೆ ಅಡಿಗಲ್ಲು ಹಾಕಿ ಅವರೇ ಉದ್ಘಾಟಿಸಿದ್ದು ಮತ್ತು 1999 ರಲ್ಲಿ ಮುಖ್ಯಮಂತ್ರಿ ಜೆ.ಹೆಚ್.ಪಟೇಲರು ಕಲ್ಯಾಣ ಮಂಟಪ ಉದ್ಘಟಿಸಿದ್ದು ಕೂಡ ವಿಶೇಷ ಎನ್ನುತ್ತಾರೆ ನಿರ್ದೇಶಕ ಚಂದ್ರಪ್ಪ.
ಜನಪರ ಮತ್ತು ವಿಧ್ಯಾರ್ಥಿಗಳ ಹಿತಕಾಯುವಲ್ಲಿ ಒಕ್ಕಲಿಗರ ಸಂಘ ಶ್ರಮಿಸುತ್ತಿರುವುದನ್ನು ಅಭಿನಂದಿಸಲೇ ಬೇಕು ಸಂಘವು ಇನ್ನಷ್ಟು ಮತ್ತಷ್ಟು ಉನ್ನತವಾಗಿ ಬೆಳೆಯಲಿ ಬೆಳಗಲಿ.

Share

Leave a comment

Leave a Reply

Your email address will not be published. Required fields are marked *

Don't Miss

ಜೀವಾಣು ಹೆಚ್ಚಿಸುವ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕು

ಚಿಕ್ಕಮಗಳೂರು: ಮಣ್ಣು ರೋಗಯುಕ್ತವಾಗಿದ್ದು, ಅದಕ್ಕೆ ಬೇಕಿರುವ ಜೀವಾಣುಗಳನ್ನು ಹೆಚ್ಚಿಸುವ ಮೂಲಕ ಮಣ್ಣಿನ ಫಲವತ್ತತೆ ಕಾಪಾಡಿಕೊಳ್ಳಬೇಕಾದ ಅನಿವಾರ್ಯ ಇದೆ’ ಎಂದು ಕನ್ನೇರ ಮಠದ ಅದೃಶ್ಯ ಕಾಡಸಿದ್ದೇಶ್ವರ ಸ್ವಾಮೀಜಿ ತಿಳಿಸಿದರು. ಸಾವಯವ ರೈತರ ಬಳಗದಿಂದ...

ಅಡ್ಡ ಮತದಾನದ ಸತ್ಯಶೋಧನಾ ಸಮಿತಿ ವರದಿ ಸಿದ್ದ

ಚಿಕ್ಕಮಗಳೂರು: ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನದ ಹಿನ್ನೆಲೆಯಲ್ಲಿ ಬಿಜೆಪಿ ಹೈಕಮಾಂಡ್ ರಚಿಸಿರುವ ಸತ್ಯಶೋಧನಾ ಸಮಿತಿಯು ತನ್ನ ಪ್ರಾಥಮಿಕ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದೆ. ಸಮಿತಿಯ ಸದಸ್ಯರಾದ ಸಿ.ಟಿ. ರವಿ ಅವರು ಚಿಕ್ಕಮಗಳೂರಿನಲ್ಲಿ ಈ...

Related Articles

ಸ್ವಚ್ಛ ಪರಿಸರ ಉಳಿಸಿ ಬೆಳೆಸುವ ಹೊಣೆಗಾರಿಕೆ ನಮ್ಮೆಲ್ಲರ ಮೇಲಿದೆ

ಚಿಕ್ಕಮಗಳೂರು: ಮಲೆನಾಡಿನ ನಿಸರ್ಗದತ್ತ ಸೌಂದರ್ಯ ಮತ್ತು ಸ್ವಚ್ಛ ಪರಿಸರವನ್ನು ಉಳಿಸಿ ಬೆಳೆಸುವ ಮಹತ್ತರವಾದ ಹೊಣೆಗಾರಿಕೆ ನಮ್ಮೆಲ್ಲರ...

ಪ್ರವಾಹ ಪರಿಸ್ಥಿತಿ ಎದುರಿಸುವ ಅಣಕು ಪ್ರದರ್ಶನ

ಚಿಕ್ಕಮಗಳೂರು: ಕಾಫಿನಾಡಿನ ಹಿರೇಕೊಳಲೆ ಕೆರೆಯಲ್ಲಿ ಪ್ರವಾಹ ಪರಿಸ್ಥಿತಿಯನ್ನು ಎದುರಿಸುವ ನಿಟ್ಟಿನಲ್ಲಿ ಜಿಲ್ಲಾಡಳಿತ ಹಾಗೂ ಅಗ್ನಿಶಾಮಕ ಮತ್ತು...

ಯುವಜನತೆ ಮಾದಕ ವಸ್ತು ಮುಕ್ತ ಸಮಾಜ ನಿರ್ಮಾಣಕ್ಕೆ ಮುಂದಾಗಲಿ

ಚಿಕ್ಕಮಗಳೂರು: ಇಂದಿನ ಸಮಾಜದಲ್ಲಿ ಮಾದಕ ದ್ರವ್ಯಗಳ ಹಾವಳಿ ಹೆಚ್ಚಾಗುತ್ತಿದ್ದು, ಇದು ಯುವ ಪೀಳಿಗೆಯ ಭವಿಷ್ಯ ಹಾಗೂ...

ಭಿಕ್ಷುಕಿಯನ್ನು ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ

ಚಿಕ್ಕಮಗಳೂರು:  ಕ್ಷುಲ್ಲಕ ಕಾರಣಕ್ಕೆ ಸೈಜುಕಲ್ಲು ಎತ್ತಿಹಾಕಿ ಮಹಿಳೆಯನ್ನು ಕೊಲೆ ಮಾಡಿದ ಆರೋಪಿಗೆ ಇಲ್ಲಿನ ಒಂದನೇ ಅಧಿಕ...